ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಪಿ.ಹೆಚ್.ಹಳ್ಳಿ ಗ್ರಾಮದ ಕಲ್ಲು ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹಿಸಿ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಹುಲಿಕಟ್ಟೆ ನೇತೃತ್ವದಲ್ಲಿ ನೂರಾರು ಮಂದಿ ರೈತರು ಆಗೂ ರೈತ ಮಹಿಳೆಯರು ಬೀಸೆಗೌಡನದೊಡ್ಡಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಇದೇ ವೇಳೆ ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು. ಇದೇ ವೇಳೆ ಸ್ಥಳಕ್ಕೆ ಬಂದ ತಹಶೀಲ್ದಾರ ಮಹಾಭಲೇಶ್ವರ್,ಅರಣ್ಯ ಇಲಾಖೆಯ ಅಧಿಕಾರಿ ಮಹೇಶ್ ಆಗೂ ಪಿಡಬ್ಲೂಡಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗುರುಸಿದ್ದಪ್ಪ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ,ಪರಿಸರ ಇಲಾಖೆಯ ಅಧಿಕಾರಿಗಳನ್ನು ರೈತಮುಖಂಡರು ಸ್ಥಳದಲ್ಲಿ ತರಾಟೆಗೆ ತೆಗೆದುಕೊಂಡರು.
ಕಳೆದ ಹದಿನೈದು ದಿನಗಳಿಂದ ರೈತ ಮಹಿಳೆಯರು ಅಹೊರಾತ್ರಿ ಧರಣಿ ನಡೆಸುತ್ತಿದ್ದರು. ತಾಲ್ಲೂಕಿನ ಒಬ್ಬ ಅಧಿಕಾರಿಗಳು ಇತ್ತ ಸುಳಿದಿಲ್ಲ ಹೋರಾಟಕ್ಕೆ ಮುಂದಾಗುವ ರೈತರ ಮೇಲೆ ರೇಪ್ ಕೇಸ್ ದಾಖಲಿಸಿದ್ದಾರೆ. ದೊಡ್ಡಮಟ್ಟದಲ್ಲಿ ಗಣಿಗಾರಿಕೆ ನಡೆಸಿ ಪ್ರಕೃತಿ ಸಂಪತ್ತು ನಾಶಕ್ಕೆ ಆಗೂ ಸಾರ್ವಜನಿಕರ ಸಮಸ್ಯೆಗೆ ಕಾರಣವಾಗಿರುವ ಗಣಿ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳದೆ ಇರುವುದಕ್ಕೆ ಕಾರಣವಾದರು ಏನು ? ಎಂದು ಅಧಿಕಾರಿಗಳಿಗೆ ರೈತರು ತರಾಟೆಗೆ ತೆಗೆದುಕೊಂಡರು.
ಒಂದು ಪರ್ಮಿಟ್ ಬಳಸಿ ನೂರಾರು ಲಾರಿಗಳು ಒಡಾಡುತ್ತವೆ. ಆದರೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಒಂದು ಚೇಕ್ ಪೋಸ್ಟ್ ತೆರೆದಿಲ್ಲ. ಬೋರ್ವೆಲ್ ಲಾರಿ ಬಳಸಿ ಕಲ್ಲು ಬಂಡೆ ಕೊರೆದು ಪ್ರಭಲವಾಗಿ ಕಲ್ಲು ಬಂಡೆಗಳನ್ನು ಸ್ಟೋಟಿಸುತ್ತಿದ್ದರು. ಕ್ರಮ ಕೈಗೊಳ್ಳುವಲ್ಲಿ ತಾಲ್ಲೂಕು ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಕೂಡಲೇ ಗಣಿಗಾರಿಕೆ ಸ್ಥಳವನ್ನು ಜಪ್ತಿ
ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡ ಜಗದೀಶ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಉಪಾಧ್ಯಕ್ಷ ಲಿಂಗೇಗೌಡ, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಅನಿಲ್, ಕಾರ್ಯದರ್ಶಿ ವೆಂಕಟೇಶ್, ರಘು ಜಾಣಗೆರೆ, ಕೃಷಿ,ತೋಟಗಾರಿಕೆ, ರೇಷ್ಮೆ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB