ಕೊರಟಗೆರೆ : ಬೆಟ್ಟ ಶಂಭೋನಹಳ್ಳಿ ಗ್ರಾಮದ ಜಮೀನಿನ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ರಸ್ತೆ ಇಲ್ಲದೇ, ಹಳ್ಳಗಳನ್ನು ಹಾದು ಹೋಗುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಇದರ ವಿರುದ್ಧ ಇಲ್ಲಿನ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೆಟ್ಟ ಶಂಭೋನಹಳ್ಳಿ ಗ್ರಾಮದ ಸರ್ವೇ ನಂಬರ್ 52,10,11,14 ,15ರಲ್ಲಿ ಗ್ರಾಮದ ಮುಖ್ಯ ರಸ್ತೆಯಿಂದ ನಕಾಶೆ ರಸ್ತೆ ಇರುವ ಕಾರಣ ಗ್ರಾಮದ ರೈತರು ಮತ್ತು ಸಾರ್ವಜನಿಕರು ತಹಶೀಲ್ದಾರ್ ರವರಿಗೆ ದಿನಾಂಕ 17/06/2020ರ ಹಿಂದಿನಿಂದಲೂ ಮನವಿ ಸಲ್ಲಿಸಿದ್ದರು. ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ಸಮಸ್ಯೆಯನ್ನ ಕಾನೂನು ಬದ್ಧವಾಗಿ ಪರಿಹರಿಸಲು ವಿಫಲರಾಗಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.
ಪಕ್ಕ ಜಾಮೀನಿನ ಮಾಲೀಕರು ನಕಾಶೆ ರಸ್ತೆಯನ್ನ ಒತ್ತುವರಿ ಮಾಡಿ ರೈತರಿಗೆ ನಿರಾಕರಣ ಸಮಸ್ಯೆಯನ್ನು ಮಾಡುತ್ತಿರುವುದು ಕಂಡು ಬಂದಿದೆ. ಮೂಲ ನಕಾಶೆ ರಸ್ತೆ ಪಕ್ಕದಲ್ಲಿಯೇ ಹಳ್ಳ ಒಂದು ಹಾದು ಹೋಗುತ್ತಿದ್ದು ಈ ಹಳ್ಳದಲ್ಲಿಯೆ ಓಡಡಾಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಗ್ರಾಮಸ್ಥರಾದ ಪಾರ್ವತಮ್ಮ ಮಾತನಾಡಿ, ನಾವು ಪ್ರತಿ ನಿತ್ಯವು ಹಳ್ಳದಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಮಗೆ ತುಂಬಾ ತೊಂದರೆ ಆಗುತ್ತಿದೆ. ನಕಾಶೆ ರಸ್ತೆ ಇರುವಂತೆ ಒತ್ತುವರಿ ಮಾಡಿರುವವರ ವಿರುದ್ದ ಕಾನೂನು ಕ್ರಮ ತೆಗೆದುಕೊಂಡು ಒತ್ತುವರಿ ತೆರವು ಮಾಡಿ ನಮಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು.
ಗ್ರಾಮದ ಯುವಕ ಮಂಜುನಾಥ್ ಮಾತನಾಡಿ, ಈ ಭಾಗದ ರೈತರಿಗೆ ಹೆಚ್ಚು ತೊಂದರೆ ಆಗುತ್ತಿದೆ. ತಮ್ಮ ತಮ್ಮ ಜಮೀನುಗಳಿಗೆ ಓಡಾಡಲು ಪ್ರತೀ ದಿನವೂ ಹರಸಾಹಸ ಪಡಬೇಕಾಗಿದೆ. ನಾವು ಕಳೆದ ಮೂರು ವರ್ಷಗಳಿಂದ ಈ ನಕಾಶೆ ರಸ್ತೆಗಾಗಿ ಹೋರಾಟ ಮಾಡುತ್ತಿದ್ದೇವೆ. ತಹಶೀಲ್ದಾರ್ ರವರಿಗೆ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಿದ್ದೇವೆ ಆದರೂ ಇಲ್ಲಿಯವರೆಗೂ ಯಾವುದೇ ಅನುಕೂಲ ಆಗಿರುವುದಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನಾದರು ಸ್ಥಳೀಯ ತಹಶೀಲ್ದರ್ ಮತ್ತು ಸ್ಥಳೀಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಸಮಸ್ಯೆಯನ್ನ ತಕ್ಷಣವೇ ಬಗೆಹರಿಸಬೇಕೆಂದು ರೈತರು ಮತ್ತು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz