ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಗ್ರಾಮದಲ್ಲಿ ಗ್ರಾಮೀಣ ಭಾಗದ ಕುಡಿಯುವ ನೀರಿನ ಯೋಜನೆಗೆ ಕಲ್ಪಿಸಿದ ಹೇಮಾವತಿ ಬಹು ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಹೊಡೆದು ಭಾರಿ ಪ್ರಮಾಣದ ನೀರು ಪೋಲಾಗಿದೆ
ಪೈಪ್ ಒಡೆದು ಕಾರಂಜಿಯಂತೆ ಹರಿಯುತ್ತಿದ್ದ ನೀರನ್ನು ನೋಡಲು ಸಾರ್ವಜನಿಕರು ನೆರೆದಿದ್ದು, ನೀರು ಪೋಲಾಗುತ್ತಿರುವುದನ್ನು ಕಂಡು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಮಣುವಿನಕುರಿಕೆಯಿಂದ ತೋವಿನಕೆರೆ ಭಾಗದ ಗ್ರಾಮೀಣ ಪ್ರದೇಶಗಳಿಗೆ ಸರಬರಾಜು ಆಗುವ ಬಹು ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಇದಾಗಿದ್ದು, ಪೈಪ್ ಒಡೆದ ಪರಿಣಾಮ ತೋವಿನಕೆರೆಯ ಕೈಮರ ರಸ್ತೆಯಲ್ಲಿ ನೀರು ಚಿಮ್ಮಿದ್ದು, ಕಾರಂಜಿಯಂತೆ ನೀರು ಚಿಮ್ಮಿದೆ.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB