nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025
    Facebook Twitter Instagram
    ಟ್ರೆಂಡಿಂಗ್
    • ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್
    • ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ
    • ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್
    • ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!
    • ನಾವು ಏಕೆ ಹೀಗೆ? ಯೋಚಿಸುತ್ತಾ ಹೋದರೆ | ಹೀಗೊಂದು ಚಿಂತನೆ
    • ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ
    • ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ
    • ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ ಭಾಗ್ಯವಿಧಾತನ ಅಪರೂಪದ ಛಾಯಾಚಿತ್ರ ಪ್ರದರ್ಶನ
    ತುಮಕೂರು April 15, 2025

    ಭಾರತ ಭಾಗ್ಯವಿಧಾತನ ಅಪರೂಪದ ಛಾಯಾಚಿತ್ರ ಪ್ರದರ್ಶನ

    By adminApril 15, 2025No Comments3 Mins Read
    ambedkar photos

    ತುಮಕೂರು: ಭಾರತ ರತ್ನ, ಸಂವಿಧಾನ ಶಿಲ್ಪಿ, ಭಾರತ ಭಾಗ್ಯವಿಧಾತ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಇಂದು ಚಾಲನೆ ನೀಡಿದರು.

    ಡಾ.ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಅನಾವರಣ ಮತ್ತು ಅವರ 134ನೇ ಜಯಂತಿ ಹಾಗೂ ಡಾ.ಬಾಬು ಜಗಜೀವನ ರಾಂ ಅವರ 118ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸೋಮವಾರ ಮಹಾನಗರ ಪಾಲಿಕೆ ಆವರಣದಲ್ಲಿಂದು ಇಬ್ಬರು ಮಹನೀಯರ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.


    Provided by
    Provided by

    ಛಾಯಾಚಿತ್ರ ಪ್ರದರ್ಶನದಲ್ಲಿ ಡಾಃ ಬಿ.ಆರ್. ಅಂಬೇಡ್ಕರ್ ಹಾಗೂ ಡಾ: ಬಾಬು ಜಗಜೀವನ ರಾಂ ಅವರ ಸುಮಾರು 116 ಅಪರೂಪದ ಛಾಯಾಚಿತ್ರಗಳನ್ನು ಇರಿಸಲಾಗಿತ್ತು.

    ಅಂಬೇಡ್ಕರ್ ಅವರ ಛಾಯಾಚಿತ್ರ ಪ್ರದರ್ಶನ:

    ಅಂಬೇಡ್ಕರ್ ಅವರು 1942ರ ಜುಲೈ 20ರಂದು ಕಮ್ಯಾಂಡಿಂಗ್ ಆಫೀಸರ್ ಹುದ್ದೆಯಲ್ಲಿದ್ದಾಗ ಮಿಲಿಟರಿ ಅಧಿಕಾರಿ ಹಾಗೂ ಸೈನಿಕರೊಂದಿಗೆ, 1956ರ ಅಕ್ಟೋಬರ್ 14ರಂದು ಬೌದ್ಧಧರ್ಮಕ್ಕೆ ದೀಕ್ಷೆ ಪಡೆದ, 1950 ಮೇ 8ರಂದು ರಾಷ್ಟçಪತಿ ಭವನದಲ್ಲಿ ಮೊದಲ ಕಾನೂನು ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ, 1956ರ ಅಕ್ಟೋಬರ್ 15ರಂದು ನಾಗಪುರದಲ್ಲಿ ಧಮ್ಮ ದೀಕ್ಷಾ ಸಮಾರಂಭ, 1954ರ ಅಕ್ಟೋಬರ್ 29ರಂದು ಮುಂಬಯಿಯಲ್ಲಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡ, 1955ರ ನವೆಂಬರ್ 11ರ ಪತ್ನಿ ರಮಾಬಾಯಿ ಅವರೊಂದಿಗೆ ದೆಹಲಿಯ ಬಿರ್ಲಾ ಮಂದಿರದ ಬುದ್ಧವಿಹಾರಕ್ಕೆ ಭೇಟಿ ನೀಡಿದ ಸಂದರ್ಭ, 1952ರಲ್ಲಿ ಮೊದಲ ಲೋಕಸಭಾ ಚುನಾವಣೆಯಲ್ಲಿ ಪ್ರತಿನಿಧಿಸಿದ, 1950ರ ಜನವರಿ 26ರಂದು ಸಂವಿಧಾನ ಜಾರಿಗೆ ಬಂದ ದಿನದಂದು ಪ್ರಧಾನಿ ಜವಾಹರ ಲಾಲ್ ನೆಹರೂ ಅವರೊಂದಿಗೆ ಮಾತುಕತೆ, 1951ರ ಸೆಪ್ಟೆಂಬರ್ 27ರಂದು ಹಿಂದು ಕೋಡ್ ಬಿಲ್ ತಿರಸ್ಕೃತಗೊಂಡ ಸಂದರ್ಭದಲ್ಲಿ ಕಾನೂನು ಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ, 1952ರ ಡಿಸೆಂಬರ್ 22ರಂದು ಪೂನಾದಲ್ಲಿ ಜಿಲ್ಲಾ ಕಾನೂನು ಗ್ರಂಥಾಲಯ ಉದ್ಘಾಟನೆ, 1946ರಲ್ಲಿ ಲಂಡನ್ ಭೇಟಿ, 1942ರ ಏಪ್ರಿಲ್ 14ರಂದು ದಾದರ್ ನ ಹಿಂದೂ ಕಾಲೋನಿಯಲ್ಲಿ ತಮ್ಮ ಜನ್ಮ ದಿನಾಚರಣೆ, 1950ರ ಜನವರಿ 26ರಂದು ಮೊದಲ ಸ್ವತಂತ್ರ ಕ್ಯಾಬಿನೆಟ್ ಸಚಿವರಾದ ನೆಹರು, ಮೌಲಾನಾ ಅಬ್ದುಲ್ ಕಲಾಂ ಆಜಾದ್, ಚಕ್ರವರ್ತಿ ರಾಜಾಗೋಪಾಲಾಚಾರಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಜಗಜೀವನ ರಾಂ, ರಾಜಕುಮಾರಿ ಅಮ್ರಿತ್ ಕೌರ್ ಹಾಗೂ ಮತ್ತಿತರರೊಂದಿಗೆ ಅಂಬೇಡ್ಕರ್, 1949ರ ಮೇ 16ರಂದು ಸಂವಿಧಾನ ಕರಡು ಸಿದ್ಧತೆಯಲ್ಲಿ ತೊಡಗಿರುವ, ಕಾರ್ಮಿಕ ಮಂತ್ರಿಯಾಗಿದ್ದಾಗ 1943ರ ಡಿಸೆಂಬರ್ 9ರಂದು ಬಿಹಾರದ ಧನ್ಬಾದ್ನಲ್ಲಿ ಕಾರ್ಮಿಕರ ಕಾಲೋನಿಗೆ ಭೇಟಿ ನೀಡಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ, 1956ರ ನವೆಂಬರ್ 20ರಂದು ನೇಪಾಳದ ಕಠ್ಮಂಡುವಿನಲ್ಲಿ ನಡೆದ ವರ್ಲ್ಡ್ ಫೆಲೋಶಿಪ್ ಆಫ್ ಬುದ್ಧಿಸ್ಟ್ ಕುರಿತ 4ನೇ ಸಮ್ಮೇಳನದಲ್ಲಿ ಪಾಲ್ಗೊಂಡ, ಸಂದರ್ಭ ಸೇರಿದಂತೆ ಮತ್ತಿತರ ಹಲವಾರು ವಿಶೇಷ ಸಂದರ್ಭಗಳಲ್ಲಿ ಸೆರೆ ಹಿಡಿಯಲಾದ ಅಪರೂಪದ ಛಾಯಾಚಿತ್ರಗಳನ್ನು ಈ ಪ್ರದರ್ಶನದಲ್ಲಿ ಕಾಣಬಹುದಾಗಿತ್ತು.

    ಬಾಬು ಜಗಜೀವನ ರಾಂ ಅವರ ಛಾಯಾಚಿತ್ರ ಪ್ರದರ್ಶನ:

    ಮತ್ತೊಬ್ಬ ಮಹನೀಯ, ದೇಶ ಕಂಡ ಧೀಮಂತ ವ್ಯಕ್ತಿ, ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನರಾಂ ಅವರ ಆಯ್ದ ಛಾಯಾಚಿತ್ರಗಳನ್ನೂ ಸಹ ಪ್ರದರ್ಶಿಸಲಾಗಿತ್ತು.

    ಬಾಬೂಜಿಯವರು 1967ರ ಫೆಬ್ರುವರಿ 4ರಂದು ವಿಕ್ರಮ್ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಪಡೆದ ಸಂದರ್ಭ, 1971ರಲ್ಲಿ ದೆಹಲಿಯಲ್ಲಿ ಪ್ರಧಾನಿ ಇಂದಿರಾಗಾAಧಿಯವರು ಬಾಬೂಜಿಯವರನ್ನು ಗೌರವಿಸಿದ ಸಂದರ್ಭ, 1966ರಲ್ಲಿ ಫಿಲಿಫೈನ್ಸ್ ಉಪಾಧ್ಯಕ್ಷರ ಮನೆಯಲ್ಲಿ ಔತಣಕೂಟ, 1986ರ ಏಪ್ರಿಲ್ 5ರಂದು ಪ್ರಧಾನಿ ರಾಜೀವಗಾಂಧಿ ಅವರು ಬಾಬೂಜಿ ಅವರಿಗೆ ಜನ್ಮ ದಿನಾಚರಣೆ ಶುಭ ಕೋರುತ್ತಿರುವ, ತಮಿಳುನಾಡಿನ ಮುಖ್ಯಮಂತ್ರಿ ಎಂ.ಜಿ. ರಾಮಚಂದ್ರನ್ ಅವರೊಂದಿಗೆ, ತಾಷ್ಕೆಂಟ್ ಅಧ್ಯಕ್ಷೆ ನಸಿರುದ್ದೀನೋವಾ ಅವರೊಂದಿಗೆ, 1974ರಲ್ಲಿ ಇಟಲಿಯಲ್ಲಿ ನಡೆದ ವಿಶ್ವ ಆಹಾರ ಸಮ್ಮೇಳನದಲ್ಲಿ ಪಾಲ್ಗೊಂಡ, ನವದೆಹಲಿಯಲ್ಲಿ ಅಮೆರಿಕಾ ಅಧ್ಯಕ್ಷ ರಿಚರ್ಡ್ ನಿಕ್ಸನ್-6 ಅವರೊಂದಿಗೆ ಬಾಬು ಜಗಜೀವನ ರಾಂ ಅವರು ಕಳೆದ ಕ್ಷಣಗಳ ಬಗ್ಗೆ ಸೆರೆ ಹಿಡಿಯಲಾದ ಛಾಯಾಚಿತ್ರಗಳು ಬಾಬೂಜಿಯವರ ಜೀವನ ಚರಿತ್ರೆಯ ಹಲವು ಹಂತಗಳನ್ನು ನೋಡುಗರಿಗೆ ಪರಿಚಯಿಸಿದವು.

    ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ:

    ಡಾ: ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ ರಾಂ ಅವರ ಅಪರೂಪದ ಛಾಯಾಚಿತ್ರ ಪ್ರದರ್ಶನವು ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಜನರು ಸಾಲುಗಟ್ಟಿ ನಿಂತು ಧೀಮಂತ ನಾಯಕರ ಜೀವನದ ಹಲವು ಮಜಲುಗಳ ಬಗ್ಗೆ ತಿಳಿದುಕೊಂಡರು.

    ಈ ಸಂದರ್ಭದಲ್ಲಿ ಕೇಂದ್ರ, ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ, ಸಹಕಾರ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಹಾಗೂ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಕುಣಿಗಲ್ ಶಾಸಕ ಡಾ.ಹೆಚ್.ಡಿ. ರಂಗನಾಥ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ, ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

     

    admin
    • Website

    Related Posts

    ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ

    December 10, 2025

    ತುಮಕೂರು| ಉರ್ದು ಶಾಲೆ: ಸ್ವಂತ ಕಟ್ಟಡವೂ ಇಲ್ಲ, ಬಾಡಿಗೆಯೂ ಪಾವತಿಸಿಲ್ಲ

    December 9, 2025

    ಶಾಲಾ ಶಿಕ್ಷಣದಲ್ಲಿ ಭಗವದ್ಗೀತೆ: ಕುಮಾರಸ್ವಾಮಿ ಹೇಳಿಕೆಗೆ ಸಿಪಿಎಂ ಖಂಡನೆ

    December 9, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಕೊರಟಗೆರೆ : ಎತ್ತಿನಹೊಳೆ ಯೋಜನೆ ಅನುಷ್ಠಾನ ವಿಳಂಬದ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಬಾಕಿ ಉಳಿದಿರುವ 151 ಎಕರೆ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ…

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    December 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.