ಬಾಲಿವುಡ್ ನಟ ಮತ್ತು ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ವಿರುದ್ಧ 1996 ರಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡದೊಂದಿಗೆ ಶಿಕ್ಷೆಯನ್ನು ವಿಧಿಸಿದೆ. ವರದಿಗಳ ಪ್ರಕಾರ ಮತಗಟ್ಟೆ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಬಬ್ಬರ್ ಅವರನ್ನು ಜೈಲಿಗೆ ಕಳುಹಿಸಲಾಗಿದೆ.
ರಾಜ್ ಬಬ್ಬರ್ ಅವರಿಗೆ ನ್ಯಾಯಾಲಯವು 8,500 ರೂಪಾಯಿ ದಂಡವನ್ನೂ ವಿಧಿಸಿದೆ.ಸರ್ಕಾರಿ ಕರ್ತವ್ಯಗಳಲ್ಲಿ ಹಸ್ತಕ್ಷೇಪ ಮತ್ತು ದೈಹಿಕ ಹಲ್ಲೆ ನಡೆಸಿದ ಆರೋಪದಲ್ಲಿ ರಾಜ್ ಬಬ್ಬರ್ ಅವರನ್ನು ತಪ್ಪಿತಸ್ಥರೆಂದು ಗುರುತಿಸಲಾಗಿದೆ.
ಈ ಘಟನೆ 1996 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಡೆದಿತ್ತು. ಉತ್ತರ ಪ್ರದೇಶದ ವಜೀರ್ಗಂಜ್ ಪೊಲೀಸ್ ಠಾಣೆಯಲ್ಲಿ ಎರಡು ದಶಕಗಳ ಹಿಂದೆ ಬಬ್ಬರ್ ವಿರುದ್ಧ ಚುನಾವಣಾಧಿಕಾರಿಯೊಬ್ಬರು ದೂರು ದಾಖಲಿಸಿದ್ದರು. ಮಾಧ್ಯಮ ವರದಿಗಳ ಪ್ರಕಾರ, ರಾಜ್ ಬಬ್ಬರ್ ನಿಂದ ಹಲ್ಲೆಗೊಳಗಾದ ಚುನಾವಣಾ ಅಧಿಕಾರಿಯನ್ನು ಶ್ರೀ ಕೃಷ್ಣ ಸಿಂಗ್ ರಾಣಾ ಎಂದು ಹೆಸರಿಸಲಾಗಿದೆ.
ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಮತ್ತು ಹಲ್ಲೆ ಮಾಡಿದ ಆರೋಪದ ಮೇಲೆ ರಾಜ್ ಬಬ್ಬರ್ ಅವರನ್ನು ವಿಶೇಷ ನ್ಯಾಯಾಲಯ ಗುರುವಾರದಂದು ದೋಷಿ ಎಂದು ತೀರ್ಪು ನೀಡಿದೆ. ಸರ್ಕಾರಿ ಕರ್ತವ್ಯಗಳಿಗೆ ಅಡ್ಡಿಪಡಿಸಿದ ಆರೋಪ ಮತ್ತು ದೈಹಿಕ ಹಲ್ಲೆ ಆರೋಪ ಹೊರಿಸಲಾಗಿದ್ದು, ನಂತರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದೆ.
ರಾಣಾ ಅವರು ನೀಡಿದ ದೂರಿನ ಪ್ರಕಾರ, ಬಬ್ಬರ್ ಮತ್ತು ಅವರ ಕೆಲವು ಬೆಂಬಲಿಗರು ಲೋಕಸಭಾ ಚುನಾವಣೆಯ ಸಮಯದಲ್ಲಿ ಮತಗಟ್ಟೆಗೆ ನುಗ್ಗಿ ದೈಹಿಕವಾಗಿ ಹಲ್ಲೆ ನಡೆಸಿದ್ದರು.ಇದೆ ವೇಳೆ ಚುನಾವಣಾ ಅಧಿಕಾರಿಗಳ ಗಂಟಲು ಹಾಗೂ ಮೂಗಿಗೆ ಗಾಯಗಳಾಗಿದ್ದವು.
ರಾಜ್ ಬಬ್ಬರ್ ಅವರು ದಲಾಲ್, ದಿ ಗ್ಯಾಂಬ್ಲರ್, ಅಂದಾಜ್, ಆಂಖೇನ್, ಗುಂಡಗರ್ಡಿ ಮತ್ತು ಜಿದ್ದಿ ಚಲನಚಿತ್ರಗಳಲ್ಲಿನ ಪಾತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದಾರೆ.ಬಬ್ಬರ್ ಆರಂಭದಲ್ಲಿ 1989 ರಲ್ಲಿ ಜನತಾ ದಳಕ್ಕೆ ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು ಮತ್ತು ನಂತರ ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲೂ ಸಂಸದರಾಗಿದ್ದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz