ತುಮಕೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವವರಿಗೆ ಕರ್ನಾಟಕ ರಣಧೀರರ ವೇದಿಕೆ (ರಿ.) ಕೊಡಮಾಡುವ ರಾಣಿಚೆನ್ನಭೈರಾದೇವಿ ಪ್ರಶಸ್ತಿ– 2024ಕ್ಕೆ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜಮ್ ಜಮ್ ಭಾಜನರಾಗಿದ್ದಾರೆ.
ಕನ್ನಡ ನಾಡು–ನುಡಿ, ನೆಲ, ಜಲ, ಭಾಷೆ, ಸಾಹಿತ್ಯ ಹಾಗೂ ಸಮಾಜಸೇವೆಯಲ್ಲಿ ಸೇವೆ ಸಲ್ಲಿಸಿರುವವರಿಗೆ ಈ ಪ್ರಶಸ್ತಿ ನೀಡಲಾಗುವುದು. ಇತ್ತೀಚೆಗೆನೆಲಮಂಗಲದಲ್ಲಿ ನಡೆದ 5ನೇ ವರ್ಷದ ಕನ್ನಡರಾಜ್ಯೋತ್ಸವ ಹಾಗೂ ಭುವನೇಶ್ವರಿ ಹಬ್ಬ ಮತ್ತು ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರ 2024ರ ಸಮಾರಂಭದಲ್ಲಿ ಪ್ರಶಸ್ತಿ ನೀಡಿಗೌರವಿಸಲಾಯಿತು.
ಕರ್ನಾಟಕ ರಣಧೀರರ ವೇದಿಕೆ (ರಿ.) ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ತಿಮ್ಮಪ್ಪಗೌಡ ಕೆ.ಎಸ್.,ಮತ್ತಿತರಗಣ್ಯರು ಈ ಸಂದರ್ಭ ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx