nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ: ಹಾಡಿ ಹೊಗಳಿದ ಸಿದ್ದರಾಮಯ್ಯ
    ತುಮಕೂರು June 22, 2025

    ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ: ಹಾಡಿ ಹೊಗಳಿದ ಸಿದ್ದರಾಮಯ್ಯ

    By adminJune 22, 2025No Comments3 Mins Read
    siddaramaiah

    ತುಮಕೂರು: ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ, ಧರ್ಮ ಎಂಬ ಬೇಧವಿಲ್ಲದೇ ಬಡ ಮಕ್ಕಳ  ಶಾಲಾ ಶಿಕ್ಷಣಕ್ಕೆ ರಾಜಣ್ಣ ನೆರವು ನೀಡುತ್ತಾ ಬಂದಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ತಿಳಿಸಿದರು.

    ಅವರು ಶನಿವಾರ ಕೆ.ಎನ್ ರಾಜಣ್ಣ ಅವರ 75 ನೇ ಜನ್ಮ ದಿನಾಚರಣೆ ಮತ್ತು ಅಭಿನಂದನಾ ಗ್ರಂಥ ಲೋಕಾರ್ಪಣೆ ಮಾಡಿ ಮಾತನಾಡಿದರು.


    Provided by
    Provided by

    ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಅಸಮಾನತೆಯನ್ನು ತೊಲಗಿಸಿ ಎಲ್ಲರೂ ಮುಖ್ಯ ವಾಹಿನಿಗೆ ತರಬೇಕು ಎನ್ನುವುದೇ ನಿಜವಾದ ರಾಜಕೀಯ ಗುರಿ.  ಸಂವಿಧಾನ ಕೂಡ ಇದನ್ನೇ ಹೇಳುತ್ತದೆ. ಮನುಷ್ಯತ್ವ ಎನ್ನುವುದು ಪ್ರತಿಯೊಬ್ಬರಲ್ಲಿಯೂ ಇರಬೇಕು. ಅದು ಇದ್ದಾಗ ಮಾತ್ರ ಸಮಸಮಾಜ, ಬದಲಾವಣೆ ತರಲು ಸಾಧ್ಯವಾಗುತ್ತದೆ. ಇದಾಗಬೇಕಾದರೆ ಪ್ರತಿಯೊಬ್ಬರಿಗೂ ಆರ್ಥಿಕ ಹಾಗೂ ಸಮಾಜಿಕ ಶಕ್ತಿಯನ್ನು ತುಂಬಬೇಕು. ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸಾರ್ಥಕವಾಗಬೇಕಾದರೆ ಎಲ್ಲರೂ ಸ್ವಾವಂಬಿಗಳಾಗಬೇಕು ಎಂದು  ಅಂಬೇಡ್ಕರ್ ಹೇಳಿದ್ದಾರೆ.  ವೈರುಧ್ಯತೆ ಇರುವ ಸಮಾಜದಲ್ಲಿ ಸಮಾನ ಅವಕಾಶಗಳನ್ನು ನೀಡಿ  ಸಮಸಮಾಜ ನಿರ್ಮಾಣವಾಗದೇ ಹೋದರೆ ಪ್ರಜಾಪ್ರಭುತ್ವದ ಸೌಧವನ್ನು ಜನರೇ ಧ್ವಂಸ ಮಾಡುತ್ತಾರೆ ಎಂದೂ ಕೂಡ ಹೇಳಿದ್ದರು ಎಂದರು.

    ಸಾಲ ಮನ್ನಾ ಕಾರ್ಯಕ್ರಮದ ಶ್ರೇಯಸ್ಸು ರಾಜಣ್ಣನವರಿಗೆ ಸಲ್ಲಬೇಕು:

    ರೈತರು ಸಾಲ ಮನ್ನಾ ಮಾಡಬೇಕೆಂದು ಒತ್ತಡ ತಂದಿದ್ದ ಸಂದರ್ಭದಲ್ಲಿ 50,000 ರೂ.ಗಳ ವರೆಗೆ ಅಪೆಕ್ಸ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕುಗಳಲ್ಲಿ ರೈತರ ಸಾಲದ  ಸಂಪೂರ್ಣ ವಿವರಗಳನ್ನು ನೀಡಿದವರು ರಾಜಣ್ಣ. ಅವರಿಲ್ಲದೇ ಹೋಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದರು.

    ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅವಧಿಯಲ್ಲಿ  ಸಾಲ ಮನ್ನಾ ಮಾಡಿದ್ದರ ಪೈಕಿ 300 ಕೋಟಿಗಳು ಬಾಕಿಯಿದ್ದು, ರೈತರ ಕಾರ್ಯಕ್ರಮವಾಗಿರುವುದರಿಂದ ಇದನ್ನು ಮುಂದಿನ ದಿನಗಳಲ್ಲಿ ಚುಕ್ತಾ ಮಾಡಲಾಗುವುದು ಎಂದು ತಿಳಿಸಿದರು.  ಇದರ ಶ್ರೇಯ ರಾಜಣ್ಣನವರಿಗೆ ಸೇರಬೇಕಾಗಿದ್ದರೂ ಕುಮಾರಸ್ವಾಮಿಯವರು ಪಡೆದರು.  ರಾಜಣ್ಣ ನೇರ ನಡೆ ನುಡಿಯವರು, ನಿಸ್ಪೃಹವಾಗಿ ಮಾತನಾಡುವವರು. ಈ ಗುಣಗಳು ಸ್ವಾಭಿಮಾನದ ಸಂಕೇತ. ಸ್ವಾಭಿಮಾನವಿದ್ದವರು ಮೇಲೆ ಬರುತ್ತಾರೆ ಎಂದರು.

    ಬದ್ಧತೆಯಿರುವ ವಿಚಾರಗಳನ್ನು  ಯಾವುದೇ ಕಾರಣಕ್ಕೂ ಮರೆಯಬಾರದು:

    ದಲಿತರು ವಿದ್ಯಾವಂತರು, ಶ್ರೀಮಂತರಾದರೂ ಅವರನ್ನು ಏಕವಚನದಲ್ಲಿಯೇ ಮಾತನಾಡಿಸುತ್ತೇವೆ. ಇದು ದಾಸ್ಯದ ಸಂಕೇತ. ಮೀಸಲು ಕ್ಷೇತ್ರದಲ್ಲಿ ರಾಜಣ್ಣ ಸ್ಪರ್ಧೆ ಮಾಡದೇ ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ. ರಾಜಕೀಯದಲ್ಲಿ ಸೋಲು ಗೆಲವು ಸಾಮಾನ್ಯ.  ನಾನೂ ಕೂಡ ನಾಲ್ಕು ಬಾರಿ  ಸೋತು,  ಒಂಭತ್ತು ಬಾರಿ ಗೆದ್ದಿದ್ದೇನೆ. ಸೋತರೂ ಗೆದ್ದರೂ ಬದ್ಧತೆಯಿರುವ ವಿಚಾರಗಳಲ್ಲಿ ಯಾವುದೇ ಕಾರಣಕ್ಕೂ ಮರೆಯದೇ, ವಿಚಲಿತರಾಗಬಾರದು. ಇದನ್ನು ಮಾಡಿದರೆ ನಮ್ಮ ಬದುಕು ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.  ಹುಟ್ಟು ಸಾವಿನ ನಡುವೆ ಬದುಕಿನ ಸಾರ್ಥಕಗೊಳಿಸಿಕೊಳ್ಳಬೇಕು. ಹುಟ್ಟಿದ ಮೇಲೆ ನನ್ನ ಜೀವನ ಸಾರ್ಥಕವಾಗಿದೆಯೇ ಎಂದು ಹಿಂದಿರುಗಿ ನೋಡಬೇಕು. ನಿಮಗೆ ನಿಮ್ಮ ಬದುಕು ಸಮಾಧಾನ ತಂದು ಕೊಡುವಂತಿರಬೇಕು.  ರಾಜಣ್ಣ ನವರದ್ದು ಸಾರ್ಥಕ ಬದುಕು ಎಂದರು.

    ಎಲ್ಲರಿಗೂ ಸಮಾನ ಅವಕಾಶಗಳು ದೊರೆಯಬೇಕು:

    ಹಣೆಬರಹ,  ಕರ್ಮ ಸಿದ್ದಾಂತಗಳನ್ನು ಬಸವಾದಿ ಶರಣರು ತ್ಯಜಿಸಿದ್ದರು.  ದೇವರು ಯಾರ ನಡುವೆಯೂ ತಾರತಮ್ಯ ಮಾಡುವುದಿಲ್ಲ.  ಮೇಲು ಕೀಳು ಎಂಬುದಿಲ್ಲ.  ಹುಟ್ಟಿನಿಂದ ಯಾರೂ ದಡ್ಡರೂ ಅಲ್ಲ, ಮೇಧಾವಿಗಳೂ ಅಲ್ಲ. ಅವಕಾಶಗಳು ಸಿಗಬೇಕು ಎಂದರು. ರಾಜಣ್ಣ ಅವರು ದಲಿತ ಜನಾಂಗದಲ್ಲಿ ಹುಟ್ಟಿ ಸಮರ್ಥ ಸಹಕಾರಿಯಾವುದು ಸುಲಭವಲ್ಲ.  ಸಂವಿಧಾನ ಇರದೇ ಹೋಗಿದ್ದರೆ ನಾವ್ಯಾರೂ ಮುಖ್ಯವಾಹಿನಿಗೆ ಬರಲು ಸಾಧ್ಯವಿರಲಿಲ್ಲ ಎಂದ ಮುಖ್ಯಮಂತ್ರಿಗಳು,  ನಮ್ಮ ಸರ್ಕಾರ ಬಂದ ನಂತರ ಸಮಾಜದಲ್ಲಿ ಬಡತನ ತೊಡೆದುಹಾಕಲು  ಸಾಮಾಜಿಕ, ಆರ್ಥಿಕ ಶಕ್ತಿಯನ್ನು ತುಂಬುವ ಪ್ರಯತ್ನವನ್ನು ಮಾಡಿದ್ದೇವೆ ಎಂದರು.

    ಜನರಲ್ಲಿ ಆರ್ಥಿಕ ಶಕ್ತಿ ತುಂಬಿದ ಗ್ಯಾರಂಟಿ ಯೋಜನೆಗಳು:

    ಗ್ಯಾರಂಟಿ ಯೋಜನೆಗಳು ಎಲ್ಲ ಜಾತಿ ಧರ್ಮದವರಿಗೆ ಒದಗಿಸಲಾಗಿದೆ. 1.64 ಕೋಟಿ ಜನರಿಗೆ ಗೃಹಜ್ಯೋತಿ, 1.22 ಕೋಟಿ ಜನರಿಗೆ ಗೃಹಲಕ್ಷ್ಮೀ, ಎಲ್ಲ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ, ಅನ್ನ ಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಜನರನ್ನು ತಲುಪಿದೆ ಎಂದರು.

    ಇದೇ ಸಂದರ್ಭದಲ್ಲಿ ರಾಜಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಗಳು ನೂರು ವರ್ಷಗಳಿಗೂ ಹೆಚ್ಚು ಕಾಲ  ಬಾಳಲಿ ಎಂದು ಹಾರೈಸಿದರು.  ಸಚಿವರಾದ ಜಿ. ಪರಮೇಶ್ವರ್, ಸಾಹಿತಿ ಬರಗೂರು ರಾಮಚಂದ್ರಪ್ಪ, ಕೆ.ಎನ್.ರಾಜಣ್ಣ ಅವರ ಕುಟುಂಬ ವರ್ಗ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.