ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಚರ್ಚ್ ರಸ್ತೆಯಲ್ಲಿ ಹಿರಿಯೂರು ತಾಲ್ಲೂಕಿನ ಎಸ್ ಆರ್ ಪಿ ಕಾಲೇಜಿಗೆ ಸೇರಿದ ವಾಹನ(ಕೆ ಎ ೧೬ ಡಿ ೪೯೦೪) ಕೆಟ್ಟು ಹೋಗಿದ್ದು, ಪರಿಣಾಮವಾಗಿ ರಸ್ತೆ ಸಂಚಾರಕ್ಕೆ ಕೆಲ ಕಾಲ ಅಡ್ಡಿಯುಂಟಾದ ಘಟನೆ ನಡೆಯಿತು.
ವಾಹನ ಕೈ ಕೊಟ್ಟ ಬೆನ್ನಲ್ಲೇ ಎಸ್ ಆರ್ ಪಿ ಕಾಲೇಜಿನ ವ್ಯವಸ್ಥಾಪಕ ವಿದ್ಯಾರ್ಥಿಗಳ ಪ್ರಯಾಣಕ್ಕೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿದರು.
ಇನ್ನೂ ವಾಹನ ರಸ್ತೆಯಲ್ಲಿ ಕೆಟ್ಟು ನಿಂತ ಪರಿಣಾಮ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಚಾಲಕರು ಪರದಾಡುವಂತಾಗಿತ್ತು.
ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB