nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026
    Facebook Twitter Instagram
    ಟ್ರೆಂಡಿಂಗ್
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    • ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಯಲ್ ಆಗಿ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟ RCB: ಚೆನ್ನೈ ಗೆ ಟಾಟಾ ಎಂದ ಫ್ಯಾನ್ಸ್..!
    ರಾಜ್ಯ ಸುದ್ದಿ May 19, 2024

    ರಾಯಲ್ ಆಗಿ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟ RCB: ಚೆನ್ನೈ ಗೆ ಟಾಟಾ ಎಂದ ಫ್ಯಾನ್ಸ್..!

    By adminMay 19, 2024No Comments3 Mins Read
    cricket

    ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಗೆದ್ದು ಬೀಗಿದ ಬೆಂಗಳೂರು ತಂಡವು ರಾಯಲ್‌ ಆಗಿ ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟಿದೆ. ಈ ಸಲ ಕಪ್‌ ನಮ್ದೆ ಎಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಪದ್ಯದಲ್ಲಿ ಚೆನ್ನೈ ವಿರುದ್ಧ ಆರ್‌ ಸಿಬಿ 27 ರನ್ ‌ಗಳ ಗೆಲುವು ದಾಖಲಿಸಿತು. ಒಂದು ವೇಳೆ ಪಂದ್ಯ ಸೋತು 201 ರನ್‌ ಗಳಿಸಿದ್ದರೂ ಚೆನ್ನೈ ಪ್ಲೇ-ಆಫ್‌ ಪ್ರವೇಶಿಸಲು ಸಾಧ್ಯವಾಗುತ್ತಿತ್ತು. ಆದರೆ ಆರ್‌ ಸಿಬಿ ಬೌಲರ್‌ ಗಳ ಉತ್ತಮ ಪ್ರದರ್ಶನದಿಂದ ಚೆನ್ನೈ ಪ್ಲೇ-ಆಫ್‌ ಕನಸಿಗೂ ತಣ್ಣೀರು ಬಿದ್ದಿತು. ಕೇವಲ 10 ರನ್‌ಗಳ ಅಂತರದಲ್ಲಿ ಗಾಯಕ್‌ವಾಡ್‌ ಪಡೆ ಪ್ಲೇ-ಆಫ್‌ನಿಂದ ಮುಗ್ಗರಿಸಿತು. ಬೆಂಗಳೂರು ತಂಡ ನೀಡಿದ್ದ 219 ರನ್‌ಗಳ ಗುರಿ ಬೆನ್ನತ್ತಿದ ಸಿಎಸ್‌ಕೆ 20 ಓವರ್‌ಗಳಿಗೆ 7 ವಿಕೆಟ್‌ ನಷ್ಟಕ್ಕೆ 191 ರನ್‌ ಗಳಿಸಿ ಪಂದ್ಯ ಸೋತು ಪ್ಲೇ-ಆಫ್‌ನಿಂದ ಹೊರಬಿದ್ದಿತು.

    ತವರಿನಲ್ಲೇ ಆರ್‌ ಸಿಬಿ ಅಭಿಮಾನಿಗಳಿಗೆ ಭರ್ಜರಿ ಗೆಲುವಿನ ಗಿಫ್ಟ್‌ ನೀಡಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ ಸಿಬಿ 20 ಓವರ್‌ ಗೆ 5 ವಿಕೆಟ್‌ ನಷ್ಟಕ್ಕೆ 218 ರನ್‌ ಗಳಿಸಿತು. ಉತ್ತಮ ಶುಭಾರಂಭ ನೀಡಿದ ಆರ್‌ಸಿಬಿ ಬ್ಯಾಟರ್‌ ಗಳು ಚೆನ್ನೈ ಬೌಲರ್ ‌ಗಳನ್ನು ದಂಡಿಸಿದರು. 3 ಓವರ್‌ಗೆ 31 ರನ್‌ ಗಳಿಸಿದ್ದಾಗ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಕೆಲಹೊತ್ತಿನಲ್ಲಿ ಮತ್ತೆ ಪಂದ್ಯ ಪುನಾರಂಭವಾಯಿತು. 6.4 ಓವರ್‌ನಲ್ಲಿ ಕೊಹ್ಲಿ ಮತ್ತು ಡು ಪ್ಲೆಸಿಸ್‌ 50 ರನ್‌ಗಳ ಜೊತೆಯಾಟವಾಡಿದರು. ಹೊಡಿಬಡಿ ಆಟವಾಡುತ್ತಿದ್ದ ಕೊಹ್ಲಿ ಅರ್ಧಶತಕ ವಂಚಿತರಾಗಿ (47 ರನ್‌, 29 ಬಾಲ್‌, 3 ಫೋರ್‌, 4 ಸಿಕ್ಸರ್‌) ಔಟಾದರು. ಇತ್ತ ಜವಾಬ್ದಾರಿಯುತ ಆಟವಾಡಿದ ಡು ಪ್ಲೆಸಿಸ್‌ ಅರ್ಧಶತಕ (54 ರನ್‌, 39 ಬಾಲ್‌, 3 ಫೋರ್‌, 3 ಸಿಕ್ಸರ್‌) ಬಾರಿಸಿದರು.


    Provided by
    Provided by

    ಆದರೆ ವಿವಾದಾತ್ಮಕ ರನೌಟ್‌ ತೀರ್ಪಿಗೆ ಔಟ್‌ ಆಗಿ ಪೆವಿಲಿಯನ್‌ ಸೇರಿದರು. ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್‌ ಮಾಡಿದ ರಜತ್‌ ಪಾಟೀದಾರ್‌ 41 ರನ್‌ ಸಿಡಿಸಿ (23 ಬಾಲ್‌, 2 ಫೋರ್‌, 4 ಸಿಕ್ಸರ್‌) ಸವಾಲಿನ ಮೊತ್ತ ಪೇರಿಸಲು ತಂಡಕ್ಕೆ ನೆರವಾದರು. ಕ್ರೀಸ್‌ ಗೆ ಬಂದ ಯಾವೊಬ್ಬ ಬ್ಯಾಟರ್‌ ಕೂಡ ನಿರಾಸೆ ಮೂಡಿಸಲಿಲ್ಲ. ಕ್ಯಾಮರೂನ್‌ ಗ್ರೀನ್‌ (38), ದಿನೇಶ್‌ ಕಾರ್ತಿಕ್‌ (14) ರನ್‌ ಗಳಿಸಿದರು. ಫಾರ್ಮ್‌ ಕಳೆದುಕೊಂಡು ನಿರಾಸೆ ಮೂಡಿಸಿದ್ದ ಮ್ಯಾಕ್ಸ್‌ವೆಲ್‌ ಇಂದಿನ ಪಂದ್ಯದಲ್ಲಿ ಸ್ವಲ್ಪ ಹೊತ್ತು ಆಡಿದರೂ ಗಮನ ಸೆಳೆದರು. ಕೇವಲ 5 ಬಾಲ್‌ಗಳಿಗೆ 2 ಫೋರ್‌ ಮತ್ತು 1 ಸಿಕ್ಸ್‌ನೊಂದಿಗೆ 16 ರನ್‌ ಸಿಡಿಸಿದರು.

    ದೊಡ್ಡ ಹೊಡೆತಕ್ಕೆ ಮುಂದಾಗಿ ಧೋನಿಗೆ ಕ್ಯಾಚ್‌ ನೀಡಿದರು. ನೋಬಾಲ್‌ ಮತ್ತು ವೈಡ್‌ ಸೇರಿ ಆರ್‌ಸಿಬಿಗೆ 8 ರನ್‌ ಹೆಚ್ಚುವರಿಯಾಗಿ ಬಂತು. ಚೆನ್ನೈ ಪರ ಶಾರ್ದೂಲ್ ಠಾಕೂರ್ 2 ಹಾಗೂ ತುಷಾರ್ ದೇಶಪಾಂಡೆ, ಮಿಚೆಲ್ ಸ್ಯಾಂಟ್ನರ್ ತಲಾ 1 ವಿಕೆಟ್‌ ಕಿತ್ತರು. ಆರ್‌ಸಿಬಿ ನೀಡಿದ 219 ರನ್‌ ಗುರಿ ಬೆನ್ನತ್ತಿದ ಸಿಎಸ್‌ಕೆಗೆ ಆರಂಭಿಕ ಆಘಾತ ಎದುರಾಯಿತು. ಚೆನ್ನೈ ರನ್‌ ಖಾತೆ ತೆರೆಯುವ ಮೊದಲೇ ನಾಯಕ ಗಾಯಕ್ವಾಡ್‌ ಔಟಾಗುವ ಮೂಲಕ ವಿಕೆಟ್‌ ಖಾತೆ ತೆರೆಯಿತು. ಮೊದಲ ಪವರ್‌ ಪ್ಲೇ ಮುಕ್ತಾಯಕ್ಕೆ 58 ರನ್‌ ಗಳಿಸಿದ್ದ ಸಿಎಸ್‌ ಕೆ 2 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಈ ಸಂದರ್ಭದಲ್ಲಿ ರಚಿನ್‌ ರವೀಂದ್ರ ಮತ್ತು ಅಜಿಂಕ್ಯ ರಹಾನೆ ಜೊತೆಯಾಟ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿತು. ಈ ಜೋಡಿ 41 ಬಾಲ್‌ಗಳಿಗೆ 61 ರನ್‌ಗಳ ಜೊತೆಯಾಟವಾಡಿತು.

    ರಚಿನ್‌ ಅರ್ಧಶತಕ ಗಳಿಸಿ (61 ರನ್‌, 37 ಬಾಲ್‌, 5 ಫೋರ್‌, 3 ಸಿಕ್ಸರ್‌) ಮಿಂಚಿದರು. ಅಜಿಂಕ್ಯ 33 ರನ್‌ಗಳಿಸಿ ಔಟಾದರು. ಈ ವೇಳೆ ರಚಿನ್‌ಗೆ ದುಬೆ ಜೊತೆಯಾದರು. ಜವಾಬ್ದಾರಿಯುತ ಆಟವಾಡುತ್ತಾ ಬಂದ ರಚಿನ್‌ 2 ರನ್‌ ಕದಿಯಲು ಮುಂದಾಗಿ ರನೌಟ್‌ ಆದರು. ಇವರ ಬೆನ್ನಲ್ಲೇ ಶಿವಂ ದುಬೆ ಕ್ಯಾಚ್‌ ನೀಡಿ ಹೊರನಡೆದಿದ್ದು ಆರ್‌ಸಿಬಿ ನಿಟ್ಟುಸಿರು ಬಿಡುವಂತಾಯಿತು. ವೇಳೆ ಕ್ರೀಜ್‌ ಗೆ ಬಂದ ಜಡೇಜಾ ಹೊಡಿಬಡಿ ಆಟವಾಡಿ ಆರ್‌ ಸಿಬಿ ಬೌಲರ್‌ ಗಳನ್ನು ಕಾಡಿದರು. 22 ಬಾಲ್‌ ಗಳಿಗೆ 42 ರನ್‌ ಬಾರಿಸಿ ಪ್ಲೇ-ಆಫ್‌ ಭರವಸೆ ಮೂಡಿಸಿದ್ದರು. ಅವರಿಗೆ ಮಾಜಿ ನಾಯಕ ಧೋನಿ ಕೂಡ ಸಾಥ್‌ ನೀಡಿದರು. ಧೋನಿ 13 ಬಾಲ್‌ ಗೆ 25 ರನ್‌ಗಳಿಸಿ ಕ್ಯಾಚ್‌ ನೀಡಿ 19ನೇ ಓವರ್ ‌ನಲ್ಲಿ ನಿರ್ಗಮಿಸಿದ್ದು ಆರ್‌ ಸಿಬಿಗೆ ಇನ್ನಷ್ಟು ಭರವಸೆ ನೀಡಿತು. ಪ್ಲೇ-ಆಫ್‌ ಕಾರಣಕ್ಕೆ ಕೊನೆ ಓವರ್‌ ವರೆಗೂ ಪಂದ್ಯ ರೋಚಕತೆಯಿಂದ ಕೂಡಿತ್ತು. ಚೆನ್ನೈ ತಂಡವನ್ನು 191 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಆರ್‌ ಸಿಬಿ ಬೌಲರ್ ‌ಗಳು ಯಶಸ್ವಿಯಾದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಕೊರಟಗೆರೆ: ನಮ್ಮ ದೇಶದ ಸಂವಿಧಾನಕ್ಕೆ ತನ್ನದೇ ಆದ ಮಹತ್ವವಿದೆ ಅದರ ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ ಮತ್ತು ಮಾನವೀಯತೆಯ…

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.