nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025
    Facebook Twitter Instagram
    ಟ್ರೆಂಡಿಂಗ್
    • ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!
    • ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ
    • ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ
    • ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ
    • ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ
    • ಬಮೂಲ್​​ ರೈತರ ಸಂಸ್ಥೆ ಇದನ್ನು ಬೆಳೆಸುವುದು ನಮ್ಮ ಕರ್ತವ್ಯ: ಡಿ.ಕೆ. ಸುರೇಶ್​
    • ಸರೋಜಾದೇವಿ ಎಂದ ತಕ್ಷಣ ಚೆನ್ನಮ್ಮ, ಬಬ್ರುವಾಹನ ನೆನಪಾಗುತ್ತದೆ: ಸಿಎಂ ಸಂತಾಪ
    • ಅಭಿನಯ ಸರಸ್ವತಿ ಬಿ.ಸರೋಜಾದೇವಿ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನೈತಿಕ ಚಟುವಟಿಕೆಗಳ ತಾಣವಾದ ಸಾರ್ವಜನಿಕ ಗ್ರಂಥಾಲಯ!
    ಕೊರಟಗೆರೆ June 15, 2025

    ಅನೈತಿಕ ಚಟುವಟಿಕೆಗಳ ತಾಣವಾದ ಸಾರ್ವಜನಿಕ ಗ್ರಂಥಾಲಯ!

    By adminJune 15, 2025No Comments1 Min Read
    koratagere

    ವರದಿ : ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ಪಟ್ಟಣದ ಸಾರ್ವಜನಿಕ ಗ್ರಂಥಾಲಯ ಆವರಣದಲ್ಲಿ ರಾತ್ರಿಯಾದರೆ ಸಾಕು ಕುಡುಕರ ಅಡ್ಡವಾಗಿಬಿಡುತ್ತೆ. ಇದರಿಂದ ಮಹಿಳೆಯರಿಗೆ ಮತ್ತು ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ.


    Provided by
    Provided by

    ಕೊರಟಗೆರೆ ಶಾಖಾ ಗ್ರಂಥಾಲಯ ಈಗ ಕುಡುಕರ ಅಡ್ಡವಾಗಿ ಮಾರ್ಪಟ್ಟಿದೆ. ರಾತ್ರಿಯಾದರೆ ಸಾಕು ಮಧ್ಯಪಾನ, ಧೂಮಪಾನ, ಗುಟ್ಕ ಇತರೆ ಅನೈತಿಕ ಚಟವಟಿಕೆ ತಾಣವಾಗಿದ್ದು, ರಾತ್ರಿ ಅಪರಿಚಿತ ವ್ಯಕ್ತಿಗಳು ಗುಟ್ಕ ವಸ್ತುಗಳನ್ನು ಸೇವಿಸಿ ಗ್ರಂಥಾಲಯ ಮೆಟ್ಟಿಲು ಮತ್ತು ನೆಲದ ಮೇಲೆ ಉಗುಳಿರುವುದು ದುರ್ವಾಸನೆ ಬೀರುತ್ತಿದ್ದು ಅನಾರೋಗ್ಯಕ್ಕೆ ಎಡೆಮಾಡಿ ಕೊಟ್ಟಿದೆ.

    ಗುಟ್ಕ ವಸ್ತು ತಿಂದು ಉಗುಳಿದ ಮತ್ತು ಮದ್ಯಪಾನ ಸೇವಿಸಿ, ವಾಂತಿಯನ್ನು ಮಾಡಿರುವುದನ್ನ ಗ್ರಂಥಾಲಯ ಸಿಬ್ಬಂದಿಗಳು ಸ್ವಚ್ಚತೆ ಮಾಡುವಂತಹ ಸ್ಥಿತಿ ಸೃಷ್ಟಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ, ಇಂತಹ ಘಟನೆಗಳು ಮರುಕಳಿಸುತ್ತೀವೆ ಎಂದು ಓದುಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸಿಸಿಟಿವಿ ಕಣ್ಗಾವಲಿನಲ್ಲಿಯೇ ಈ ಘಟನೆ:

    ಸಮಾಜ ಕಲ್ಯಾಣ ಇಲಾಖೆ ಬಳಿ ಇರುವ ಸಿಸಿ ಟಿವಿಯು ಗ್ರಂಥಾಲಯವನ್ನು ವೀಕ್ಷಿಸಲಿದೆ. ಸಿಸಿ ಟಿವಿ ಭಯವಿಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಧೂಮಪಾನ, ಇತರೆ ವಸ್ತುಗಳನ್ನು ಬಳಸಿ ಗ್ರಂಥಾಲಯ ಮೆಟ್ಟಿಲು ಮುಂದೆಯೇ ಉಗುಳುತ್ತಾರೆ. ಕಚೇರಿ ಅವಧಿಗೆ ಬಂದಂತಹ ಸಿಬ್ಬಂದಿಗಳೇ ಸ್ವಚ್ಛಗೊಳಿಸುವುದು ಅನಿವಾರ್ಯವಾಗಿದೆ.

    ತೆರೆಮರೆಯಲ್ಲಿರುವ ಸಾರ್ವಜನಿಕ ಗ್ರಂಥಾಲಯ

    ಕೊರಟಗೆರೆ ಸರ್ಕಾರಿ ಬಸ್ ನಿಲ್ದಾಣದ ತೆರೆಮರೆಯಿಂದ ಕುಡುಕರಿಗೆ ಅವಕಾಶ ಕಲ್ಪಿಸದಂತಾಗಿದೆ. ಕಾನೂನಿನ  ಭಯವಿಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಮಧ್ಯಪಾನ ಮಾಡುವವರಿಗೆ  ಅಧಿಕಾರಿಗಳು ಕಾನೂನಿನ ಪಾಠ ಕಲಿಸಬೇಕಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

    ಗ್ರಂಥಾಲಯ ಆವರಣ ರಾತ್ರಿಯಾದರೆ ಕುಡುಕರ ಅಡ್ಡವಾಗಿದೆ. ಉಪ್ಪಿನಕಾಯಿ, ಮಧ್ಯಪಾನ ಖಾಲಿ ಬಾಟಲಿಗಳು, ಬಳಸಿದ ಸಿಗರೇಟ್‌ಗಳು, ಗುಟ್ಕಾ ವಸ್ತು, ಪ್ಲಾಸ್ಟಿಕ್ ಬಾಟಲ್‌ ಗಳ ಜೊತೆ ವಾಂತಿ ಮತ್ತು ಉಗುಳಿರುವುದನ್ನು ಸ್ವಚ್ಛಗೊಳಿಸುವುದು ನಮ್ಮ ಕೆಲಸನಾ.? ಇದಕ್ಕೇಲ್ಲಾ ಸಂಬಂಧ ಪಟ್ಟ ಅಧಿಕಾರಿಗಳು ಕಡಿವಾಣ ಹಾಕಿ ಓದುಗರಿಗೆ ಪ್ರೋತ್ಸಾಹಿಸಬೇಕಿದೆ.

    — ಹೆಚ್.ಆರ್ ಲಕ್ಷ್ಮಿ, ಗ್ರಂಥಪಾಲಕಿ, ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕರ್ನಾಟಕ ರಾಜ್ಯ ಅಹಿಂದ ಜನಪರ ವೇದಿಕೆ ನೂತನ ತಾಲ್ಲೂಕು ಘಟಕ ಉದ್ಘಾಟನೆ

    July 13, 2025

    ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಿ.ಡಿ.ಪ್ರಭಾಕರ್ ಅವಿರೋಧ ಆಯ್ಕೆ

    July 12, 2025

    ಅಕ್ಕಿರಾಂಪುರ ಗ್ರಾಮದ ಕಾರ್ಡಿನಲ್ ಶಾಲೆಯಲ್ಲಿ ಅಕ್ಷರಾಭ್ಯಾಸ ಮಾಡಿದ ಮಕ್ಕಳು

    July 11, 2025
    Our Picks

    ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ

    July 14, 2025

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ರಾಯಚೂರು: ಕಸ ವಿಲೇವಾರಿ ವಾಹನಗಳನ್ನು ಕದ್ದಿರುವ ಘಟನೆ ಕವಿತಾಳ ಪಟ್ಟಣ ಪಂಚಾಯತಿ ಕಚೇರಿ ಆವರಣದಲ್ಲಿ ನಡೆದಿದೆ. ಪಟ್ಟಣ ಪಂಚಾಯತಿ ಕಚೇರಿ…

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025

    ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ

    July 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.