nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು

    December 24, 2025

    ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ

    December 24, 2025

    ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ

    December 24, 2025
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
    • ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
    • ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
    • ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
    • ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು
    • ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ
    • ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ
    • ತುರುವೇಕೆರೆ: ಚಿರತೆ ಸಿಕ್ಕರೂ  ಗ್ರಾಮಸ್ಥರಲ್ಲಿ ದೂರವಾಗದ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತೀಯ ರೆಡ್ ಕ್ರಾಸ್ ಸಂಸ್ಥೆ,  ರೋಟರಿಯವರಿಂದ ಪೌರಕಾರ್ಮಿಕರಿಗೆ  ಉಚಿತ ಹೈಜನ್ – ಕಿಟ್ ವಿತರಣೆ ಕಾರ್ಯಕ್ರಮ
    ಜಿಲ್ಲಾ ಸುದ್ದಿ January 6, 2022

    ಭಾರತೀಯ ರೆಡ್ ಕ್ರಾಸ್ ಸಂಸ್ಥೆ,  ರೋಟರಿಯವರಿಂದ ಪೌರಕಾರ್ಮಿಕರಿಗೆ  ಉಚಿತ ಹೈಜನ್ – ಕಿಟ್ ವಿತರಣೆ ಕಾರ್ಯಕ್ರಮ

    By adminJanuary 6, 2022No Comments2 Mins Read

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಸಂಸ್ಥೆಗಳು ಸಾರ್ವಜನಿಕರಿಗೆ ಆರೋಗ್ಯ, ಶಿಕ್ಷಣ, ಸಮಾಜಸೇವೆ ಸೇರಿದಂತೆ ಹಲವಾರು ಉತ್ತಮ ಸೇವೆಗಳನ್ನು ನೀಡುವುದರ ಜೊತೆಗೆ ಯುದ್ಧದ ಸಂದರ್ಭದಲ್ಲಿ ಸಹ ನಮ್ಮ ಸೈನಿಕರಿಗೆ ಗಾಯಾಳುಗಳಿಗೆ ತುರ್ತು ಸೇವೆ ಸೇರಿದಂತೆ  ಹಲವಾರು ಉಪಯುಕ್ತ ಸಹಾಯಗಳನ್ನು ಮಾಡು ವಂತಹ  ಸಂಸ್ಥೆಯಾಗಿದೆ, ಇವರ ಸೇವೆ ಇದೇ ರೀತಿ ಮುಂದುವರೆಯಲಿ ಎಂಬುದಾಗಿ ನಗರಸಭೆ ಅಧ್ಯಕ್ಷರಾದ  ಶಂಷುನ್ನೀಸಾ ಅವರು ತಿಳಿಸಿದರು.

    ಹಿರಿಯೂರು ನಗರದ ರೋಟರಿ ಸಭಾಭವನದಲ್ಲಿ ಬುಧವಾರ ಮಧ್ಯಾಹ್ನ  ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರೋಟರಿ ಸಂಸ್ಥೆ ಹಾಗೂ ಇನ್ಹರ್ ವ್ಹೀಲ್ ಕ್ಲಬ್ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ  ಪೌರಕಾರ್ಮಿಕರಿಗೆ ಉಚಿತ  ಹೈಜನ್ ಕಿಟ್  ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹಿರಿಯೂರು ನಗರಸಭೆ ಅಧ್ಯಕ್ಷೆ  ಶಂಶುನ್ನಿಸಾ ಅವರು ಮಾತನಾಡಿದರು.


    Provided by
    Provided by

    ರೋಟರಿ ಸಂಸ್ಥೆ ಜಿಲ್ಲಾ ಗೌರ್ನರ್ ವಿ.ತಿರುಪತಿನಾಯ್ಡು ಅವರು  ಮಾತನಾಡಿ, ರೋಟರಿ ಸಂಸ್ಥೆ ವತಿಯಿಂದ ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಸಮಾಜದ ಬಡವರಿಗೆ, ಅನಾಥರಿಗೆ, ನಿರ್ಗತಿಕರಿಗೆ, ಫುಟ್ ಮಾಸ್, ಸ್ಯಾನಿಟೈಸರ್ ಗಳನ್ನು ಹಂಚಿಕೆ ಮಾಡಿದ್ದು, ರೋಟರಿ ಸಂಸ್ಥೆಯ ವರ್ಷದ 365 ದಿನಗಳ ಪ್ರತಿಯೊಂದು ಕಾರ್ಯಕ್ರಮವನ್ನು ರೆಕಾರ್ಡ್ ಮಾಡಲಾಗುತ್ತದೆ. ಕಳೆದ 50 ವರ್ಷಗಳಿಂದ ನಮ್ಮ ಸಂಘದ ನಾಗಣ್ಣ ನವರು ಸೇರಿದಂತೆ ಎಲ್ಲರೂ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ ಎಂದರಲ್ಲದೆ, ನಮ್ಮ ರೋಟರಿ 3160 ಚಿತ್ರದುರ್ಗ ವತಿಯಿಂದ ಜಿಲ್ಲೆಯಲ್ಲಿನ ಎಸ್.ಎಸ್.ಎಲ್.ಸಿ.  ಎಲ್ಲಾ ವಿದ್ಯಾರ್ಥಿಗಳಿಗೆ ಸುಮಾರು 50 ಸಾವಿರ ರೂಪಾಯಿಗಳ ಮೌಲ್ಯದ ಪುಸ್ತಕಗಳನ್ನು  ವಿತರಣೆ ಮಾಡಲಾಗಿದ್ದು, ಇದರ ಜೊತೆಗೆ ನಗರದ ಪೌರಕಾರ್ಮಿಕರಿಗೆ ಅವರ ಆರೋಗ್ಯ ಕಾಪಾಡಿಕೊಳ್ಳಲು ಹೈಜನಿಕ್ ಕಿಟ್ ಗಳು ಹಾಗೂ ಒಂದು ಟಿಫನ್ ಬಾಕ್ಸ್ ಸಹ ವಿತರಣೆ ಮಾಡಲಾಗುತ್ತಿದೆ, ಎಂಬುದಾಗಿ ಹೇಳಿದರು.

    ರೋಟರಿ ಅಧ್ಯಕ್ಷರಾದಂತಹ  ಕಿರಣ್ ಕುಮಾರ್ ರವರು  ಮಾತನಾಡಿ, ನಮ್ಮ ನಗರದ ಸ್ವಚ್ಛತೆ ಹಾಗೂ ನೈಮರ್ಲ್ಯವನ್ನು ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೌರಕಾರ್ಮಿಕರು ನಮ್ಮ ನಗರದ ನಿಜವಾದ ಕೋವಿಡ್ ವಾರಿರ್ಯಸ್ ಗಳು ನಗರದ ಸ್ವಚ್ಛತೆ ಕಾಪಾಡುವ ಮೂಲಕ ನಾಗರೀಕರ ಆರೋಗ್ಯ ರಕ್ಷಿಸುವ ನಿಟ್ಟಿನಲ್ಲಿ ಇವರ ಪರಿಶ್ರಮ ಅತ್ಯಂತ ಪ್ರಶಂಷನೀಯವಾದದ್ದು ಎಂಬುದಾಗಿ ತಿಳಿಸಿದರು .

    ಇದೇ ಸಂದರ್ಭದಲ್ಲಿ   ನಗರದಲ್ಲಿರುವ ಶ್ರೀ  ಸತ್ಯ ಸಾಯಿಬಾಬಾ ವಿದ್ಯಾಸಂಸ್ಥೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವಿದ್ಯಾಸೇತು ಪುಸ್ತಕಗಳನ್ನು ವಿತರಣೆ ಮಾಡಲಾಯಿತು.ವೇದಿಕೆಯಲ್ಲಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ವಿಶ್ವನಾಥ್, ಜಿಲ್ಲಾ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ, ರೋಟರಿ ಕಾರ್ಯದರ್ಶಿ ಎ.ರಾಘವೇಂದ್ರ, ನಗರಸಭೆ ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ನಗರಸಭೆ ಪೌರಾಯುಕ್ತರಾದ ಡಿ.ಉಮೇಶ್, ಸದಸ್ಯರಾದ ಜಗದೀಶ್, ಇನ್ಹರ್ ವ್ಹೀಲ್ ಅಧ್ಯಕ್ಷರಾದ ಸ್ವಪ್ನಾ ಸತೀಶ್, ರಾಘವೇಂದ್ರಾಚಾರ್, ಪೌರಕಾರ್ಮಿಕರ ಅಧ್ಯಕ್ಷರಾದ ದುರ್ಗೇಶ್ ಉಪಸ್ಥಿತರಿದ್ದರು.

    ಈ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಹಿರಿಯ ಸದಸ್ಯರಾದ ಬಿ.ಕೆ.ನಾಗಣ್ಣ, ಎಸ್.ಜೋಗಪ್ಪ, ಕೆ.ಎಸ್.ಮಹಾಬಲೇಶ್ವರಶೆಟ್ಟಿ, ಪಿ.ಆರ್.ಸತೀಶ್ ಬಾಬು, ರೋಟರಿಯನ್ ಗಳಾದ ಚಂದ್ರಕೀರ್ತಿ ಗುಜ್ಜಾರ್, ಆರ್.ಶಿವಕುಮಾರ್, ಗುಣಶೇಖರ್, ಪ್ರಶಾಂತ್, ನರೇಶ್ ಜೈನ್, ಚಂದ್ರಹಾಸ್, ಮಂಜುನಾಥ್, ವೆಂಕಟೇಶ್, ಮಧುಸೂದನ್, ಇನ್ಹರ್ ವ್ಹೀಲ್ ಕ್ಲಬ್ ನ ರಚನಾ, ಸೌಮ್ಯ, ಪದ್ಮಜಾ ಶೆಟ್ಟಿ, ಸ್ವರ್ಣಾ, ರೇಷ್ಮಾ ಗುಜ್ಜಾರ್ ಸೇರಿದಂತೆ ಸತ್ಯ ಸಾಯಿಬಾಬಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು, ನಗರಸಭೆ ಪೌರ ನೌಕರರು ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

     

     

    admin
    • Website

    Related Posts

    ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು

    December 24, 2025

    ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ

    December 24, 2025

    ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ

    December 24, 2025

    Leave A Reply Cancel Reply

    Our Picks

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು

    December 24, 2025

    ಸರಗೂರು:  ವಿಕಲಚೇತನರ ಹಿತರಕ್ಷಣೆಗಾಗಿ ಇರುವ ಕಾನೂನಿನ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ’ ಎಂದು ಪ್ಯಾನೆಲ್ ವಕೀಲ ಹಾಗೂ ವಕೀಲರ…

    ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ

    December 24, 2025

    ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ

    December 24, 2025

    ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ

    December 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.