nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    • ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ: ಸಿಎಂ ಸಿದ್ದರಾಮಯ್ಯ
    Uncategorized June 18, 2024

    ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ: ಸಿಎಂ ಸಿದ್ದರಾಮಯ್ಯ

    By adminJune 18, 2024No Comments2 Mins Read
    siddharamayya

    Provided by
    Provided by

    ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ–ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್–ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ. ಆರ್.ಅಶೋಕ್ ಗೆ ಇದೆಲ್ಲಾ ಅರ್ಥ ಆಗಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಇಲ್ಲ ಎಂದು ವ್ಯಂಗ್ಯವಾಡಿದರು.

    ಕೇಂದ್ರ ಸರ್ಕಾರ ಜಿ.ಎಸ್.ಟಿ. ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ. , ಆದಾಯ ತೆರಿಗೆ, ಕೇಂದ್ರ ಅಬಕಾರಿ ಸುಂಕ ಮೊದಲಾದ ಮೂಲಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಯಾವುದೇ ಮೂಲಗಳಿಲ್ಲ. ಈ ಹಿನ್ನೆಲೆಯಲ್ಲಿ ಇತರ ರಾಜ್ಯಗಳ ಪೆಟ್ರೋಲ್ ಡೀಸೆಲ್ ಬೆಲೆಗೆ ಹೋಲಿಸಿದರೆ ರಾಜ್ಯದ ದರಗಳು ಕಡಿಮೆ ಇರುವುದು ಗಮನಿಸಿ, ರಾಜ್ಯ ಸರ್ಕಾರ ಅಲ್ಪ ಪ್ರಮಾಣದ ತೆರಿಗೆ ಹೆಚ್ಚಳ ಮಾಡಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟ ಪಡಿಸಿದರು.

    ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಅವರಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ ಎಂದು ಪ್ರಶ್ನಿಸಿದರು. ಡಾ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 113 ಡಾಲರ್ ಇತ್ತು. 2015 ರಲ್ಲಿ ಈ ಬೆಲೆ ಅರ್ಧಕ್ಕರ್ಧ ಕಡಿಮೆಯಾದರೂ, ಬೆಲೆ ಇಳಿಸಿ, ಜನರ ಹೊರೆ ಕಡಿಮೆ ಮಾಡುವ ಕಾಳಜಿಯನ್ನು ನರೇಂದ್ರ ಮೋದಿಯವರು ತೋರಲಿಲ್ಲ. ಬಿಜೆಪಿಯವರು ಯಾರ ವಿರುದ್ಧ ಹೋರಾಡಬೇಕು ಎಂದು ಪ್ರಶ್ನಿಸಿದರು?.

    ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತ ಬಂದಿದ್ದರೂ, ಬಿಜೆಪಿಯವರು ದನಿ ಎತ್ತಿಲ್ಲ? ತೆರಿಗೆ ಅನ್ಯಾಯವಾದಾಗ ಸಂಸದರು ಈ ವಿಷಯದ ಕುರಿತು ಮಾತನಾಡಿಲ್ಲ; ರಾಜ್ಯಕ್ಕೆ 15ನೇ ಹಣಕಾಸು ಆಯೋಗವು ವಿಶೇಷ ಅನುದಾನ ನೀಡುವಂತ ಶಿಫಾರಸು ಮಾಡಿದ್ದರೂ, ಕೇಂದ್ರ ಸರ್ಕಾರ ನೀಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಆಯವ್ಯಯದಲ್ಲಿ ನಿರ್ಮಲಾ ಸೀತಾರಾಮನ್ ಅವರು 5,000 ಕೋಟಿ ರೂ. ಒದಗಿಸುವುದಾಗಿ ಘೋಷಿಸಿದರೂ, ಬಿಡಿಗಾಸೂ ನೀಡಿಲ್ಲ. ಈ ವಿಷಯಗಳ ಕುರಿತು ಬಿಜೆಪಿಯವರು ದನಿ ಎತ್ತಿದ್ದಾರೆಯೇ? ಬಿಜೆಪಿಯು ಬಡವರು, ದಲಿತರ ವಿರೋಧಿ ಧೋರಣೆ ಹೊಂದಿದೆ ಎಂದು ಅವರು ನುಡಿದರು.

    GST ಯಲ್ಲಿ ಕೇಂದ್ರ ಸರ್ಕಾರ ಏಕಸ್ವಾಮ್ಯ ಮಾಡಿಕೊಂಡಿರುವುದರಿಂದ ರಾಜ್ಯಗಳ ಪರಮಾಧಿಕಾರವಾಗಿದ್ದ ತೆರಿಗೆ ಸಂಗ್ರಹದ ಅವಕಾಶಗಳು ಇಲ್ಲವಾಗಿದೆ. ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ. ರಾಜ್ಯದ ಜನರ ಪಾಲಿನ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ ಎಂದು ಸಿಎಂ ಹೇಳಿದರು.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ತುಮಕೂರು: ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹಿಸಿ, ಗ್ರಾಮಸ್ಥರು ಹಾಗೂ ಪೋಷಕರು AIDSO ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ…

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.