ಕೊರಟಗೆರೆ: ಕರ್ನಾಟಕ ರಾಜ್ಯ ರೈತ ಸಂಘವು ಕೊರಟಗೆರೆ ತಾಲ್ಲೂಕಿನ ಮಾರಗೊಂಡನಹಳ್ಳಿ, ವಜ್ಜನಕುರಿಕೆ, ಪಾತಗಾನಹಳ್ಳಿ ಗ್ರಾಮಗಳಲ್ಲಿ ನೂತನ ಘಟಕಗಳ ಉದ್ಘಾಟನಾ ಸಮಾರಂಭ ನಡೆಯಿತು.
ಉದ್ಘಾಟನೆಯ ನಂತರ ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಮಾತನಾಡಿ, ಪ್ರಪಂಚದ ಸಮಾರು 700 ದೇಶಗಳಲ್ಲಿ ವಿದ್ಯಾರ್ಥಿಗಳು ರೈತರಿಗೆ ಸಂಬಂಧಿಸಿದ ಅಧ್ಯಯನಗಳಲ್ಲಿ ವಿದ್ಯಾಭ್ಯಾಸವನ್ನು ಮಾಡುವುದರೊಂದಿಗೆ ಸಾಕಷ್ಟು ಸಾಧನೆ ಮಾಡಿರುವಂತಹದ್ದು ನಮ್ಮ ಕಣ್ಣು ಮುಂದೆಯೇ ಸಾಕಷ್ಟು ಉದಾಹರಣೆಗಳಿವೆ. ನೀವು ಸರಳವಾಗಿ ರೈತಸಂಘದ ಬಗ್ಗೆ ಅರ್ಥ ಮಾಡಿಕೊಳ್ಳಬೇಕಾದರೆ ರೈತ ಸಂಘದಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಮತ್ತು ಹೋರಾಟಗಳಲ್ಲಿ ಭಾಗವಹಿಸಿದರೆ ಮಾತ್ರ ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದು ಹೇಳಿದರು.
ರೈತ ಸಂಘದ ಕಾರ್ಯಕ್ರಮಗಳಲ್ಲಿ ಕಾರ್ಯಕರ್ತರಾಗಿ ಭಾಗವಹಿಸುವಾಗ ಹಸಿರು ಶಾಲು, ಹಸಿರು ಸೇನೆಯ ಆದರ್ಶ ತತ್ವಗಳನ್ನು ಅಳವಡಿಸಿಕೊಂಡು ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರ ಎಲ್ಲಾ ಹಕ್ಕುಗಳು ನೇರವಾಗಿ ಅವರಿಗೆ ತಲುಪುವಂತೆ ಮಾಡುವುದೇ ರೈತ ಸಂಘದ ಮುಖ್ಯ ಕರ್ತವ್ಯ ಎಂದು ಅವರು ಹೇಳಿದರು.
ರೈತ ಸಂಘದಲ್ಲಿ ಕಾರ್ಯಕರ್ತನಾದ ಮೇಲೆ ಸಂಘದಲ್ಲಿ ಇದ್ದು ಸಂಘವನ್ನು ದುರ್ಬಳಕೆ ಮಾಡಿಕೊಳ್ಳದೆ ಸಂಘದ ತತ್ವ ಮತ್ತು ನಿಯಮಗಳಿಗೆ ಬದ್ಧರಾಗಿ ರೈತರ ಪ್ರತಿಯೊಂದು ಸಮಸ್ಯೆಗೂ ಧ್ವನಿ ಎತ್ತುವದೇ ರೈತ ಸಂಘದ ಮೂಲ ಕರ್ತವ್ಯ ಅದಕ್ಕಾಗಿ ಇಂದಿನ ಯುವ ಪೀಳಿಗೆ ರೈತ ಸಂಘದ ಬಗ್ಗೆ ತಿಳಿದುಕೊಳ್ಳಬೇಕು ಅದರ ಬಗ್ಗೆ ಅಧ್ಯಯನ ಮಾಡಿ ಸಂಘಕ್ಕೆ ಸೇರ್ಪಡೆಗೊಂಡು ಕಾರ್ಯಕ್ರಮಗಳಲ್ಲಿ ಮತ್ತು ಹೋರಾಟಗಳಲ್ಲಿ ಭಾಗವಹಿಸಿ ರೈತರ ಸಮಸ್ಯೆಗಳಿಗೆ ಧ್ವನಿ ಎತ್ತುವಂತವರಾಗಬೇಕು ಎಂದು ಕಾರ್ಯಕ್ರಮದ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ರಂಗಹನುಮಯ್ಯ, ಗೌರವಾಧ್ಯಕ್ಷ ಮಲ್ಲೇಗೌಡ, ಅಧ್ಯಕ್ಷ ಜೆಸಿಪಿ ಚಂದ್ರಣ್ಣ, ಉಪಾಧ್ಯಕ್ಷ ಪಂಚಾಕ್ಷರಯ್ಯ, ಪ್ರಧಾನ ಕಾರ್ಯದರ್ಶಿ ನಂಜುಡಪ್ಪ, ಮಹಿಳಾ ಕಾರ್ಯದರ್ಶಿ ಭಾಗ್ಯಮ್ಮ, ಸಂಘಟನಾ ಕಾರ್ಯದರ್ಶಿ ಕಾಟಯ್ಯ, ಸಂಚಾಲಕರು ಲಿಂಗಣ್ಣ, ಚಂದ್ರಶೇಖರ್, ಸದಸ್ಯರಾದ ಶಬ್ಬೀರ್, ದೇವರಾಜು, ನಟರಾಜು , ನಾಗರಾಜು ಮುಂತಾದವರು ಹಾಜರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB