nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ಕಿರಾಂಪುರದಲ್ಲಿ ರಾಗಿ ಖರೀದಿ ಕೇಂದ್ರ ಆರಂಭ:  ಗೃಹಸಚಿವರ ಆದೇಶದಂತೆ ರೈತರಿಗೆ ಅನುಕೂಲ
    ಕೊರಟಗೆರೆ March 7, 2025

    ಅಕ್ಕಿರಾಂಪುರದಲ್ಲಿ ರಾಗಿ ಖರೀದಿ ಕೇಂದ್ರ ಆರಂಭ:  ಗೃಹಸಚಿವರ ಆದೇಶದಂತೆ ರೈತರಿಗೆ ಅನುಕೂಲ

    By adminMarch 7, 2025No Comments1 Min Read
    akkirampur

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ಗ್ರಾಮೀಣ ಭಾಗದ ರೈತರ ಅನುಕೂಲಕ್ಕಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ ಆದೇಶದಂತೆ ಅಕ್ಕಿರಾಂಪುರ ಗ್ರಾಮದಲ್ಲಿ ನೂತನವಾಗಿ ರಾಗಿ ಖರೀದಿ ಕೇಂದ್ರ ಪ್ರಾರಂಭವಾಗಿದೆ ಎಂದು ಕೊರಟಗೆರೆ ತಹಶೀಲ್ದಾರ್ ಮಂಜುನಾಥ ಕೆ. ತಿಳಿಸಿದರು.


    Provided by
    Provided by

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಗುರುವಾರ ಏರ್ಪಡಿಸಲಾಗಿದ್ದ ರಾಗಿ ಖರೀದಿ ಕೇಂದ್ರದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದರು.

    ಗ್ರಾಮೀಣ ರೈತರ ಮನವಿಯಿಂದ ಪ.ಪಂ. ಕಚೇರಿಯಲ್ಲಿ ಕಳೆದ 15 ದಿನದ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ ಕೊರಟಗೆರೆಯಲ್ಲಿ ರಾಗಿ ಕೇಂದ್ರ ತೆರೆಯುವಂತೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಸೂಚನೆಯಂತೆ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರದಲ್ಲಿ ರಾಗಿ ಖರೀದಿ ಕೇಂದ್ರ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.

    ಕೊರಟಗೆರೆ ಆಹಾರ ನಿಗಮದ ವ್ಯವಸ್ಥಾಪಕ ಟಿ.ಹೆಚ್.ರುದ್ರಪ್ಪ ಮಾತನಾಡಿ, ಅಕ್ಕಿರಾಂಪುರ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಗುರುವಾರ, ಶುಕ್ರವಾರ ಮತ್ತು ಶನಿವಾರ ರೈತರಿಂದ ರಾಗಿ ಖರೀದಿ ಮಾಡಲಾಗುತ್ತೆ. ಪ್ರತಿ ಕ್ವಿಂಟಾಲ್ ರಾಗಿ ಖರೀದಿಗೆ ಸರಕಾರದಿಂದ 4,290ರೂ ನಿಗದಿ ಮಾಡಲಾಗಿದೆ. ರೈತಯೊಬ್ಬ ರೈತನಿಂದ ಪ್ರತಿ ಎಕರ್ ಗೆ 10 ಕ್ವಿಂಟಾಲ್‍ ನಂತೆ ಗರಿಷ್ಟ 20 ಕ್ವಿಂಟಾಲ್ ರಾಗಿ ಖರೀದಿ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ ಕೊರಟಗೆರೆ ಆಹಾರ ನಿರೀಕ್ಷಕ ಮಂಜುನಾಥ, ಶಿರಸ್ಥೆದಾರ ಲಕ್ಷ್ಮೀ,ಹೊಳವನಹಳ್ಳಿ ಕಂದಾಯ ನಿರೀಕ್ಷಕ ಸಲ್ಮಾನ್, ಗ್ರಾಮ ಆಡಳಿತಾಧಿಕಾರಿ ಪರಶುರಾಮ್ ಸೇರಿದಂತೆ ಇತರರು ಇದ್ದರು.

    ಪ್ರತಿವರ್ಷ ರಾಗಿ ಮಾರಾಟಕ್ಕೆ ನಾವು ತುಮಕೂರು ಮತ್ತು ಮಧುಗಿರಿಗೆ ತೆರಳಬೇಕಿತ್ತು. ನಮಗೇ 40 ಕಿ.ಮೀ. ದೂರ ಸಂಚಾರ ಮತ್ತು ದಿನಗಟ್ಟಲೇ ಕಾಯೋದು ತಪ್ಪಿದೆ.  ಸರಕಾರ ರಾಗಿ ಖರೀದಿಸಿದ ಬಳಿಕ ತ್ವರಿತವಾಗಿ ರೈತರಿಗೆ ಹಣ ನೀಡುವಂತಾಗಲಿ. ರೈತರಿಗೆ ಅನುಕೂಲ ಕಲ್ಪಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಧನ್ಯವಾದ.

    — ಶಿವಪ್ಪ. ರೈತ. ಕೋಳಾಲ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಳ್ಳಾರಿ:   ಜಿಲ್ಲೆಯಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ 15,652 ಹಾಗೂ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಗೆ 23,271…

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.