ತುಮಕೂರು: ಜಿಲ್ಲೆ ತುರುವೇಕೆರೆ ಪಟ್ಟಣದ ಹಿರಣ್ಣಯ್ಯ ಬಯಲು ರಂಗಮಂದಿರದಲ್ಲಿ ಕೃಷಿ ಇಲಾಖೆಯ 2021—22 ನೇ ಸಾಲಿನ ಕೃಷಿ ಕಾರ್ಯಕ್ರಮದಡಿ ಸಮಗ್ರ ಕೃಷಿ ಮಾಹಿತಿ ರಥ ಹಾಗೂ ಆತ್ಮ ಯೋಜನೆಯಡಿ ರೈತರಿಗೆ ತರಬೇತಿ ಕಾರ್ಯಕ್ರಮ ಮತ್ತು ರೈತ ಫಲಾನುಭವಿಗಳಿಗೆ ಕೃಷಿ ಪರಿಕರಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕಿನ ಶಾಸಕ ಮಸಾಲ ಜಯರಾಮ್, ನಮ್ಮ ತುರುವೇಕೆರೆ ತಾಲೂಕಿನ ರೈತರು ತೆಂಗು, ಅಡಿಕೆ, ಬೆಳೆಗಳನ್ನು ಬೆಳೆದು ಭತ್ತ, ರಾಗಿ ಮುಂತಾದ ಆಹಾರಗಳನ್ನು ಬೆಳೆಯುವಲ್ಲಿ ನಿರಾಸಕ್ತಿ ಹೊಂದಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಅತಿ ಹೆಚ್ಚು ಭತ್ತ, ರಾಗಿ ಆಹಾರ ಧಾನ್ಯಗಳನ್ನು ಬೆಳೆದ ತಾಲೂಕಿನ ರೈತರಿಗೆ ಚಿನ್ನದ ಖಡಗ ತೊಡಿಸುವುದಾಗಿ ಘೋಷಣೆ ಮಾಡಿದರು.
ಇದೇ ವೇಳೆ ಆತ್ಮ ಯೋಜನೆಯಡಿ ತಾಲೂಕಿನಲ್ಲಿ ಸಮಗ್ರ ಕೃಷಿಯಲ್ಲಿ ತೊಡಗಿರುವ ರೈತರನ್ನು ಸನ್ಮಾನಿಸಿದ ಶಾಸಕರು, ವಿವಿಧ ಫಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಸಿ.ಎಸ್.ಆಶಾರಾಣಿ , ತಾಲೂಕು ಕೃಷಿ ಸಮಾಜದ ಅಧ್ಯಕ್ಷರಾದ ಕೆಂಪರಾಜು, ನೂತನವಾಗಿ ಅಧಿಕಾರ ವಹಿಸಿಕೊಂಡ ತಾಲೂಕು ತಹಶೀಲ್ದಾರ್ ರೇಣು ಕುಮಾರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಕುಮಾರಿ ಪೂಜಾ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಆಂಜನೇಯ ರೆಡ್ಡಿ, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ನೂರಾರು ರೈತರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ಸುರೇಶ್ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB