nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತೀಯ ರೆಡ್ ಕ್ರಾಸ್ ಸಂಸ್ಥೆ,  ರೋಟರಿಯವರಿಂದ ಪೌರಕಾರ್ಮಿಕರಿಗೆ  ಉಚಿತ ಹೈಜನ್ – ಕಿಟ್ ವಿತರಣೆ ಕಾರ್ಯಕ್ರಮ
    ಜಿಲ್ಲಾ ಸುದ್ದಿ January 6, 2022

    ಭಾರತೀಯ ರೆಡ್ ಕ್ರಾಸ್ ಸಂಸ್ಥೆ,  ರೋಟರಿಯವರಿಂದ ಪೌರಕಾರ್ಮಿಕರಿಗೆ  ಉಚಿತ ಹೈಜನ್ – ಕಿಟ್ ವಿತರಣೆ ಕಾರ್ಯಕ್ರಮ

    By adminJanuary 6, 2022No Comments2 Mins Read

    Provided by
    Provided by

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಸಂಸ್ಥೆಗಳು ಸಾರ್ವಜನಿಕರಿಗೆ ಆರೋಗ್ಯ, ಶಿಕ್ಷಣ, ಸಮಾಜಸೇವೆ ಸೇರಿದಂತೆ ಹಲವಾರು ಉತ್ತಮ ಸೇವೆಗಳನ್ನು ನೀಡುವುದರ ಜೊತೆಗೆ ಯುದ್ಧದ ಸಂದರ್ಭದಲ್ಲಿ ಸಹ ನಮ್ಮ ಸೈನಿಕರಿಗೆ ಗಾಯಾಳುಗಳಿಗೆ ತುರ್ತು ಸೇವೆ ಸೇರಿದಂತೆ  ಹಲವಾರು ಉಪಯುಕ್ತ ಸಹಾಯಗಳನ್ನು ಮಾಡು ವಂತಹ  ಸಂಸ್ಥೆಯಾಗಿದೆ, ಇವರ ಸೇವೆ ಇದೇ ರೀತಿ ಮುಂದುವರೆಯಲಿ ಎಂಬುದಾಗಿ ನಗರಸಭೆ ಅಧ್ಯಕ್ಷರಾದ  ಶಂಷುನ್ನೀಸಾ ಅವರು ತಿಳಿಸಿದರು.

    ಹಿರಿಯೂರು ನಗರದ ರೋಟರಿ ಸಭಾಭವನದಲ್ಲಿ ಬುಧವಾರ ಮಧ್ಯಾಹ್ನ  ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರೋಟರಿ ಸಂಸ್ಥೆ ಹಾಗೂ ಇನ್ಹರ್ ವ್ಹೀಲ್ ಕ್ಲಬ್ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ  ಪೌರಕಾರ್ಮಿಕರಿಗೆ ಉಚಿತ  ಹೈಜನ್ ಕಿಟ್  ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹಿರಿಯೂರು ನಗರಸಭೆ ಅಧ್ಯಕ್ಷೆ  ಶಂಶುನ್ನಿಸಾ ಅವರು ಮಾತನಾಡಿದರು.

    ರೋಟರಿ ಸಂಸ್ಥೆ ಜಿಲ್ಲಾ ಗೌರ್ನರ್ ವಿ.ತಿರುಪತಿನಾಯ್ಡು ಅವರು  ಮಾತನಾಡಿ, ರೋಟರಿ ಸಂಸ್ಥೆ ವತಿಯಿಂದ ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಸಮಾಜದ ಬಡವರಿಗೆ, ಅನಾಥರಿಗೆ, ನಿರ್ಗತಿಕರಿಗೆ, ಫುಟ್ ಮಾಸ್, ಸ್ಯಾನಿಟೈಸರ್ ಗಳನ್ನು ಹಂಚಿಕೆ ಮಾಡಿದ್ದು, ರೋಟರಿ ಸಂಸ್ಥೆಯ ವರ್ಷದ 365 ದಿನಗಳ ಪ್ರತಿಯೊಂದು ಕಾರ್ಯಕ್ರಮವನ್ನು ರೆಕಾರ್ಡ್ ಮಾಡಲಾಗುತ್ತದೆ. ಕಳೆದ 50 ವರ್ಷಗಳಿಂದ ನಮ್ಮ ಸಂಘದ ನಾಗಣ್ಣ ನವರು ಸೇರಿದಂತೆ ಎಲ್ಲರೂ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ ಎಂದರಲ್ಲದೆ, ನಮ್ಮ ರೋಟರಿ 3160 ಚಿತ್ರದುರ್ಗ ವತಿಯಿಂದ ಜಿಲ್ಲೆಯಲ್ಲಿನ ಎಸ್.ಎಸ್.ಎಲ್.ಸಿ.  ಎಲ್ಲಾ ವಿದ್ಯಾರ್ಥಿಗಳಿಗೆ ಸುಮಾರು 50 ಸಾವಿರ ರೂಪಾಯಿಗಳ ಮೌಲ್ಯದ ಪುಸ್ತಕಗಳನ್ನು  ವಿತರಣೆ ಮಾಡಲಾಗಿದ್ದು, ಇದರ ಜೊತೆಗೆ ನಗರದ ಪೌರಕಾರ್ಮಿಕರಿಗೆ ಅವರ ಆರೋಗ್ಯ ಕಾಪಾಡಿಕೊಳ್ಳಲು ಹೈಜನಿಕ್ ಕಿಟ್ ಗಳು ಹಾಗೂ ಒಂದು ಟಿಫನ್ ಬಾಕ್ಸ್ ಸಹ ವಿತರಣೆ ಮಾಡಲಾಗುತ್ತಿದೆ, ಎಂಬುದಾಗಿ ಹೇಳಿದರು.

    ರೋಟರಿ ಅಧ್ಯಕ್ಷರಾದಂತಹ  ಕಿರಣ್ ಕುಮಾರ್ ರವರು  ಮಾತನಾಡಿ, ನಮ್ಮ ನಗರದ ಸ್ವಚ್ಛತೆ ಹಾಗೂ ನೈಮರ್ಲ್ಯವನ್ನು ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೌರಕಾರ್ಮಿಕರು ನಮ್ಮ ನಗರದ ನಿಜವಾದ ಕೋವಿಡ್ ವಾರಿರ್ಯಸ್ ಗಳು ನಗರದ ಸ್ವಚ್ಛತೆ ಕಾಪಾಡುವ ಮೂಲಕ ನಾಗರೀಕರ ಆರೋಗ್ಯ ರಕ್ಷಿಸುವ ನಿಟ್ಟಿನಲ್ಲಿ ಇವರ ಪರಿಶ್ರಮ ಅತ್ಯಂತ ಪ್ರಶಂಷನೀಯವಾದದ್ದು ಎಂಬುದಾಗಿ ತಿಳಿಸಿದರು .


    Provided by
    Provided by

    ಇದೇ ಸಂದರ್ಭದಲ್ಲಿ   ನಗರದಲ್ಲಿರುವ ಶ್ರೀ  ಸತ್ಯ ಸಾಯಿಬಾಬಾ ವಿದ್ಯಾಸಂಸ್ಥೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವಿದ್ಯಾಸೇತು ಪುಸ್ತಕಗಳನ್ನು ವಿತರಣೆ ಮಾಡಲಾಯಿತು.ವೇದಿಕೆಯಲ್ಲಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ವಿಶ್ವನಾಥ್, ಜಿಲ್ಲಾ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ, ರೋಟರಿ ಕಾರ್ಯದರ್ಶಿ ಎ.ರಾಘವೇಂದ್ರ, ನಗರಸಭೆ ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ನಗರಸಭೆ ಪೌರಾಯುಕ್ತರಾದ ಡಿ.ಉಮೇಶ್, ಸದಸ್ಯರಾದ ಜಗದೀಶ್, ಇನ್ಹರ್ ವ್ಹೀಲ್ ಅಧ್ಯಕ್ಷರಾದ ಸ್ವಪ್ನಾ ಸತೀಶ್, ರಾಘವೇಂದ್ರಾಚಾರ್, ಪೌರಕಾರ್ಮಿಕರ ಅಧ್ಯಕ್ಷರಾದ ದುರ್ಗೇಶ್ ಉಪಸ್ಥಿತರಿದ್ದರು.

    ಈ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಹಿರಿಯ ಸದಸ್ಯರಾದ ಬಿ.ಕೆ.ನಾಗಣ್ಣ, ಎಸ್.ಜೋಗಪ್ಪ, ಕೆ.ಎಸ್.ಮಹಾಬಲೇಶ್ವರಶೆಟ್ಟಿ, ಪಿ.ಆರ್.ಸತೀಶ್ ಬಾಬು, ರೋಟರಿಯನ್ ಗಳಾದ ಚಂದ್ರಕೀರ್ತಿ ಗುಜ್ಜಾರ್, ಆರ್.ಶಿವಕುಮಾರ್, ಗುಣಶೇಖರ್, ಪ್ರಶಾಂತ್, ನರೇಶ್ ಜೈನ್, ಚಂದ್ರಹಾಸ್, ಮಂಜುನಾಥ್, ವೆಂಕಟೇಶ್, ಮಧುಸೂದನ್, ಇನ್ಹರ್ ವ್ಹೀಲ್ ಕ್ಲಬ್ ನ ರಚನಾ, ಸೌಮ್ಯ, ಪದ್ಮಜಾ ಶೆಟ್ಟಿ, ಸ್ವರ್ಣಾ, ರೇಷ್ಮಾ ಗುಜ್ಜಾರ್ ಸೇರಿದಂತೆ ಸತ್ಯ ಸಾಯಿಬಾಬಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು, ನಗರಸಭೆ ಪೌರ ನೌಕರರು ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

     

     

    admin
    • Website

    Related Posts

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    June 23, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸರಗೂರು: “ನಮ್ಮ ಸನಾತನ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ ‘ಯೋಗ’ ಆಗಿದ್ದು, ಜಾಗತಿಕ ಮಟ್ಟದಲ್ಲಿ…

    ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ

    June 23, 2026

    ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ

    June 23, 2026

    ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.