ಬೆಂಗಳೂರು: ನಾಡಿನ ಸಮಸ್ತ ಜನತೆಯಲ್ಲಿ ನನ್ನ ವಿನಮ್ರ ಮನವಿ ಇಷ್ಟೆ. ರಾಮನವಮಿ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ. ಆದರೆ, ನಮ್ಮ ರಾಮಸ್ಮರಣೆ ಇನ್ನೊಬ್ಬರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿಕೊಂಡರು.
ರಾಮನ ಹೆಸರಿನಲ್ಲಿ ಶೋಭಾ ಯಾತ್ರೆ ನಡೆಸುವುದನ್ನು ನಾನು ಕೂಡ ಬೆಂಬಲಿಸುತ್ತೇನೆ. ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು. ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ. ಇದರಿಂದ ಶಾಂತಿ ಕದಡುತ್ತದೆ. ಹೀಗೆ ಆಗುವುದು ಬೇಡ ಎಂದು ಎಂದು ಹೇಳಿದ್ದಾರೆ.
ಒಂದು ಸಮುದಾಯದ ಜನರು ಈಗ ಉಪವಾಸ ಆಚರಣೆಯಲ್ಲಿದ್ದಾರೆ. ಈ ಸಮಯದಲ್ಲಿ ಅವರ ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಅದಕ್ಕೆ ಅವಕಾಶವನ್ನೂ ಕೊಡಬಾರದು ಎಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5