ರಾಯಚೂರು: ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರಾಜು ಕಾಗೆ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
ರಾಯಚೂರಿನಲ್ಲಿ ಮಾತನಾಡಿದ ಅವರು, ರಾಜು ಕಾಗೆ ಅವರನ್ನು ಕರೆದು ಮಾತನಾಡುತ್ತೇನೆ. ಸಿಎಂ ಅನುದಾನ ಅಂತ ಇದೆಯಾ? ಅವರು ಹೇಳ್ತಾರಪ್ಪ, ನಾನು ಕರೆದು ಮಾತನಾಡ್ತೀನಿ ಎಂದರು.
ರಾಯಚೂರು ಕಾರ್ಯಕ್ರಮಕ್ಕೆ ಬಿ.ಆರ್ ಪಾಟೀಲ್ ಅವರನ್ನು ಕರೆದರೂ ಬಂದಿಲ್ಲ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಕರೆದಿದ್ದೆ, ಆದರೆ ಅವರು ಆಯೋಜಕರು ಕರೆದಿಲ್ಲ, ಹಾಗಾಗಿ ಬರಲ್ಲ ಅಂದರು. ಜೂನ್ 25ಕ್ಕೆ ಭೇಟಿ ಮಾಡುತ್ತೇನೆ ಅಂದಿದ್ದಾರೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW