ಪಾವಗಡ: ತಾಲ್ಲೂಕಿನ ಕಸಬಾ ಹೋಬಳಿ ಗಡಿ ಭಾಗದ ಕನ್ನಮೆಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬರಪಾಳ್ಯ ಮತ್ತು ಹನುಮಯ್ಯಪಾಳ್ಯ ದಿಂದ ಹೊನ್ನಮೆಡಿ ಮತ್ತು ಕನ್ನಮೆಡಿಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸಾರ್ವಜನಿಕ ಸಂಚಾರಕ್ಕೆ ಯೋಗ್ಯವಲ್ಲದ ರಸ್ತೆಯಾಗಿ ಮಾರ್ಪಟ್ಟಿದೆ.
ರಸ್ತೆಗಳು ಸಂಪೂರ್ಣ ಹೊಂಡಮಯವಾಗಿದ್ದು, ರಸ್ತೆಗೆ ಹಾಕಲಾಗಿರುವ ಜಲ್ಲಿಗಳು ಎದ್ದು, ಜಲ್ಲಿಕಲ್ಲಿನ ರಸ್ತೆಯಂತೆ ಕಂಡು ಬಂದಿದೆ. ರಸ್ತೆ ಸಂಪೂರ್ಣವಾಗಿ ಧೂಳುಮಯವಾಗಿದ್ದು, ಈ ರಸ್ತೆಯಲ್ಲಿ ಪ್ರಯಾಣಿಕರು ಹಾಗೂ ಇಲ್ಲಿನ ಗ್ರಾಮಸ್ಥರು ದಿನನಿತ್ಯ ಧೂಳಿನಿಂದ ಕಂಗೆಡುವಂತಾಗಿದೆ.
ರಸ್ತೆ ಅವ್ಯವಸ್ಥೆಯಿಂದ ಈ ಭಾಗದಲ್ಲಿ ಬಸ್ ಗಳ ಕೊರತೆ ಕೂಡ ಆಗಿದೆ. ಇದರಿಂದ ಶಾಲೆಗೆ ಹೋಗಲು ಕೂಡ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿನಿಯೊಬ್ಬರು ಮಾಧ್ಯಮದ ಜೊತೆಗೆ ಮಾತನಾಡುತ್ತಾ ದೂರಿದರು.
ಹೊನ್ನಮೆಡಿ ಮಧ್ಯದಲ್ಲಿ ಇರುವ ಹಳ್ಳದ ಮೋರಿಯೊಂದು ಬಿದ್ದು ಸುಮಾರು ಎರಡು ಮೂರು ವರ್ಷಗಳು ಕಳೆದರೂ ಇಲ್ಲಿನ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಸ್ಥಳೀಯ ಶಾಸಕರಂತೂ ಈ ಸಮಸ್ಯೆಯ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.
ಈ ರಸ್ತೆಯಲ್ಲಿ ನಿರಂತರವಾಗಿ ಟಿಪ್ಪರ್ ಗಳು ಹೋಗುತ್ತಿದೆ. ಇದರಿಂದಾಗಿ ರಸ್ತೆಗಳೆಲ್ಲವೂ ಹದಗೆಟ್ಟಿದೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆಯನ್ನು ಸರಿಪಡಿಸಿ, ಸಾರ್ವಜನಿಕ ಸಂಚಾರಕ್ಕೆ ಯೋಗ್ಯವನ್ನಾಗಿಸಬೇಕು. ಇಲ್ಲಿನ ವಿದ್ಯಾರ್ಥಿಗಳ ಪ್ರಯಾಣಕ್ಕೆ ಬಸ್ ವ್ಯವಸ್ಥೆಯನ್ನು ಮಾಡುವಂತೆ ಒತ್ತಾಯಿಸಿದರು.
ವರದಿ: ದೇವರಹಟ್ಟಿ ನಾಗರಾಜು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB