nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026
    Facebook Twitter Instagram
    ಟ್ರೆಂಡಿಂಗ್
    • ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
    • ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಯಗಡ ಜಿಲ್ಲೆಯಲ್ಲಿ ಭಯೋತ್ಪಾದನೆಯ ಭಾರಿ ಸಂಚು: ದೋಣಿಗಳಲ್ಲಿ ಎಕೆ-47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಪತ್ತೆ
    ರಾಷ್ಟ್ರೀಯ ಸುದ್ದಿ August 18, 2022

    ರಾಯಗಡ ಜಿಲ್ಲೆಯಲ್ಲಿ ಭಯೋತ್ಪಾದನೆಯ ಭಾರಿ ಸಂಚು: ದೋಣಿಗಳಲ್ಲಿ ಎಕೆ-47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಪತ್ತೆ

    By adminAugust 18, 2022No Comments2 Mins Read
    maharastra

    ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಭಯೋತ್ಪಾದನೆಯ ಭಾರಿ ಸಂಚು ಬಯಲಾಗಿದೆ. ಜಿಲ್ಲೆಯಲ್ಲಿ ಎರಡು ಅನುಮಾನಾಸ್ಪದ ದೋಣಿಗಳು ಪತ್ತೆಯಾಗಿದ್ದು, ದೋಣಿಗಳಲ್ಲಿ ಎಕೆ-47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಸಧ್ಯ ಈ ದೋಣಿಗಳನ್ನು ಪೊಲೀಸರು ವಶಪಡಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

    ಪೊಲೀಸರು ರಾಯಗಢದಲ್ಲಿ ಮೊದಲನೆಯ ದೋಣಿಯನ್ನು ಶ್ರೀವರ್ಧನ್ ತೆಹಸಿಲ್‌ನ ಹರಿಹರೇಶ್ವರ ಬೀಚ್‌ನಲ್ಲಿ ಮತ್ತು ಎರಡನೆಯದು ಭರನ್ ಖೋಲ್ ದಡದಲ್ಲಿ ಪತ್ತೆಯಾಗಿವೆ.ಹರಿಹರೇಶ್ವರ ಕಡಲತೀರದಲ್ಲಿ ಪತ್ತೆಯಾದ ಬೋಟ್‌ನಲ್ಲಿ 3 ಎಕೆ-47 ಪತ್ತೆಯಾಗಿದ್ದು, ಇನ್ನೊಂದು ಬೋಟ್‌ನಲ್ಲಿ ಲೈಫ್ ಜಾಕೆಟ್‌ಗಳು ಮತ್ತು ಕೆಲವು ದಾಖಲೆಗಳು ಪತ್ತೆಯಾಗಿವೆ. ಹೀಗಾಗಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.  ಸದ್ಯ ಈ ಬೋಟ್ ಗಳ ಮಾಲೀಕರು ಯಾರು, ಇಲ್ಲಿಗೆ ಹೇಗೆ ತಲುಪಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.


    Provided by
    Provided by

    ಭದ್ರತಾ ಕಂಪನಿಯೊಂದಿಗೆ ಸಂಪರ್ಕ?

    ಪ್ರಾಥಮಿಕ ಮಾಹಿತಿ ಪ್ರಕಾರ ಇದು ಒಮಾನ್ ದೇಶದ ಭದ್ರತಾ ಬೋಟ್ ಆಗಿದ್ದು, ರಾಯಗಢ ಕರಾವಳಿಗೆ ಬಂದಿದೆ. ಇದೀಗ ನಿರುಪಯುಕ್ತವಾಗಿರುವ ಈ ಬೋಟ್‌ನಿಂದ ಎಕೆ-47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಈ ಬಗ್ಗೆ ಪೊಲೀಸರು ಇನ್ನೂ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಕೇಂದ್ರೀಯ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದ್ದು, ಅವರು ಕೂಡ ತನಿಖೆಯ ಮೇಲೆ ನಿಗಾ ಇರಿಸಿದ್ದಾರೆ. ಮಾಹಿತಿಯ ಪ್ರಕಾರ, ಈ ಬೋಟ್ ಬಹುರಾಷ್ಟ್ರೀಯ ಕಂಪನಿಯೊಂದಿಗೆ ಸಂಪರ್ಕ ಹೊಂದಿದೆ, ಇದನ್ನು ಕಂಪನಿಯು ಜೀ ನ್ಯೂಸ್ ಜೊತೆಗಿನ ವಿಶೇಷ ಸಂಭಾಷಣೆಯಲ್ಲಿ ಖಚಿತಪಡಿಸಿದೆ. ಆದರೆ, ಮಹಾರಾಷ್ಟ್ರ ಎಟಿಎಸ್ ಘಟನಾ ಸ್ಥಳಕ್ಕೆ ತಲುಪಿದ್ದು, ದೋಣಿಯನ್ನು ತನಿಖೆ ನಡೆಸಲಾಗುತ್ತಿದೆ.

    ಈ ಸಂಸ್ಥೆಯು ಕಡಲ ಭದ್ರತೆಗೆ ಸಂಬಂಧಿಸಿದೆ ಎಂದು ಕಂಪನಿಯು ತಿಳಿಸಿದೆ ಮತ್ತು ಈ ಒಂದು ದೋಣಿ ಸಮುದ್ರದಲ್ಲಿ ಉರುಳಿಬಿದ್ದಿದೆ ಅದನ್ನು ರಾಯಗಢದಲ್ಲಿ ವಶಪಡಿಸಿಕೊಳ್ಳಲಾಗಿದೆ. ಕಂಪನಿಯ ಹಿರಿಯ ಅಧಿಕಾರಿಗಳು ಆಡಳಿತದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕಂಪನಿ ತಿಳಿಸಿದೆ. ಗುರುವಾರ ಸಂಜೆಯೊಳಗೆ ಈ ಬಗ್ಗೆ ಸದನಕ್ಕೆ ತಿಳಿಸುವಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಗೃಹ ಸಚಿವರಿಗೆ ಸೂಚಿಸಿದ್ದಾರೆ. ರಾಯಗಡ ಜಿಲ್ಲಾ ಪೊಲೀಸ್ ಪಡೆ ಸ್ಥಳಕ್ಕೆ ಧಾವಿಸಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.

    ದೇಶದ ಕಡಲ ಗಡಿಯ ಮೂಲಕ ಉಗ್ರರು ಒಳನುಸುಳುವ ಅಪಾಯ ಯಾವಾಗಲೂ ಇರುತ್ತದೆ. 26/11ರ ಮುಂಬೈ ದಾಳಿಯ ಸಂದರ್ಭದಲ್ಲೂ ಪಾಕ್ ಭಯೋತ್ಪಾದಕರು ಸಮುದ್ರದ ಮೂಲಕ ಭಾರತದೊಳಗೆ ನುಸುಳಿ ಮುಂಬೈನಲ್ಲಿ ಅತಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಿದ್ದರು. 2008 ರಲ್ಲಿ ನಡೆದ ಈ ದಾಳಿಯಲ್ಲಿ, ತಾಜ್ ಹೋಟೆಲ್ ಸೇರಿದಂತೆ ಮುಂಬೈನ ಜನನಿಬಿಡ ಪ್ರದೇಶಗಳಲ್ಲಿ ಭಯೋತ್ಪಾದಕರು ವ್ಯವಸ್ಥಿತ ರೀತಿಯಲ್ಲಿ ದಾಳಿ ನಡೆಸಿದ್ದರು. ಉಗ್ರರ ದಾಳಿಯಲ್ಲಿ 160 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಿರುವಾಗ ಈ ಅನುಮಾನಾಸ್ಪದ ಬೋಟ್ ಪತ್ತೆಯಾದ ನಂತರ ಮಹಾರಾಷ್ಟ್ರದಿಂದ ದೆಹಲಿಯವರೆಗೂ ಸಂಚಲನ ಮೂಡಿಸಿದ್ದು, ರಾಜ್ಯ ಆಡಳಿತದಿಂದ ಕೇಂದ್ರ ತನಿಖಾ ಸಂಸ್ಥೆಯವರೆಗೂ ಎಚ್ಚೆತ್ತುಕೊಂಡಿದೆ. ಈಗ ಈ ವಿಷಯವನ್ನು ಕೂಲಂಕುಷವಾಗಿ ತನಿಖೆ ಆರಂಭವಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ದೊಡ್ಡ ಬಂಡಾಯದ ಬಿಸಿ…

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.