nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026
    Facebook Twitter Instagram
    ಟ್ರೆಂಡಿಂಗ್
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    • ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುಣ್ಯ ಭೂಮಿಯಲ್ಲಿ ಶಕ್ತಿ ದೇವತೆಗಳ ಪುನರ್ ಪ್ರತಿಷ್ಠಾಪನೆ: ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆದ ಕಾರ್ಯಕ್ರಮಗಳು
    ಕೊರಟಗೆರೆ May 3, 2025

    ಪುಣ್ಯ ಭೂಮಿಯಲ್ಲಿ ಶಕ್ತಿ ದೇವತೆಗಳ ಪುನರ್ ಪ್ರತಿಷ್ಠಾಪನೆ: ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆದ ಕಾರ್ಯಕ್ರಮಗಳು

    By adminMay 3, 2025No Comments2 Mins Read
    kote maramma kollapuradamma

    ಕೊರಟಗೆರೆ: ಉದ್ಭವ ದೇವರುಗಳ ಪುಣ್ಯ ಭೂಮಿ, 800 ವರ್ಷ ಇತಿಹಾಸವುಳ್ಳ ಶ್ರೀ ಕೋಟೆ ಮಾರಮ್ಮ ಮತ್ತು ಕೊಲ್ಲಾಪುರದಮ್ಮ ನೂತನ ದೇವಾಲಯ ಮತ್ತು ಮೂಲ ದೇವರ ಪುನರ್ ಪ್ರತಿಷ್ಠಾಪನೆಯ ಕಾರ್ಯಕ್ರಮವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ವಿಜೃಂಭಣೆಯಿಂದ ನಡೆಯಿತು.

    ಗ್ರಾಮ ದೇವತೆ ಕೋಟೆ ಮಾರಮ್ಮ ಮತ್ತು ಕೊಲ್ಲಾಪುರದಮ್ಮನವರ ಧಾರ್ಮಿಕ ಕಾರ್ಯಕ್ರಮವು ಕಟ್ಟಡ ಸಮಿತಿಯ ಸಂಪೂರ್ಣ ಸಿದ್ಧತೆಯಿಂದ ಏ.29ರಿಂದ ಮೇ 1ರವರೆಗೆ ನಡೆದ ಗ್ರಾಮ ದೇವತೆಗಳ ಪುನರ್ ಪ್ರತಿಷ್ಠಾಪನೆಯಿಂದ ಕೊರಟಗೆರೆ ನಗರ ಸೇರಿದಂತೆ ಸುತ್ತ ಮುತ್ತಲಿನ 16 ಗ್ರಾಮಗಳಲ್ಲಿ ಮೂರು ದಿನ ಹಬ್ಬದ ವಾತಾವರಣ ಸೃಷ್ಠಿಸಿತ್ತು.

    ಉದ್ಘಾಟನೆ ವೇಳೆ ನಡೆದ ಧಾರ್ಮಿಕ ಪೂಜೆಗಳು:

    2 ಕೋಟಿ ವೆಚ್ಚದ ಗ್ರಾಮ ದೇವತೆಯ ಸಂಕಲ್ಪದಂತೆ ನೂತನ ದೇವಾಲಯ ನಿರ್ಮಾಣಗೊಂಡಿದೆ. ಮೂಲ ದೇವತೆಯ ಪುನರ್ ಪ್ರತಿಷ್ಠಾಪನೆಯಲ್ಲಿ ಗಂಗಾ ಪೂಜೆ, ಯಾಗಾಸಾಲ ಪ್ರವೇಶ, ಗಣಪತಿ ಪೂಜೆ, ಪುಣ್ಯ, ದೇವರುಗಳ ಪ್ರಧಾನ ಕಳಸ ಹೋಮ ಮತ್ತು ಪೂಜೆ, ನವಗ್ರಹ ಕಳಸಾ ಆರಾಧನೆ ಹೋಮ, ಮತ್ತು ಬ್ರಾಹ್ಮಿ ಮುಹೂರ್ತದಲ್ಲಿ ಮೂಲ ದೇವರ ಪುನರ್ ಪ್ರತಿಷ್ಠಾಪನೆ, ಪಂಚಾಮೃತ ಅಭಿಷೇಕ, ಗೋಪುರ ಕಳಸ ಸ್ಥಾಪನೆ, ಮಹಾ ಪೂರ್ಣಾಹುತಿ ಹೋಮ, ಚಂಡಿ ಹೋಮ, ಕುಂಭಾಭಿಷೇಕ, ದೇವಿಗೆ ವಿಶೇಷ ಅಲಂಕಾರ, ಅಷ್ಟ ಬಂಧನ ಪೂಜೆ, ಮಹಾ ಮಂಗಳಾರತಿ ಪೂಜಾ ಕಾರ್ಯಕ್ರಮವು ನೆರವೇರಿದ್ದು, ದೇವಿಗೆ ೪೮ ದಿನಗಳ ಕಾಲ ದಿನನಿತ್ಯ ಪೂಜೆ ನಡೆಯಲಿದೆ ಎನ್ನಲಾಗಿದೆ.

    ಶ್ರೀಗಳಿಂದ ಗೋಪುರ ಕಳಸ ಸ್ಥಾಪನೆ:

    ಗ್ರಾಮ ದೇವತೆಗಳ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಗುರುವಾರ ಸಿದ್ದರಬೆಟ್ಟದ ಶ್ರೀಮಠದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮತ್ತು ಎಲೆರಾಂಪುರ ಶ್ರೀಮಠದ ಡಾ.ಶ್ರೀಹನುಮಂತನಾಥ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅಮೃತ ಹಸ್ತಾದಿಂದ ಗೋಪುರ ಕಳಸ ಸ್ಥಾಪಿಸಿದ್ದು, ಸಹಕಾರ ಸಚಿವ ಕೆ.ಎನ್ ರಾಜಣ್ಣ ಮತ್ತು ಮಾಜಿ ಶಾಸಕ ಪಿ.ಆರ್ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಭಾಗಿಯಾಗಿ ಪೂಜೆ ಸಲ್ಲಿಸಿದರು.

    ಭಕ್ತರಿಗೆ ಲಾಡು ಮತ್ತು ಅನ್ನ ದಾಸೋಹ ವ್ಯವಸ್ಥೆ:

    ದೇವಾಲಯ ಕಟ್ಟಡ ಸಮಿತಿ ಅಧ್ಯಕ್ಷ ಎ.ಡಿ ಬಲರಾಮಯ್ಯ ಮತ್ತು ರಮಾಮಣ ಕುಟುಂಬದಿಂದ ಭಕ್ತರಿಗೆ ಲಾಡು ವಿತರಣೆ ಮತ್ತು ಸಮಾಜ ಸೇವಕ ಜನಾರ್ಧನ್ ಮತ್ತು ಕುಟುಂಬದಿಂದ ಮೂರು ದಿನದ ನಿರಂತರ ದಾಸೋಹ ಕಾರ್ಯಕ್ರಮ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ತಾಯಿಗೆ ಪೂಜೆ ಸಲ್ಲಿಸಿ ಇಷ್ಟಾರ್ಥಗಳನ್ನು ಬೇಡಿಕೊಂಡು ಪ್ರಸಾದ ಸ್ವೀಕರಿಸಿದರು.

    ಎಲೆರಾಂಪುರ ಶ್ರೀನರಸಿಂಹಗಿರಿ ಸುಕ್ಷೇತ್ರದ ಡಾ.ಶ್ರೀಹನುಮಂತನಾಥ ಸ್ವಾಮೀಜಿ ಮಾತನಾಡಿ, ಕೋಟೆ ಮಾರಮ್ಮ ಮತ್ತು ಕೊಲ್ಲಾಪುರದಮ್ಮ ದೇವಾಲಯಗಳು ಇತಿಹಾಸ ಪುಟಗಳಲ್ಲಿ ಸ್ಥಾನ ಪಡೆದ ಪವಿತ್ರ ಸ್ಥಳ. ಕಲ್ಲಿನಿಂದ ಸಂಪೂರ್ಣ ನಿರ್ಮಿತವಾಗಿರುವುದರಿಂದ ಶಾಶ್ವತತೆಯ ಸಂಕೇತವಾಗಿದೆ. ಪಾಪಕರ್ಮಗಳಿಂದ ಮುಕ್ತಿಯಾಗಲು ಪುಣ್ಯಕ್ಷೇತ್ರಗಳ ದರ್ಶನ ಮತ್ತು ಧಾರ್ಮಿಕ ಸೇವೆ ಅತಿಯಾದ ಅಗತ್ಯ ಎಂದರು.

    ಸಿದ್ದರಬೆಟ್ಟ ಬಾಳೆ ಹೊನ್ನೂರು ಖಾಸಾ ಶಾಖಾ ಮಠ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪುನಃ ನವೀಕರಣಗೊಂಡ ದೇವಾಲಯಗಳು ನಮ್ಮ ಸಂಸ್ಕೃತಿಯ ಸಂಜೀವಿನಿಯಂತೆ ಭಕ್ತರಲ್ಲಿ ನಂಬಿಕೆಯನ್ನು ತುಂಬುತ್ತವೆ. ಭಕ್ತರ ಸಹಕಾರದಿಂದ ಬಹುತೇಕ ದೇವಾಲಯಗಳು ಜೀರ್ಣೋದ್ಧಾರಗೊಂಡಿದೆ. ಪುರಾತನ ಕಾಲದ ಶ್ರೀಗವಿ ಗಂಗಾಧರೇಶ್ವರ ಸ್ವಾಮಿ ದೇವಾಲಯ ಮಾತ್ರ ಜೀಣೋದ್ಧಾರಗೊಂಡಿಲ್ಲ, ದೇವಾಲಯದ ಜೀಣೋದ್ಧಾರ ಕಾರ್ಯವನ್ನು ಮಾರಮ್ಮ ದೇವಾಲಯ ಕಟ್ಟಡ ಸಮಿತಿಯೇ ಮುನ್ನಡೆಸಬೆಕು. ಇಂತಹ ಪವಿತ್ರ ಕಾರ್ಯಗಳಲ್ಲಿ ಪ್ರತಿಯೊಬ್ಬರು ಭಾಗಿಯಾಗಬೇಕು ಎಂದರು.

    ಕರ್ನಾಟಕ ಸರ್ಕಾರ ಸಹಕಾರ ಸಚಿವ ಕೆ.ಎನ್ ರಾಜಣ್ಣ ಮಾತನಾಡಿ, ಕೊರಟಗೆರೆ ಕೋಟೆ ಮಾರಮ್ಮ ಮತ್ತು ಕೊಲ್ಲಾಪುರದಮ್ಮನವರು ಶಕ್ತಿದೇವತೆ. ಚಾಮುಂಡೇಶ್ವರಿಯ ಮತ್ತೊಂದು ರೂಪ ಕೋಟೆ ಮಾರಮ್ಮ. ದೇಶದಲ್ಲಿ ಹಿಂದೂ ಧರ್ಮವು ತನ್ನದೇ ಆದ ಶಕ್ತಿಯನ್ನು ಹೊಂದಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಭಾಗವಹಿಸುವುದರಿಂದ ಜೀವನದಲ್ಲಿ ಒಂದಿಷ್ಟು ನೆಮ್ಮದಿ ಪಡೆಯಲು ಸಾಧ್ಯ. ನಾಡಿನಲ್ಲಿ ಈ ವರ್ಷ ಉತ್ತಮ ಮಳೆಯಾಗಿ ರೈತರನ್ನು ಮತ್ತು ತನ್ನ ಮಕ್ಕಳನ್ನು ಗ್ರಾಮದೇವತೆ ಕಾಪಾಡಬೇಕು. ಪೂರ್ವಿಕರ ಆಚರಣೆಯನ್ನು ಇಂದಿನ ಯುವಪೀಳಿಗೆ ಮುಂದುವರಿಸುವ ಅಗತ್ಯತೆ ಹೆಚ್ಚಾಗಿದೆ ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————


    Provided by
    Provided by
    admin
    • Website

    Related Posts

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!

    July 19, 2026

    ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ

    July 19, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ತುಮಕೂರು: ಎಸ್‌ ಐಆರ್ ಎನ್ಯುಮರೇಷನ್ ಅರ್ಜಿ ವಿತರಣೆಯಲ್ಲಿ ಜು.23ರ ಗುರುವಾರದ ಅಂತ್ಯಕ್ಕೆ ಶೇ.100ರಷ್ಟು ಪ್ರಗತಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ…

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.