ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದ ಬಾಳೆ ಹೊನ್ನೂರು ಶಾಖಾ ಮಠದ ಸಮುದಾಯ ಭವನದಲ್ಲಿ ಪುಸ್ತಕ ದಾಸೋಹ ಕಾರ್ಯಕ್ರಮ ಆಯೋಜನೆಗೊಂಡಿತ್ತು ಶ್ರೀ ಮಠದ ವಿದ್ಯಾರ್ಥಿಗಳಿಂದ ವೇದ ಮಂತ್ರ ಪಠಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಪುಸ್ತಕ ದಾಸೋಹ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಆಟವಿ ಶಿವಲಿಂಗ ಮಹಾ ಸ್ವಾಮಿಜೀ ಮತ್ತು ಶ್ರೀ ಶ್ರೀ ಈಶ್ವರನಂದ ಪುರಿ ಮಹಾ ಸ್ವಾಮಿಜೀ ರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಣೆ ಮಾಡಲಾಗಿತ್ತು. ಪುಸ್ತಕ ಜೋಳಿಗೆ ಎಂಬ ಕಾರ್ಯಕ್ರಮದಿಂದ ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬಾಳೆ ಹೊನ್ನೂರು ಖಾಸಾ ಶಾಖಾ ಮಠದ ಮತ್ತು ಕೊರಟಗೆರೆ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತಿಯ ಗ್ರಂಥಾಲಯ ಮೇಲ್ವಿಚಾರಕರ ಸಂಘದ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಸಿದ್ದರಬೆಟ್ಟದ ಕನಕ ಪೀಠದ ಪೀಠಾಧಿಪತಿಗಾಳದ ಶ್ರೀ ಈಶ್ವರನಂದ ಪುರಿ ಮಹಾ ಸ್ವಾಮೀಜಿ ಮಾತನಾಡಿ, ಪ್ರತಿ ನಿತ್ಯವು ಶ್ರೀಗಳು ವಿಭಿನ್ನ ರೀತಿಯ ಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡು ಸದಾಕಾಲ ಬಡವರ ಏಳಿಗೆಗೆ ಶ್ರಮಿಸುತ್ತಿದ್ದಾರೆ ಅವರ ಈ ಕಾರ್ಯಗಳು ಇನ್ನಷ್ಟು ಯಶಸ್ಸನ್ನು ಕಾಣಲಿ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿರವರು, ಚಿಕ್ಕತೊಟ್ಲುಕೆರೆಯ ಅಟವಿ ಶಿವಲಿಂಗ ಮಹಾ ಸ್ವಾಮೀಜಿ, ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ, ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಿದ್ದರೇಣುಕಾ ಶಿವಾಚಾರ್ಯ ಸ್ವಾಮೀಜಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್, ದಯಾನಂದ್ ,ಕಸಾಪ ಜಿಲ್ಲಾಧ್ಯಕ್ಷ ಸಿದ್ದ ಲಿಂಗಪ್ಪ, ಕೃಷ್ಣಮೂರ್ತಿ, ಸಿದ್ದಗಿರಿ ನಂಜುಂಡ ಸ್ವಾಮಿ ಇತರರು ಹಾಜರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz