nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026

    ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್

    April 27, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    • ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್
    • ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು
    • ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    • ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ
    • ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾನೂನು ಪಾಲನೆ ಮಾಡದಿದ್ದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ: ಗೃಹ ಸಚಿವ ಪರಮೇಶ್ವರ
    ರಾಜ್ಯ ಸುದ್ದಿ July 9, 2024

    ಕಾನೂನು ಪಾಲನೆ ಮಾಡದಿದ್ದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ: ಗೃಹ ಸಚಿವ ಪರಮೇಶ್ವರ

    By adminJuly 9, 2024No Comments2 Mins Read
    g parameshwar

    ಬೆಂಗಳೂರು: ಈ ನೆಲದಲ್ಲಿ ಉಳ್ಳವರಿಗೂ, ಬೀದಿಯಲ್ಲಿ ಕೂಲಿ ಕೆಲಸ ಮಾಡುವರಿಗೂ ಒಂದೇ ಕಾನೂನು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.

    ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂದಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.


    Provided by
    Provided by

    ದುಡ್ಡಿದ್ದವರಿಗೆ, ವಿದ್ಯಾವಂತರಿಗೆ, ಬಡವರಿಗೆ ಬೇರೆಬೇರೆ ಕಾನೂನುಗಳನ್ನು ರೂಪಿಸಿಲ್ಲ. ಎಲ್ಲರಿಗೂ ಒಂದೇ ರೀತಿಯ ಮತದಾನದ ಹಕ್ಕನ್ನು ಕಲ್ಪಿಸಲಾಗಿದೆ. ನಾವೆಲ್ಲ ಕಾನೂನು ಪರಿಪಾಲನೆ ಮಾಡಬೇಕು. ಇಲ್ಲವಾದರೆ ಶಿಕ್ಷೆ ಅನುಭವಿಸುವುದು ಕಟ್ಟಿಟ್ಟ ಬುತ್ತಿ ಎಂದರು.

    ಮನುಷ್ಯ ಪ್ರಕೃತಿಯ ನಿಯಮವನ್ನು ಅರ್ಥ ಮಾಡಿಕೊಳ್ಳಬೇಕು. ಉತ್ತಮವಾಗಿ ನಡೆದುಕೊಂಡರೆ ಸಮಾಜ ಗುರುತಿಸುತ್ತದೆ. ಕೆಲ ಸಂದರ್ಭಗಳಲ್ಲಿ ನಮಗೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ಆ ಕ್ಷಣಾರ್ಧದಲ್ಲಿ ತೆಗೆದುಕೊಳ್ಳುವ ತೀರ್ಮಾನದಿಂದ ತಪ್ಪುಗಳನ್ನು ಮಾಡಿರುತ್ತೇವೆ. ತಪ್ಪುಗಳನ್ನು ತಿದ್ದಿಕೊಳ್ಳಬೇಕು. ಇದರ ಪಶ್ಚಾತಾಪದಿಂದ ಜೀವನದ ಹೊಸ ಹಾದಿಯತ್ತ ಸಾಗಬೇಕು ಎಂದು ಹೇಳಿದರು.

    ಮಾಡಿದ ತಪ್ಪನ್ನು ತಿದ್ದಿಕೊಂಡವರಿಗೆ ಕಾನೂನಿನಲ್ಲಿ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಗುತ್ತಿದೆ. ಈ ಹಿಂದೆ ವರ್ಷಕ್ಕೆ ಎರಡು ಬಾರಿ ಬಿಡುಗಡೆ ಮಾಡಲಾಗುತ್ತಿತ್ತು. ಸುಪ್ರೀಂ ಕೋರ್ಟ್ ಆದೇಶದಂತೆ ವರ್ಷಕ್ಕೆ ಮೂರು ಬಾರಿ ಬಿಡುಗಡೆ ಸನ್ನಡತೆ ಮೇಲೆ ಮಾಡಲಾಗುತ್ತಿದೆ. ನಿಮ್ಮಲ್ಲಿಯೇ ಪರಿವರ್ತನೆ ತಂದುಕೊಂಡರೆ, ಸಮಾಜದಲ್ಲಿ ಬದುಕಲು ಮತ್ತೊಂದು ಅವಕಾಶ ಸಿಗುತ್ತದೆ ಎಂದು ತಿಳಿಸಿದರು.

    ಜೀವನ ತುಂಬ ವೇಗವಾಗಿ ಸಾಗುತ್ತಿದೆ. ಯಾವುದೇ ಕಾರಣಕ್ಕು ನೀವು ಮತ್ತೊಂದು ತಪ್ಪನ್ನು ಮಾಡಬೇಡಿ. ನಿಮ್ಮ ಕುಟುಂಬದ ಜೊತೆ ಉಳಿದ ಜೀವನವನ್ನು ಸಾಗಿಸಬೇಕು ಎಂದು ಕಿವಿಮಾತು ಹೇಳಿದರು.

    ರಾಜ್ಯದ 54 ಕಾರಾಗೃಹಗಳಲ್ಲಿ 15 ಸಾವಿರಕ್ಕೂ ಜನರಿದ್ದಾರೆ. ಎಲ್ಲರನ್ನು ಸುರಕ್ಷಿತವಾಗಿಡಬೇಕು, ವಿವಿಧ ಕೌಶಲ ತರಬೇತಿ, ಶಿಕ್ಷಣದ ಮೂಲಕ ಅವರನ್ನು ಸುಧಾರಿಸಿ ಪರಿವರ್ತನೆ ತರುವ ಜವಾಬ್ದಾರಿಯು ಇಲಾಖೆಯ ಮೇಲಿದೆ. ಈ ನಿಟ್ಟಿನಲ್ಲಿ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಅನೇಕ ಬೇಡಿಕೆಗಳ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಮಹಾನಿರ್ದೇಶಕರಾದ ಮಾಲಿನಿ ಕೃಷ್ಣಮೂರ್ತಿ, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ ಆನಂದ್ ರೆಡ್ಡಿ, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಅವರು ಉಪಸ್ಥಿತರಿದ್ದರು.

    ಕಳೆದ 15 ವರ್ಷಗಳಿಂದ ಜೈಲು ವಾಸ ಅನುಭವಿಸಿದ್ದೇನೆ. ಆಕಸ್ಮಿಕ ಘಟನೆಯಿಂದ ಜೈಲಿಗೆ ಬರಬೇಕಾಯಿತು. ನನ್ನ ಮಗಳ ಉನ್ನತ ವ್ಯಾಸಂಗದ ಗುರಿ ಸಾಧಿಸಲು ಆಗಲಿಲ್ಲ. ಜೈಲಿನಲ್ಲಿದ್ದುಕೊಂಡು ಬಿ.ಎ. ಪದವಿ ಪೂರರಣಗೊಳಿಸಿದ್ದೇನೆ. ಈ ದಿನ ನನಗೆ ಪುನರ್ ಜನ್ಮ. ಉತ್ತಮ ನಾಗರಿಕನಾಗಿ ಜೀವನ ಸಾಗಿಸುತ್ತೇನೆ ಎಂದು ಸನ್ನಡತೆ ಮೇಲೆ ಬಿಡುಗಡೆ ಹೊಂದಿದ ದಾನೇಶ್ ಎಂಬಾತ ಅಭಿಪ್ರಾಯ ಹಂಚಿಕೊಂಡರು.

    ವಿವಿಧ ನಾಲ್ಕು ವಿಷಯಗಳಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಡಿಪ್ಲೋಮಾ ಕೋರ್ಸ್‌ಗಳನ್ನು ಪೂಋಣಗೊಳಿಸಿದ್ದು, ನನ್ನ ಮುಂದಿನ ಜೀವನ ನಡೆಸಲು ಸಹಕಾರಿಯಾಗಲಿವೆ. ಇಂದಿನಿಂದ ನನ್ನ ಜೀವನದ ಹೊಸ ಅಧ್ಯಾಯ ಆರಂಭವಾಗಿದೆ. ಆಹಾರ ಮತ್ತು ಸ್ವಾತಂತ್ರ್ಯದ ಮಹತ್ವ ಏನೆಂಬುದು ಜೈಲು ವಾಸದಲ್ಲಿ ಗೊತ್ತಾಗಿದೆ ಎಂದು ಸನ್ನಡತೆಯ ಮೇಲೆ ಬಿಡುಗಡೆಯಾದ ಸತೀಶ್ ಆಚಾರ್ಯ ಎಂಬಾತ ತನ್ನ ಅನಿಸಿಕೆಯನ್ನು ಹೇಳಿಕೊಂಡರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026

    ತುಮಕೂರು: ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಸಿದ್ದರಬೆಟ್ಟದ ನೈಸರ್ಗಿಕ ಸಮತೋಲನವನ್ನು ಕಾಪಾಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸ್ವಚ್ಛತಾ…

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026

    ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್

    April 27, 2026

    ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು

    April 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.