ತುಮಕೂರು: ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಅಧ್ಯಯನದಲ್ಲಿ ತೊಡಗಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ. ಪ್ರತಿನಿತ್ಯ ದಿನಪತ್ರಿಕೆ ಓದುವುದರಿಂದ ಜಗತ್ತಿನ ಆಗುಹೋಗು ತಿಳಿದುಕೊಳ್ಳುವುದು ಸಾಧ್ಯ ಎಂದು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ದಾಕ್ಷಾಯಿಣಿ ತಿಳಿಸಿದರು.
ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಮತ್ತು ಶಾಂತಿನಿಕೇತನ ಯುವವೃಂದ ಇವರ ಜಂಟಿ ಆಶ್ರಯದಲ್ಲಿ ನಡೆದ ಶಾಂತಿನಿಕೇತನ ಜ್ಞಾನ ಸ್ಪೂರ್ತಿ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಅವರು ಬಹುಮಾನ ವಿತರಿಸಿ ಮಾತನಾಡಿದರು.
ಶಾಂತಿನಿಕೇತನ ಸಂಸ್ಥಾಪಕ ರಾಜೇಶ್ ಮಾತನಾಡಿ, ಸರ್ಕಾರಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಅರಿವನ್ನು ಮೂಡಿಸಲು ಶಾಂತಿನಿಕೇತನವು ರಸಪ್ರಶ್ನೆ ಕಾರ್ಯಕ್ರಮ ನಡೆಸುತ್ತಿದೆ. ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು, ತುಮಕೂರಿನ ಬೇರೆ ಬೇರೆ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಈಗಾಗಲೇ 30 ಸಂಚಿಕೆಗಳನ್ನು ಪೂರೈಸಿದೆ ಎಂದರು.
ವ್ಯವಹಾರಾಡಳಿತ ವಿಭಾಗದ ಮುಖ್ಯಸ್ಥ ಡಾ.ಎಂ.ಡಿ.ಶ್ರೀನಿವಾಸ, ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸುವುದರಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹೊಸ ಆವಿಷ್ಕಾರದ ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ವಿಭಿನ್ನ ಕೌಶಲ್ಯ ಕಲಿತುಕೊಳ್ಳಬೇಕು ಎಂದರು.
ಕಲಾ ಕಾಲೇಜಿನ ಇತಿಹಾಸ ಮತ್ತು ಪತ್ರಿಕೋದ್ಯಮ ವಿಭಾಗದ ಸಂಜಯ್ ಕುಮಾರ್, ಶಿವಪ್ಪ, ಛತ್ರಪತಿ, ರಶ್ಮಿ ಮೊದಲ ಸ್ಥಾನದೊಂದಿಗೆ ರೂ.2000 ನಗದು ಬಹುಮಾನ ಪಡೆದರು. ರಾಜ್ಯಶಾಸ್ತ್ರ ಮತ್ತು ಇಂಗ್ಲಿಷ್ ವಿಭಾಗದ ಅನಿಷಾ ಜಿ., ರಾಕೇಶ್ ಸಿ, ಪವನ್ ಕುಮಾರ್, ಪ್ರದೀಪ್ ಎಸ್. ದ್ವಿತೀಯ ಸ್ಥಾನ ಪಡೆದರು. ಉಪನ್ಯಾಸಕರಾದ ಅರುಣ್ ಕುಮಾರ್ ಕೆ., ಮಂಜುಳದೇವಿ, ಡಾ.ಆಶಾರಾಣಿ ಮತ್ತಿತರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW