ಕೊರಟಗೆರೆ: ಶಿಕ್ಷಣ, ಆರೋಗ್ಯ,ಕೃಷಿ, ಕೈಗಾರಿಕಾ ಕ್ಷೇತ್ರಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರ ಹೆಚ್ಚಿನ ಆದ್ಯತೆಯ ಅನುದಾನ ಮೀಸಲಿಡಬೇಕಿದೆ ಎಂದು ಶಾಸಕ ಡಾ.ಜಿ.ಪರಮೇಶ್ವರ್ ಆಗ್ರಹಿಸಿದರು.
ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ ಬೈರೇನಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ ಮತ್ತು ತಾಲ್ಲೂಕು ಪಂಚಾಯತ್ ಯಿಂದ ಸೋಮವಾರ ಏರ್ಪಡಿಸಲಾಗಿದ್ದ ಗಂಗಾಕಲ್ಯಾಣ ಯೋಜನೆಯಡಿ ಮೋಟಾರುಪಂಪು ವಿತರಣೆ ಮತ್ತು ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತ ದೇಶದ ರೈತಾಪಿವರ್ಗ ಮಳೆಯನ್ನೇ ಆಧರಿಸಿ ವ್ಯವಸಾಯ ಮಾಡ್ತಾರೇ. ನೀರಾವರಿ ಯೋಜನೆಗೆ ಈಗಾಗಲೇ ಹತ್ತಾರು ಕಾಮಗಾರಿ ನಡೆಯುತ್ತಿದೆ. ಎತ್ತಿನಹೊಳೆ ಯೋಜನೆಯಿಂದ ಕೊರಟಗೆರೆ ತಾಲೂಕಿನ 109ಕೆರೆಗಳಿಗೆ ನೀರು ಹರಿಯಲಿದೆ. ಇದರಿಂದ ರೈತಾಪಿವರ್ಗ ಕೃಷಿ ಚಟುವಟಿಕೆ ಮಾಡಲು ಅನುಕೂಲ ಆಗಲಿದೆ ಎಂದು ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ 15, ವಾಲ್ಮೀಕಿ ಅಭಿವೃದ್ದಿ ನಿಗಮದಿಂದ 16, ಆದಿಜಾಂಭವ ಅಭಿವೃದ್ದಿ ನಿಗಮದಿಂದ 10, ತಾಂಡ ಅಭಿವೃದ್ದಿ ನಿಗಮದಿಂದ 2 ಸೇರಿ ಒಟ್ಟು 2018-19ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ 43ಫಲಾನುಭವಿಗಳಿಗೆ ಮೋಟಾರ್ ಪೈಪ್ ಮತ್ತು ಪರಿಕರ ಹಾಗೂ 10ಲಕ್ಷ ವೆಚ್ಚದ ಕೃಷಿ ಯಂತ್ರೋಪಕರಣ, 8ಲಕ್ಷ ವೆಚ್ಚದ ಟ್ರಾಕ್ಟರ್, ರೋಟಿವೇಟರ್, ಕಲ್ಟಿವೇಟರ್, ಬಿತ್ತಲೆಕೂರಿಗೆ ವಿತರಣೆ ಮಾಡಿದ್ದೇನೆ ಎಂದು ಹೇಳಿದರು.
ಕಾರ್ಯಕ್ರಮದ ಸಂದರ್ಭದಲ್ಲಿ ತಹಶೀಲ್ದಾರ್ ನಾಹೀದಾ ಜಮ್ ಜಮ್, ಕೆಪಿಸಿಸಿ ಕಾರ್ಯದರ್ಶಿ ದಿನೇಶ್, ಮಾಜಿ ತಾಪಂ ಉಪಾಧ್ಯಕ್ಷ ವೆಂಕಟಪ್ಪ, ತಾಪಂ ಇಓ ದೊಡ್ಡಸಿದ್ದಯ್ಯ, ಕೃಷಿ ಇಲಾಖೆ ಹಿರಿಯ ನಿರ್ದೇಶಕ ನಾಗರಾಜು, ಅರಣ್ಯ ಇಲಾಖೆಯ ಸುರೇಶ್, ತೋಟಗಾರಿಕೆಯ ಶೃತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆಶಂಕರ್, ಅಶ್ವತ್ಥನಾರಾಯಣ್, ಅರಸಾಪುರ ಗ್ರಾಪಂ ಅಧ್ಯಕ್ಷ ರಾಮಕೃಷ್ಣ ಸೇರಿದಂತೆ ಇತರರು ಇದ್ದರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5