nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ

    July 26, 2026

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    • ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?
    • ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್
    • ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
    • ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ
    • ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಳ ಸಾಮೂಹಿಕ ವಿವಾಹಗಳಿಗೆ ಆದ್ಯತೆ ನೀಡಿ: ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಸಲಹೆ
    ತುಮಕೂರು August 22, 2024

    ಸರಳ ಸಾಮೂಹಿಕ ವಿವಾಹಗಳಿಗೆ ಆದ್ಯತೆ ನೀಡಿ: ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಸಲಹೆ

    By adminAugust 22, 2024No Comments2 Mins Read
    reddy

    ಚಾಮರಾಜನಗರ: ಸರಳ ವಿವಾಹಗಳಿಗೆ ಒತ್ತು ನೀಡುವ ಮೂಲಕ ದುಂದು ವೆಚ್ಚದ ಮದುವೆಗೆ ಕಡಿವಾಣ ಹಾಕಬೇಕಿದೆ ಎಂದು ಮುಜರಾಯಿ, ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಸಲಹೆ ಮಾಡಿದರು.

    ಮಹದೇಶ್ವರಬೆಟ್ಟದ ಶ್ರೀ ಮಲೈ ಮಹದೇಶ್ವರಸ್ವಾಮಿ ದೇವಸ್ಥಾನದ ರಂಗಮಂದಿರ ಆವರಣದಲ್ಲಿಂದು ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೂತನ ವಧುವರರಿಗೆ ಮಾಂಗಲ್ಯ, ವಸ್ತ್ರ ವಿತರಣೆ ಮಾಡಿ ಬಳಿಕ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಸರಳ ವಿವಾಹಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಮೂಲಕ ಆಡಂಬರ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬಹುದು. ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬರುತ್ತಾರೆ. ಪ್ರಾಧಿಕಾರ ರಚನೆಯಾದ ಬಳಿಕ ಬೆಟ್ಟದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳಾಗಿವೆ. ಇನ್ನೂ ಸಾಕಷ್ಟು ಅಭಿವೃದ್ದಿಯಾಗಬೇಕಿರುವ ಕಾರ್ಯಗಳಿಗೆ ಹೆಚ್ಚಿನ ಗಮನ ನೀಡಿ ಅಗತ್ಯ ನೆರವು ಸಹಕಾರ ನೀಡಲಾಗುವುದು ಎಂದರು.

    ರಾಜ್ಯದ ಕೆಲವು ದೇವಾಲಯಗಳಿಗೆ 50 ಲಕ್ಷದಿಂದ 1 ಕೋಟಿವರೆಗೆ ಭಕ್ತರು ಭೇಟಿ ನೀಡುತ್ತಾರೆ. ಇಂತಹ ದೇವಸ್ಥಾನಗಳಲ್ಲಿ ಪ್ರಾಧಿಕಾರ ರಚನೆ ಮಾಡಲಾಗಿದೆ. ಮುಂದಿನ ನಾಲ್ಕೈದು ವರ್ಷಗಳಲ್ಲಿ ಅಭಿವೃದ್ದಿಯಾಗಲಿದ್ದು, ಭಕ್ತರಿಗೆ ಅನುಕೂಲವಾಗಲಿದೆ ಎಂದು ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

    ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮೀಜೀ ಅವರು ಮಾತನಾಡಿ ಬೇರೆ ಕಡೆಯಾಗುವ ವಿವಾಹಕ್ಕಿಂತ ಧಾರ್ಮಿಕ ಕ್ಷೇತ್ರಗಳಲ್ಲಾಗುವ ವಿವಾಹಗಳು ವಿಭಿನ್ನವಾಗಿರುತ್ತದೆ. ಧಾರ್ಮಿಕ ಕ್ಷೇತ್ರಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವುದರಿಂದ ಭಕ್ತಿ ಭಾವನೆ ಬರಲಿದೆ ಎಂದರು.

    ದಂಪತಿಗಳು ದ್ವೇಷ, ಅಸೂಯೆ ಬಿಟ್ಟು ಬದುಕಬೇಕು. ಇದರಿಂದ ಸಮಾಜಕ್ಕೂ ಒಳಿತಾಗುತ್ತದೆ. ಪರಸ್ಪರ ಅರ್ಥಮಾಡಿಕೊಂಡು ಜೀವನ ನಡೆಸಿದರೆ ಕುಟುಂಬದಲ್ಲಿ ಬಾಂಧವ್ಯ ಇರಲಿದೆ ಎಂದು ಸುತ್ತೂರು ಶ್ರೀಗಳು ತಿಳಿಸಿದರು.

    ದಿವ್ಯ ಸಮ್ಮುಖ ವಹಿಸಿ ಮಾತನಾಡಿದ ಸಾಲೂರು ಬೃಹನ್ಮಠಾಧ್ಯಕ್ಷರಾದ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ದೇವಸ್ಥಾನಗಳು ಸನಾತನ ಸಂಸ್ಕøತಿಯ ಪ್ರತೀಕವಾಗಿದೆ. ಮಲೆಮಹದೇಶ್ವರಸ್ವಾಮಿ ಕ್ಷೇತ್ರಕ್ಕೆ ರಾಜ್ಯವÀಲ್ಲದೆ ನೆರೆಯ ತಮಿಳುನಾಡಿನಿಂದಲೂ ಸಾಕಷ್ಟು ಭಕ್ತರು ಬರುತ್ತಿದ್ದು, ತನ್ನದೇ ಆದ ಮಹತ್ವ ಪಡೆದುಕೊಂಡಿದೆ. ಕ್ಷೇತ್ರದಲ್ಲಿ ಸಾಮೂಹಿಕ ವಿವಾಹವನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದರು.

    ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಸರಳವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಮದುವೆಯಾಗುವುದರಿಂದ ಕುಟುಂಬಗಳಿಗೆ ಆರ್ಥಿಕ ಹೊರೆ ತಪ್ಪಲಿದೆ. ಹನೂರು ಕ್ಷೇತ್ರವು ಭೌಗೋಳಿಕವಾಗಿ ವಿಸ್ತಾರವಾಗಿದೆ. ಮುಜರಾಯಿ ಇಲಾಖೆಯಿಂದ ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಅನುದಾನದ ನೆರವು ಅಗತ್ಯವಿದೆ ಎಂದರು.

    ಮಲೆಮಹದೇಶ್ವರಬೆಟ್ಟಕ್ಕೆ ಕೆ.ಎಸ್.ಆರ್.ಟಿ.ಸಿ ವತಿಯಿಂದ ಸಾಕಷ್ಟು ಬಸ್ಸುಗಳನ್ನು ಬಿಡಲಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಾರಿಗೆ ಬಸ್ಸುಗಳನ್ನು ನಿಯೋಜಿಸಬೇಕು. ಹನೂರು ಕ್ಷೇತ್ರದಲ್ಲಿ ಕೂಲಿ ಕಾರ್ಮಿಕರು, ಕೃಷಿಕರು, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಇನ್ನೂ ಹೆಚ್ಚು ಬಸ್ಸುಗಳು ಕಾರ್ಯಾಚರಣೆ ಮಾಡಬೇಕಿದೆ ಎಂದು ಶಾಸಕರಾದ ಮಂಜುನಾಥ್ ಅವರು ತಿಳಿಸಿದರು.

    ಪ್ರಾಸ್ತವಿಕ ನುಡಿಗಳನ್ನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಲೆಮಹದೇಶ್ವರಬೆಟ್ಟದಲ್ಲಿ 1989 ರಿಂದ ಸಾಮೂಹಿಕ ಸರಳ ವಿವಾಹ ಮಹೋತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ. ಇದುವರೆಗೆ 1867 ಜೋಡಿಗಳು ಶ್ರೀ ಕ್ಷೇತ್ರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿವೆ. ಇಂದು 64 ಜೋಡಿಗಳು ನವ ಜೀವನಕ್ಕೆ ಪಾದಾರ್ಪಣೆ ಮಾಡಿವೆ. ಈ ಪುಣ್ಯ ಕ್ಷೇತ್ರದಲ್ಲಿ ವಿವಾಹವಾದವರಿಗೆ ಮಲೆಮಹದೇಶ್ವರನ ಆಶೀರ್ವಾದ ಲಭಿಸಲಿ. ಶಾಂತಿ ಸಮೃದ್ದಿ, ಸುಖ ಜೀವನ ನಡೆಸುವಂತಾಗಲಿ ಎಂದು ಹಾರೈಸಿದರು.

    ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚಾಮರಾಜನಗರ ಜಿಲ್ಲಾ ಹಾಲು ಉತ್ಪಾದಕರ ಸಹಾಕಾರ ಸಂಘದ ಅಧ್ಯಕ್ಷರಾದ ವೈ.ಸಿ. ನಾಗೇಂದ್ರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಮಹದೇಶ್ವರಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರ್ಚನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಶ್ರೀ ಮಲೈಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು, ಉಪಕಾರ್ಯದರ್ಶಿ ಚಂದ್ರಶೇಖರ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ

    July 24, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ

    July 26, 2026

    ಸರಗೂರು / ಮೈಸೂರು: ಅಮ್ಮ ವಸುಂಧರೆ ಸಾಂಸ್ಕೃತಿಕ ಶೈಕ್ಷಣಿಕ ಟ್ರಸ್ಟ್ ವತಿಯಿಂದ ಮೈಸೂರಿನ ಜೆ.ಎಲ್.ಬಿ ರೋಟರಿ ಕ್ಲಬ್‌ನಲ್ಲಿ ಶನಿವಾರ ಆಯೋಜಿಸಿದ್ದ…

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.