ಸಿಂಧನೂರು: ಮೊಲ ಬೇಟೆಯಾಡಿದ ಮಸ್ಕಿ ಶಾಸಕ ಬಸನಗೌಡ ತುರುವಿಹಾಳ ಅವರ ಪುತ್ರ ಹಾಗೂ ಶಾಸಕರ ಸಹೋದರನ ವಿರುದ್ಧ ಮಂಗಳವಾರ ಪ್ರಕರಣ ದಾಖಲಾಗಿದೆ.
ತಾಲೂಕಿನ ತುರುವಿಹಾಳ ಪಟ್ಟಣದಲ್ಲಿ ಸೋಮವಾರ ಯುಗಾದಿ ಕರಿ ನಿಮಿತ್ಯ ಬೇಟೆಯಾಡಿದ ಮೊಲವನ್ನು ಹಿಡಿದು ಶಾಸಕರ ಪುತ್ರ ಸತೀಶಗೌಡ ಹಾಗೂ ಅವರ ಸಹೋದರ ಸಿದ್ದನಗೌಡ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದವು. ಪ್ರಕರಣ ದಾಖಲಿಸುವಂತೆ ಒತ್ತಡ ಕೇಳಿಬಂದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಡಿಸಿಎಫ್ ಪ್ರವೀಣ್ ಪ್ರಕರಣ ಮಾಡಿದ್ದಾರೆ.
ಮೆರವಣಿಗೆಯಲ್ಲಿ ಭಾಗಿಯಾಗಿರುವವರು ಕೂಡ ಇದೀಗ ಕಾನೂನಿನ ಸಂಕಷ್ಟಕ್ಕೆ ಸಿಲುಕಲಿದ್ದು, ಅವರ ವಿರುದ್ಧವೂ ಪ್ರಕರಣ ದಾಖಲಾಗುವ ಸಾಧ್ಯತೆಗಳಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4