nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026
    Facebook Twitter Instagram
    ಟ್ರೆಂಡಿಂಗ್
    • ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ
    • ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!
    • ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು
    • ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ
    • ತುಮಕೂರು: ಸೆ.15ರವರೆಗೆ ಗ್ರಾಮೀಣ ಗ್ಯಾರಂಟಿ ಕಾರ್ಡ್ ವಿತರಣೆ
    • ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುಣ್ಯ ಭೂಮಿಯಲ್ಲಿ ಶಕ್ತಿ ದೇವತೆಗಳ ಪುನರ್ ಪ್ರತಿಷ್ಠಾಪನೆ: ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆದ ಕಾರ್ಯಕ್ರಮಗಳು
    ಕೊರಟಗೆರೆ May 3, 2025

    ಪುಣ್ಯ ಭೂಮಿಯಲ್ಲಿ ಶಕ್ತಿ ದೇವತೆಗಳ ಪುನರ್ ಪ್ರತಿಷ್ಠಾಪನೆ: ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆದ ಕಾರ್ಯಕ್ರಮಗಳು

    By adminMay 3, 2025No Comments2 Mins Read
    kote maramma kollapuradamma

    ಕೊರಟಗೆರೆ: ಉದ್ಭವ ದೇವರುಗಳ ಪುಣ್ಯ ಭೂಮಿ, 800 ವರ್ಷ ಇತಿಹಾಸವುಳ್ಳ ಶ್ರೀ ಕೋಟೆ ಮಾರಮ್ಮ ಮತ್ತು ಕೊಲ್ಲಾಪುರದಮ್ಮ ನೂತನ ದೇವಾಲಯ ಮತ್ತು ಮೂಲ ದೇವರ ಪುನರ್ ಪ್ರತಿಷ್ಠಾಪನೆಯ ಕಾರ್ಯಕ್ರಮವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ವಿಜೃಂಭಣೆಯಿಂದ ನಡೆಯಿತು.

    ಗ್ರಾಮ ದೇವತೆ ಕೋಟೆ ಮಾರಮ್ಮ ಮತ್ತು ಕೊಲ್ಲಾಪುರದಮ್ಮನವರ ಧಾರ್ಮಿಕ ಕಾರ್ಯಕ್ರಮವು ಕಟ್ಟಡ ಸಮಿತಿಯ ಸಂಪೂರ್ಣ ಸಿದ್ಧತೆಯಿಂದ ಏ.29ರಿಂದ ಮೇ 1ರವರೆಗೆ ನಡೆದ ಗ್ರಾಮ ದೇವತೆಗಳ ಪುನರ್ ಪ್ರತಿಷ್ಠಾಪನೆಯಿಂದ ಕೊರಟಗೆರೆ ನಗರ ಸೇರಿದಂತೆ ಸುತ್ತ ಮುತ್ತಲಿನ 16 ಗ್ರಾಮಗಳಲ್ಲಿ ಮೂರು ದಿನ ಹಬ್ಬದ ವಾತಾವರಣ ಸೃಷ್ಠಿಸಿತ್ತು.

    ಉದ್ಘಾಟನೆ ವೇಳೆ ನಡೆದ ಧಾರ್ಮಿಕ ಪೂಜೆಗಳು:

    2 ಕೋಟಿ ವೆಚ್ಚದ ಗ್ರಾಮ ದೇವತೆಯ ಸಂಕಲ್ಪದಂತೆ ನೂತನ ದೇವಾಲಯ ನಿರ್ಮಾಣಗೊಂಡಿದೆ. ಮೂಲ ದೇವತೆಯ ಪುನರ್ ಪ್ರತಿಷ್ಠಾಪನೆಯಲ್ಲಿ ಗಂಗಾ ಪೂಜೆ, ಯಾಗಾಸಾಲ ಪ್ರವೇಶ, ಗಣಪತಿ ಪೂಜೆ, ಪುಣ್ಯ, ದೇವರುಗಳ ಪ್ರಧಾನ ಕಳಸ ಹೋಮ ಮತ್ತು ಪೂಜೆ, ನವಗ್ರಹ ಕಳಸಾ ಆರಾಧನೆ ಹೋಮ, ಮತ್ತು ಬ್ರಾಹ್ಮಿ ಮುಹೂರ್ತದಲ್ಲಿ ಮೂಲ ದೇವರ ಪುನರ್ ಪ್ರತಿಷ್ಠಾಪನೆ, ಪಂಚಾಮೃತ ಅಭಿಷೇಕ, ಗೋಪುರ ಕಳಸ ಸ್ಥಾಪನೆ, ಮಹಾ ಪೂರ್ಣಾಹುತಿ ಹೋಮ, ಚಂಡಿ ಹೋಮ, ಕುಂಭಾಭಿಷೇಕ, ದೇವಿಗೆ ವಿಶೇಷ ಅಲಂಕಾರ, ಅಷ್ಟ ಬಂಧನ ಪೂಜೆ, ಮಹಾ ಮಂಗಳಾರತಿ ಪೂಜಾ ಕಾರ್ಯಕ್ರಮವು ನೆರವೇರಿದ್ದು, ದೇವಿಗೆ ೪೮ ದಿನಗಳ ಕಾಲ ದಿನನಿತ್ಯ ಪೂಜೆ ನಡೆಯಲಿದೆ ಎನ್ನಲಾಗಿದೆ.

    ಶ್ರೀಗಳಿಂದ ಗೋಪುರ ಕಳಸ ಸ್ಥಾಪನೆ:

    ಗ್ರಾಮ ದೇವತೆಗಳ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಗುರುವಾರ ಸಿದ್ದರಬೆಟ್ಟದ ಶ್ರೀಮಠದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮತ್ತು ಎಲೆರಾಂಪುರ ಶ್ರೀಮಠದ ಡಾ.ಶ್ರೀಹನುಮಂತನಾಥ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅಮೃತ ಹಸ್ತಾದಿಂದ ಗೋಪುರ ಕಳಸ ಸ್ಥಾಪಿಸಿದ್ದು, ಸಹಕಾರ ಸಚಿವ ಕೆ.ಎನ್ ರಾಜಣ್ಣ ಮತ್ತು ಮಾಜಿ ಶಾಸಕ ಪಿ.ಆರ್ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಭಾಗಿಯಾಗಿ ಪೂಜೆ ಸಲ್ಲಿಸಿದರು.

    ಭಕ್ತರಿಗೆ ಲಾಡು ಮತ್ತು ಅನ್ನ ದಾಸೋಹ ವ್ಯವಸ್ಥೆ:

    ದೇವಾಲಯ ಕಟ್ಟಡ ಸಮಿತಿ ಅಧ್ಯಕ್ಷ ಎ.ಡಿ ಬಲರಾಮಯ್ಯ ಮತ್ತು ರಮಾಮಣ ಕುಟುಂಬದಿಂದ ಭಕ್ತರಿಗೆ ಲಾಡು ವಿತರಣೆ ಮತ್ತು ಸಮಾಜ ಸೇವಕ ಜನಾರ್ಧನ್ ಮತ್ತು ಕುಟುಂಬದಿಂದ ಮೂರು ದಿನದ ನಿರಂತರ ದಾಸೋಹ ಕಾರ್ಯಕ್ರಮ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ತಾಯಿಗೆ ಪೂಜೆ ಸಲ್ಲಿಸಿ ಇಷ್ಟಾರ್ಥಗಳನ್ನು ಬೇಡಿಕೊಂಡು ಪ್ರಸಾದ ಸ್ವೀಕರಿಸಿದರು.

    ಎಲೆರಾಂಪುರ ಶ್ರೀನರಸಿಂಹಗಿರಿ ಸುಕ್ಷೇತ್ರದ ಡಾ.ಶ್ರೀಹನುಮಂತನಾಥ ಸ್ವಾಮೀಜಿ ಮಾತನಾಡಿ, ಕೋಟೆ ಮಾರಮ್ಮ ಮತ್ತು ಕೊಲ್ಲಾಪುರದಮ್ಮ ದೇವಾಲಯಗಳು ಇತಿಹಾಸ ಪುಟಗಳಲ್ಲಿ ಸ್ಥಾನ ಪಡೆದ ಪವಿತ್ರ ಸ್ಥಳ. ಕಲ್ಲಿನಿಂದ ಸಂಪೂರ್ಣ ನಿರ್ಮಿತವಾಗಿರುವುದರಿಂದ ಶಾಶ್ವತತೆಯ ಸಂಕೇತವಾಗಿದೆ. ಪಾಪಕರ್ಮಗಳಿಂದ ಮುಕ್ತಿಯಾಗಲು ಪುಣ್ಯಕ್ಷೇತ್ರಗಳ ದರ್ಶನ ಮತ್ತು ಧಾರ್ಮಿಕ ಸೇವೆ ಅತಿಯಾದ ಅಗತ್ಯ ಎಂದರು.

    ಸಿದ್ದರಬೆಟ್ಟ ಬಾಳೆ ಹೊನ್ನೂರು ಖಾಸಾ ಶಾಖಾ ಮಠ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪುನಃ ನವೀಕರಣಗೊಂಡ ದೇವಾಲಯಗಳು ನಮ್ಮ ಸಂಸ್ಕೃತಿಯ ಸಂಜೀವಿನಿಯಂತೆ ಭಕ್ತರಲ್ಲಿ ನಂಬಿಕೆಯನ್ನು ತುಂಬುತ್ತವೆ. ಭಕ್ತರ ಸಹಕಾರದಿಂದ ಬಹುತೇಕ ದೇವಾಲಯಗಳು ಜೀರ್ಣೋದ್ಧಾರಗೊಂಡಿದೆ. ಪುರಾತನ ಕಾಲದ ಶ್ರೀಗವಿ ಗಂಗಾಧರೇಶ್ವರ ಸ್ವಾಮಿ ದೇವಾಲಯ ಮಾತ್ರ ಜೀಣೋದ್ಧಾರಗೊಂಡಿಲ್ಲ, ದೇವಾಲಯದ ಜೀಣೋದ್ಧಾರ ಕಾರ್ಯವನ್ನು ಮಾರಮ್ಮ ದೇವಾಲಯ ಕಟ್ಟಡ ಸಮಿತಿಯೇ ಮುನ್ನಡೆಸಬೆಕು. ಇಂತಹ ಪವಿತ್ರ ಕಾರ್ಯಗಳಲ್ಲಿ ಪ್ರತಿಯೊಬ್ಬರು ಭಾಗಿಯಾಗಬೇಕು ಎಂದರು.

    ಕರ್ನಾಟಕ ಸರ್ಕಾರ ಸಹಕಾರ ಸಚಿವ ಕೆ.ಎನ್ ರಾಜಣ್ಣ ಮಾತನಾಡಿ, ಕೊರಟಗೆರೆ ಕೋಟೆ ಮಾರಮ್ಮ ಮತ್ತು ಕೊಲ್ಲಾಪುರದಮ್ಮನವರು ಶಕ್ತಿದೇವತೆ. ಚಾಮುಂಡೇಶ್ವರಿಯ ಮತ್ತೊಂದು ರೂಪ ಕೋಟೆ ಮಾರಮ್ಮ. ದೇಶದಲ್ಲಿ ಹಿಂದೂ ಧರ್ಮವು ತನ್ನದೇ ಆದ ಶಕ್ತಿಯನ್ನು ಹೊಂದಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಭಾಗವಹಿಸುವುದರಿಂದ ಜೀವನದಲ್ಲಿ ಒಂದಿಷ್ಟು ನೆಮ್ಮದಿ ಪಡೆಯಲು ಸಾಧ್ಯ. ನಾಡಿನಲ್ಲಿ ಈ ವರ್ಷ ಉತ್ತಮ ಮಳೆಯಾಗಿ ರೈತರನ್ನು ಮತ್ತು ತನ್ನ ಮಕ್ಕಳನ್ನು ಗ್ರಾಮದೇವತೆ ಕಾಪಾಡಬೇಕು. ಪೂರ್ವಿಕರ ಆಚರಣೆಯನ್ನು ಇಂದಿನ ಯುವಪೀಳಿಗೆ ಮುಂದುವರಿಸುವ ಅಗತ್ಯತೆ ಹೆಚ್ಚಾಗಿದೆ ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ಕೊರಟಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಸ್ಪರ್ಧಿಸುವುದಿಲ್ಲ ಮತ್ತು ಬೇರೆ…

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026

    ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ

    August 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.