nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    • ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
    • ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
    • ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
    • ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
    • ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉದ್ಘಾಟನೆಗೆ ಸಜ್ಜಾದ ರತ್ನಸಂದ್ರ ಹೈ–ಟೆಕ್ ಗ್ರಾ.ಪಂ. ಕಟ್ಟಡ!
    ಸಿರಾ April 12, 2025

    ಉದ್ಘಾಟನೆಗೆ ಸಜ್ಜಾದ ರತ್ನಸಂದ್ರ ಹೈ–ಟೆಕ್ ಗ್ರಾ.ಪಂ. ಕಟ್ಟಡ!

    By adminApril 12, 2025No Comments3 Mins Read
    sira

    ಶಿರಾ : ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂದು ನಂಬಿದ್ದ ಮಹಾತ್ಮ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ ಹೆಚ್ಚು ಮಹತ್ವವನ್ನು ನೀಡಿದ್ದರು. ಗ್ರಾಮಗಳಲ್ಲಿ ನಡೆಯುವ ಗ್ರಾಮ ಸಭೆಗಳು ಇಂದಿಗೂ ಗ್ರಾಮ ಸ್ವರಾಜ್ಯದ ಜೀವಾಳವಾಗಿ ಹೊರಹೊಮ್ಮಿವೆ. ಗ್ರಾಮ ನೈರ್ಮಲ್ಯ, ಆರೋಗ್ಯ, ಶಿಕ್ಷಣ, ನೀರು ಸರಬರಾಜು, ವಿದ್ಯುತ್, ರಸ್ತೆಗಳು ಮೊದಲಾದ ಮೂಲಭೂತ ಸೌಕರ್ಯಗಳನ್ನು ಪ್ರತಿಯೊಂದು ಗ್ರಾಮಗಳು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತದೆ. ಈ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಾಲ ಕಾಲಕ್ಕೆ ಜನರಿಗೆ ತಲುಪಿಸಲು ಸುಸಜ್ಜಿತ ಗ್ರಾಮ ಪಂಚಾಯಿತಿ ಕಟ್ಟಡದ ಅವಶ್ಯಕತೆ ಇದ್ದೂ, ಆ ನಿಟ್ಟಿನಲ್ಲಿ ಸಾರ್ವಜನಿಕರನ್ನ ಕೈ ಬೀಸಿ ಕರೆದು ಸಕಲ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ಸಿಗುವಂತೆ ಆತ್ಮವಿಶ್ವಾಸ ಹುಟ್ಟಿಸುವ ರೀತಿಯಲ್ಲಿ ಇಡೀ ಜಿಲ್ಲೆಗೆ ಮಾದರಿಯೆಂಬಂತೆ ರತ್ನಸಂದ್ರ ಗ್ರಾಮ ಪಂಚಾಯಿತಿ ಕಟ್ಟಡ ಹೈ-ಟೆಕ್ ವಿನ್ಯಾಸದಲ್ಲಿ ನಿರ್ಮಾಣಗೊಂಡಿದ್ದು, ಇದೇ ಏ.16 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ.

    ಕಿರಿದಾದ ಕಟ್ಟಡದಲ್ಲಿ ಈ ಹಿಂದೆ ಕೆಲಸ ನಿರ್ವಹಿಸುತ್ತಿದ್ದ ಕಾರಣ ಗ್ರಾಮ ಪಂಚಾಯಿತಿ ಹಂತದ ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ನೂತನ ಗ್ರಾಮ ಪಂಚಾಯಿತಿ ಕಟ್ಟಡದ ನಿರ್ಮಾಣಕ್ಕೆ ಮುಂದಾಗಿ, ಎಲ್ಲರ ಸಹಕಾರ ಹಾಗೂ ವಿವಿಧ ಅನುದಾನಗಳ ನೆರವಿನಿಂದ ಇಂದು ಗ್ರಾಮ ಪಂಚಾಯಿತಿ ಕಟ್ಟಡ ವಿನೂತನ ಶೈಲಿಯಲ್ಲಿ, ಮಿನಿ ವಿಧಾನ ಸೌಧದ ರೀತಿ ಜಿಲ್ಲೆಯಲ್ಲಿಯೇ ಮಾದರಿಯಾಗಿ ನೋಡುಗರ ಕಣ್ಮನ ಸೆಳೆಯುವಂತೆ ತಲೆ ಎತ್ತಿ ನಿಂತಿದೆ.


    Provided by
    Provided by

    ನರೇಗಾ ಯೋಜನೆ ಸದ್ಭಳಕೆ:

    ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಟಾನದಿಂದ ಇಂದು ಗ್ರಾಮಗಳು ಅಭಿವೃದ್ಧಿ ಕಡೆ ಸಾಗುತ್ತಿವೆ. ಗ್ರಾಮೀಣ ಭಾಗದ ಅಕುಶಲ ಕೂಲಿ ಕಾರ್ಮಿಕರಿಗೆ ಕೆಲಸ ಒದಗಿಸುವ ಜೊತೆ-ಜೊತೆಗೆ ಮಣ್ಣು-ನೀರು ಸಂರಕ್ಷಣಾ ಕಾಮಗಾರಿಗಳು, ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಾಣ, ಆಟದ ಮೈದಾನ, ಶಾಲಾ ಶೌಚಾಲಯ ನಿರ್ಮಾಣ, ವೈಯಕ್ತಿಕ ಕಾಮಗಾರಿಗಳ ಅಭಿವೃದ್ಧಿ ಸೇರಿದಂತೆ ಗ್ರಾಮ ಪಂಚಾಯಿತಿ ಕಟ್ಟಡಗಳು ಸಹ ನಿರ್ಮಾವಾಗುತ್ತಿದ್ದು, ಗ್ರಾಮಗಳು ನರೇಗಾ ಯೋಜನೆಯಿಂದ ಅಭಿವೃದ್ಧಿ ಪಥದ ಕಡೆಗೆ ಸಾಗುತ್ತಿವೆ.

    ನೂತನ ಗ್ರಾ.ಪಂ. ಕಟ್ಟಡ ನಿರ್ಮಾಣಕ್ಕೆ ಅನುದಾನ ಬಳಕೆ:

    ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 15 ನೇ ಹಣಕಾಸು ಹಾಗೂ ಗ್ರಾಮ ಪಂಚಾಯಿತಿ ಸ್ವಂತ ಸಂಪನ್ಮೂಲ ಬಳಸಿಕೊಂಡು ಸುಮಾರು 75 ಲಕ್ಷ ರೂ. ಅನುದಾನದಲ್ಲಿ ಸುಂದರವಾಗಿ, ಸುಸಜ್ಜಿತ ರೀತಿಯಲ್ಲಿ, ಹೈ–ಟೆಕ್ ಸ್ಪರ್ಶ ನೀಡಿರುವ ಹಾಗೂ ಸಕಲ ಸೌಲಭ್ಯವುಳ್ಳ ಭವ್ಯವಾದ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣವಾಗಿದೆ.

    ನೂತನ ಗ್ರಾ.ಪಂ. ಕಟ್ಟಡದ ಉದ್ಘಾಟನೆ:

    ರತ್ನಸಂದ್ರ ಗ್ರಾ.ಪಂ. ನೂತನ ಕಟ್ಟಡವನ್ನು ಏ.16 ರಂದು ಬೆಳಿಗ್ಗೆ 10:30 ಗಂಟೆಗೆ ಗೃಹ ಸಚಿವರಾದ ಪರಮೇಶ್ವರ್ ಅವರು ಉದ್ಘಾಟಿಸಲಿದ್ದಾರೆ. ದೆಹಲಿ ವಿಶೇಷ ಪ್ರತಿನಿಧಿ ಡಾ.ಟಿ.ಬಿ.ಜಯಚಂದ್ರ ರವರು ಅಧ್ಯಕ್ಷತೆ ವಹಿಸುವರು. ರತ್ನಸಂದ್ರ ಗ್ರಾ.ಪಂ.ಅಧ್ಯಕ್ಷೆ ನಿಂಗಮ್ಮ ಶ್ರೀರಂಗಪ್ಪ ರವರ ಉಪಸ್ಥಿತಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಚಿತ್ರದುರ್ಗ ಸಂಸದರಾದ ಎಂ.ಗೋವಿಂದ ಕಾರಜೋಳ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷರಾದ ಎಸ್.ಆರ್.ಶ್ರೀನಿವಾಸ್ , ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ.ಗೌಡ ರವರು, ಡಿ.ಟಿ.ಶ್ರೀನಿವಾಸ್ ರವರು, ಆರ್.ರಾಜೇಂದ್ರ ರವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

    ಜಿ.ಪಂ.ಸಿಇಓ ಪ್ರಭು ಜಿ., ಐ.ಎ.ಎಸ್. ಹಾಗೂ ಜಿಲ್ಲಾಧಿಕಾರಿ ಶುಭಾಕಲ್ಯಾಣ್, ಐ.ಎ.ಎಸ್. ರವರು, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಶಿರಾ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿಗಳಾದ ಅನುಪಮಾ ಹೆಚ್., ತಾ.ಪಂ.ಇಓ ಹರೀಶ್ ಆರ್., ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(ರಿ), ಶಿರಾ. ಅಧ್ಯಕ್ಷರಾದ ನಾಗರಾಜು ಆರ್., ಶಿರಾ ತಾಲ್ಲೂಕು ಪಂಚಾಯಿತಿ ಯೋಜನಧಿಕಾರಿಗಳಾದ ರಂಗನಾಥ್ ಆರ್., ಶಿರಾ ಪಂರಾ. ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಾಗೇಂದ್ರಪ್ಪ, ತಾಲ್ಲೂಕು ಶಿರಾ ಪಂಚಾಯಿತಿ ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕರಾದ ಕನಕಪ್ಪ ಹನುಮಪ್ಪ ಮೇಲಸಕ್ರಿ ಭಾಗವಹಿಸಲಿದ್ದಾರೆ.

    ಸರ್ಕಾರಿ ವ್ಯವಸ್ಥೆಯಲ್ಲಿ ಜನಸ್ನೇಹಿಯಾಗಿ ಕೆಲಸ ಮಾಡಲು ಸರ್ಕಾರಿ ಕಟ್ಟಡಗಳು ಸುಸಜ್ಜಿತವಾಗಿರಬೇಕು, ಇದರಿಂದ ಸಾರ್ವಜನಿಕರಿಗೆ ಸರ್ಕಾರಿ ವ್ಯವಸ್ಥೆ ಬಗ್ಗೆ ಒಂದು ಗೌರವ ಮತ್ತು ಆತ್ಮವಿಶ್ವಾಸ ಬರುತ್ತದೆ. ಗ್ರಾಮೀಣ ಭಾಗದ ಅನೇಕ ಮೂಲ ಸೌಕರ್ಯಗಳು ನರೇಗಾ ಯೋಜನೆಯಡಿ ಇಂದು ನಿರ್ಮಾಣವಾಗುತ್ತಿವೆ. ಸಮಗ್ರ ಶಾಲೆಗಳ ಅಭಿವೃದ್ಧಿಯಿಂದ ಶಾಲೆಗಳಿಗೆ ಹೊಸ ಮೆರಗು ನೀಡಿದಂತಾಗಿದೆ. ಹಾಗೆಯೇ ನರೇಗಾ ಯೋಜನೆಯ ಅನುದಾನ ಬಳಸಿಕೊಂಡು ತಾಳಗುಂದ, ಯಲದಬಾಗಿ, ಮಾಗೋಡು, ಸೀಬಿ ಸೇರಿದಂತೆ ತಾವರೇಕೆರೆ ಗ್ರಾಮ ಪಂಚಾಯಿತಿ ಕಟ್ಟಡಗಳು ನಿರ್ಮಾಣವಾಗಿವೆ. ಅದೇ ರೀತಿ ರತ್ನಸಂದ್ರ ಗ್ರಾಮ ಪಂಚಾಯಿತಿ ಕಟ್ಟಡ ಸಹ ವಿಶೇಷವಾದ ವಿನ್ಯಾಸದಲ್ಲಿ ನಿರ್ಮಾಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ. ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣವನ್ನು ಪ್ರಥಮ ಆಧ್ಯತೆ ಮೇಲೆ ಕೈಗೆತ್ತಿಕೊಂಡು ನಿರಂತರವಾಗಿ ಪ್ರಗತಿ ಮೇಲ್ವೀಚಾರಣೆ ನಡೆಸಿ ನಿರ್ಮಾಣ ಕಾರ್ಯವನ್ನು ತುರ್ತಾಗಿ ಮುಗಿಸಿ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸಲು ಕ್ರಮ ವಹಿಸಲಾಗಿದೆ. ಪ್ರಸ್ತುತ ಭೂಪಸಂದ್ರ, ಹಾಲೇನಹಳ್ಳಿ, ಚಿಕ್ಕನಹಳ್ಳಿ, ಹುಯಿಲ್ ದೊರೆ ಹಾಗೂ ಸೀಬಿ ಅಗ್ರಹಾರದ ನೂತನ ಗ್ರಾಮ ಪಂಚಾಯಿತಿ ಕಟ್ಟಡದ ಕಾಮಗಾರಿ ಪ್ರಗತಿಯಲ್ಲಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಉತ್ತಮವಾದ ಕಟ್ಟಡಗಳಿರಬೇಕು, ಜನಸ್ನೇಹಿಯಾಗಿ, ಜನಗಳನ್ನ ಕೈ ಬೀಸಿ ಕರೆದು ಕೆಲಸ ಮಾಡಿಕೊಡುವ ಮುಕ್ತವಾದ ಹಾಗೂ ಸ್ವಚ್ಛವಾದ ವಾತವರಣ ಇರಬೇಕು ಎಂಬ ಸದಾಶಯದಿಂದ ಕೆಲಸಗಳನ್ನು ಮಾಡುತ್ತಿದ್ದೇವೆರೆಂದು ಶಿರಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಆರ್. ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

     

    admin
    • Website

    Related Posts

    ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!

    November 14, 2025

    ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ

    November 13, 2025

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಬೆಂಗಳೂರು: ಕಬ್ಬು ಬೆಳೆಗಾರರ  ಸಮಸ್ಯೆ ಸೇರಿ ರಾಜ್ಯದ ಹಲವು ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಕ ಸಿಎಂ…

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025

    ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!

    November 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.