ರಾತ್ರಿ ವೇಳೆಯಲ್ಲಿ ದುಷ್ಕರ್ಮಿಗಳು ರೈತನ ತೋಟಕ್ಕೆ ಬೆಂಕಿಯಿಟ್ಟು ಪರಾರಿಯಾದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬಂದ್ರೆಹಳ್ಳಿಯಲ್ಲಿ ನಡೆದಿದೆ.
ಬಂದ್ರೆಹಳ್ಳಿ ಗ್ರಾಮದ ರೈತ ಮಧು ಅವರಿಗೆ ಸೇರಿದ ತೋಟಕ್ಕೆ ಬೆಂಕಿ ಹಚ್ಚಲಾಗಿದೆ. ತಡ ರಾತ್ರಿ ವೇಳೆ ತೋಟಕ್ಕೆ ಬೆಂಕಿ ಹತ್ತಿಕೊಂಡಿರುವುದನ್ನು ಕಂಡು ಬೆಂಕಿ ಆರಿಸಲು ಹರಸಾಹಸ ಪಟ್ಟರೂ ತೆಂಗು, ತೇಗ, ಹುಣಸೇ ಮರಗಳು ಸುಟ್ಟ ಭಸ್ಮವಾಗಿವೆ.
ತಡ ರಾತ್ರಿ ವೇಳೆ ಯಾರೋ ದುಷ್ಕರ್ಮಿಗಳು ತೋಟಕ್ಕೆ ಬೆಂಕಿ ಹಚ್ಚಿದ್ದಾರೆ. ತಡ ರಾತ್ರಿ ತೋಟ ಹೊತ್ತಿ ಉರಿದಿದ್ದು, ರೈತನಿಗೆ ಭಾರೀ ನಷ್ಟವಾಗಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy