ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಹಿನ್ನೆಲೆ ಕನ್ನಡ ಬಿಗ್ಬಾಸ್ನ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಸೋಮವಾರ ಬಂಧಿಸಿ, ಬಿಡುಗಡೆ ಮಾಡಲಾಗಿತ್ತು. ಆದರೆ ಮಂಗಳವಾರ ಮತ್ತೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 270(ಸಾರ್ವಜನಿಕ ತೊಂದರೆ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ರಜತ್ ಹಾಗೂ ವಿನಯ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬಸವೇಶ್ವರ ನಗರ ಠಾಣೆ ಪೊಲೀಸರು ಇಂದು ಇಬ್ಬರು ಆರೋಪಿಗಳನ್ನು ಠಾಣೆ ಕರೆತಂದು, ರೀಲ್ಸ್ನಲ್ಲಿ ಬಳಸಿದ್ದ ಅಸಲಿ ಮಚ್ಚು ತೋರಿಸುವಂತೆ ಸೂಚಿಸಿದ್ದಾರೆ. ಆದರೆ ಪೊಲೀಸರಿಗೆ ಸರಿಯಾದ ಉತ್ತರ ಸಿಕ್ಕಿಲ್ಲ. ಹೀಗಾಗಿ ಪೊಲೀಸರು ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ನಾಗರಬಾವಿಯ ಅಕ್ಷಯ ಸ್ಟುಡಿಯೋಗೆ ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ಮಾಡಿದ್ದಾರೆ.
ಅಕ್ಷಯ ಸ್ಟುಡಿಯೋದ ಮೂಲೆಮೂಲೆಯಲ್ಲಿ ಹುಡುಕಿದರೂ ಲಾಂಗ್ ಪತ್ತೆ ಆಗಿಲ್ಲ. ಮಚ್ಚು ಎಲ್ಲಿದೆ ಎಂದು ಕೇಳಿದರೂ ರಜತ್ ಹಾಗೂ ವಿನಯ್ ಗೌಡ ಬಾಯಿ ಬಿಟ್ಟಿಲ್ಲ. ಸೆಟ್ ಹಾಕಿದ್ದವರು ತಗೊಂಡು ಹೋಗಿರಬಹುದೆಂದು ತಿಳಿಸಿದ್ದಾರೆನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4