nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಸ ವರ್ಷ –2026,   ಸಂಕ್ರಾಂತಿ…!

    January 14, 2026

    ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ

    January 14, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026
    Facebook Twitter Instagram
    ಟ್ರೆಂಡಿಂಗ್
    • ಹೊಸ ವರ್ಷ –2026,   ಸಂಕ್ರಾಂತಿ…!
    • ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ
    • ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ
    • ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
    • ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ:  ಕೊರಟಗೆರೆ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ
    • ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಹುಬಲಿ ಸ್ವಾಮಿಯ ಅಭಿಷೇಕ: ವೃಷಭನಾಥ ಸ್ವಾಮಿಯ ಲಘು ಪಂಚಕಲ್ಯಾಣದ ಧಾರ್ಮಿಕ ವಿಧಿ
    ರಾಜ್ಯ ಸುದ್ದಿ February 16, 2025

    ಬಾಹುಬಲಿ ಸ್ವಾಮಿಯ ಅಭಿಷೇಕ: ವೃಷಭನಾಥ ಸ್ವಾಮಿಯ ಲಘು ಪಂಚಕಲ್ಯಾಣದ ಧಾರ್ಮಿಕ ವಿಧಿ

    By adminFebruary 16, 2025No Comments2 Mins Read
    shravana belagola

    ಶ್ರವಣಬೆಳಗೊಳ :  ಬಾಹುಬಲಿ ಸ್ವಾಮಿಯ ಅಭಿಷೇಕದ ನಿಮಿತ್ತ ವೃಷಭನಾಥ ಸ್ವಾಮಿಯ ಲಘು ಪಂಚಕಲ್ಯಾಣದ ಧಾರ್ಮಿಕ ವಿಧಿಗಳು ಆಚಾರ್ಯರು, ತ್ಯಾಗಿಗಳು ಹಾಗೂ ಭಟ್ಟಾರಕ ಸ್ವಾಮೀಜಿಗಳ ಸಾನಿಧ್ಯ ಮತ್ತು ಕ್ಷೇತ್ರದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಪುರೋಹಿತ ವರ್ಗದವರು ಶನಿವಾರ ನೆರವೇರಿಸಿದರು.

    ಭಂಡಾರ ಬಸದಿಯ ಮುಂಭಾಗ ಬೆಳಗ್ಗೆ ವಿವಿಧ ಮಂಗಲ ವಾದ್ಯಗಳೊಂದಿಗೆ ಧ್ವಜಾರೋಹಣವನ್ನು ಬೆಂಗಳೂರಿನ ಅನಿಲ್ ಸೇಠಿ ಹಾಗೂ ವೇದಿಕೆಯ ಉದ್ಘಾಟನೆಯನ್ನು ಚಂಪಾಲಾಲ್ ಭಂಡಾರಿ ನೆರವೇರಿಸಿದರು.


    Provided by
    Provided by

    ಕಂಕಣ ಧಾರಣೆಯೊಂದಿಗೆ ಮಕರ ಲಗ್ನದಲ್ಲಿ ಸಕಲೀಕರಣ, ಇಂದ್ರಪ್ರತಿಷ್ಠೆ ನಾಂದಿ ಮಂಗಲ, ಅಖಂಡ ದೀಪ ಸ್ಥಾಪನೆ ಅಂಕುರಾರ್ಪಣೆಯನ್ನು ನೆರವೇರಿಸಲಾಯಿತು. ನೂತನ ಬಾಹುಬಲಿ ಬಿಂಬಕ್ಕೆ ಧಾಮ ಸಂಪ್ರೋಕ್ಷಣೆ, ವಿಮಾನ ಶುದ್ಧಿ, ಹೋಮಗಳು ನಡೆದ ನಂತರ 14 ನದಿಗಳ ಶುದ್ಧ ಜಲದಿಂದ ಮೂರ್ತಿಯನ್ನು ಮಂತ್ರಗಳೊಂದಿಗೆ ಶುದ್ಧಿ ಮಾಡಲಾಯಿತು.

    ಕಿರೀಟ ಧರಿಸಿದ್ದ ಅಷ್ಟ ಕನ್ನಿಕೆಯರು ಮತ್ತು ಶ್ರಾವಕ ಶ್ರಾವಕಿಯರು ಸೇರಿ ಬಿಂಬಕ್ಕೆ ಅರಿಷಿಣ ಕೇಸರಿಮ ಕ್ಷೀರ, ಗಂಧಗಳಿಂದ ಸಂಪ್ರೋಕ್ಷಿಸಿ ಶುದ್ಧಿ ಮಾಡಲಾಯಿತು. ರಚಿಸಿದ್ದ ಯಾಗ ಮಂಟಪದಲ್ಲಿ ವಾಸ್ತು ವಿಧಾನ, ನವಗ್ರಹ ಹೋಮಗಳು ನಡೆದವು. ಮಂಡಲದ ಮಧ್ಯೆ ರಜತದ ಪೀಠದಲ್ಲಿ ತೀರ್ಥಂಕರರ ಬಿಂಬಗಳನ್ನು ಅಭಿನವ ಶ್ರೀಗಳು ಪ್ರತಿಷ್ಠಾಪಿಸಿದರು.

    ನಂತರ ಮಂಟಪದಲ್ಲಿ 9 ಮಂಗಲ ಕಲಶ,ಅಷ್ಟ ಮಂಗಲಗಳು, ಅಷ್ಟ ಆಯುಧಗಳು, ಚಾಮರಗಳು, ಧರ್ಮಧ್ವಜದ ಬಾವುಟಗಳನ್ನು ಯಂತ್ರದೊಂದಿಗೆ ಪ್ರತಿಷ್ಠಾಪಿಸಲಾಯಿತು. ಮಹಾಮಂತ್ರಗಳೊಂದಿಗೆ ಧಾರ್ಮಿಕ ವಿಧಿಗಳು ನಿರ್ವಿಜ್ಞವಾಗಿ ನೆರವೇರಲೆಂದು ದೇವಾನು ದೇವತೆಗಳಿಗೆ ಆಚಾರ್ಯರಿಗೆ ಸಮಸ್ತ ತ್ಯಾಗಿವೃಂದಕ್ಕೆ ದ್ವಾರಪಾಲಕರಿಗೆ ಕ್ಷೇತ್ರದ ಅಧಿದೇವತೆ ಮತ್ತು ಭೂಮಿಗೆ ಜಲ, ಗಂಧ, ಅಕ್ಷತೆ, ಪುಷ್ಪ, ಚರು, ದೀಪ, ಧೂಪ, ಫಲಗಳನ್ನು ಅರ್ಪಿಸಿ, ಶಾಂತಿಧಾರದೊಂದಿಗೆ ಮಹಾರ್ಘ್ಯ ಸಮರ್ಪಿಸಲಾಯಿತು.

    ನೆರೆದಿದ್ದ ಭಕ್ತರು ಜಯಘೋಷಗಳನ್ನು ಮೊಳಗಿಸಿದರು. ಸಮವಸರಣ ಯಾಗ ಮಂಟಪದ ಸನ್ನಿಧಿಯಲ್ಲಿ ಭೂತ, ವರ್ತಮಾನ, ಭವಿಷ್ಯತ್ ಕಾಲದ 24 ತೀರ್ಥಂಕರರಿಗೆ ಪಂಚಕಲ್ಯಾಣದಲ್ಲಿ ಭಾಗವಹಿಸಿದ್ದ ಅತ್ತೆ ಮಾವರಾಗಿ ಶ್ಯಾಮಲ ವಿಜಯಕುಮಾರ್, ಸೌಧರ್ಮ ಇಂದ್ರ ಇಂದ್ರಾಣಿಯರಾಗಿ ರಾಜುಲ್ ಮಹಾವೀರ ಪ್ರಸಾದ್ ಜೈನ್, ಸನತ್ಕುಮಾರರಾಗಿ ಪ್ರಮೀಳಾ ಸುನೀಲ್ ಕುಮಾರ್ ಜೈನ್, ಮಹೇಂದ್ರರಾಗಿ ದೀಕ್ಷಾ ವಿವೇಕ್ ಕುಮಾರ್, ತೀರ್ಥಂಕರರ ಮಾತಾ ಪಿತರಾಗಿ ಆಶಾ ಜಿನೇಂದ್ರ, ಈಶಾನ್ಯ ಇಂದ್ರರಾಗಿ ಶ್ವೇತಾ ನೀಲೇಶ್, ಕುಭೇರರಾಗಿ ಪೂರ್ಣಿಮಾ ಅನಂತಪದ್ಮನಾಭ್, ಯಜ್ಞ ನಾಯಕರಾಗಿ ಸುಪ್ರಿಯಾ ಹೇಮಂತ್ ಕುಮಾರ್, ದಂಪತಿಗಳು ಮತ್ತು ಚಕ್ರವರ್ತಿಯಾಗಿ ಪ್ರಖರ್ ಜೈನ್, ಅಷ್ಟ ವಿಧಾರ್ಚನೆ ಮಾಡಿ ಶ್ರೀಫಲಗಳನ್ನು ಅರ್ಪಿಸಿದರು.

    ಪೂಜೆಯ ನೇತೃತ್ವವನ್ನು ಎಸ್.ಡಿ.ನಂದಕುಮಾರ್ ಶಾಸ್ತ್ರಿ, ಪ್ರತಿಷ್ಠಾಚಾರ್ಯರಾದ ಶ್ರೀಮಂಧರ ಉಪಾಧ್ಯೆ, ಎಸ್.ಪಿ.ಜಿನೇಶ್ ಕುಮಾರ್, ರಾಜ್ ಕುಮಾರ್ ಶಾಸ್ತ್ರಿ ಹಾಗೂ ಪಂಡಿತ ವರ್ಗ ವಹಿಸಿದ್ದರು. ಪೂಜಾಷ್ಟಕಗಳಿಗೆ ಸಂಗೀತ ಹಾಡುಗಾರಿಕೆಯನ್ನು ಉದ್ಗಾಂವ್ ನ ಸಚಿನ್ ಚೌಗಲೇ ತಂಡದವರು ನಿರ್ವಹಿಸಿದರು.

    ಸಾನಿಧ್ಯವನ್ನು ಆಚಾರ್ಯ ಕುಂಥುಸಾಗರ ಮಹಾರಾಜರು ಮತ್ತು ಸಂಘಸ್ಥ ತ್ಯಾಗಿಗಳು ಮಾತಾಜಿಯವರು ಅರಹಂತಗಿರಿಯ ಧವಲಕೀರ್ತಿ ಸ್ವಾಮೀಜಿ, ವಿಚಾರಪಟ್ಟ ಕ್ಷುಲ್ಲಕ ಪ್ರಮೇಯ ಸಾಗರ ಸ್ವಾಮಿಜಿ ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ

    January 12, 2026

    ‘ಕೊರಗಜ್ಜ’ ರೀಲ್ಸ್ : ಚಿತ್ರತಂಡದ ವಿರುದ್ದ ಕೊಡಗಿನ ದೈವ ಆರಾಧಕರ ಆಕ್ರೋಶ

    January 12, 2026

    ದುನಿಯಾ ವಿಜಯ್ ನಟನೆಯ ಲ್ಯಾಂಡ್‌ ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ

    January 12, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಹೊಸ ವರ್ಷ –2026,   ಸಂಕ್ರಾಂತಿ…!

    January 14, 2026

    ಹೊಸ ವರ್ಷ ಆರಂಭದಲ್ಲಿ ಬರುವ ಮೊದಲ ಹಬ್ಬ ಸಂಕ್ರಾಂತಿ.  ಮಕರ ಸಂಕ್ರಾಂತಿಯನ್ನು ಉತ್ಸವ ಸಂಭ್ರಮದಿಂದ ಆಚರಿಸುತ್ತಾರೆ.  ಆದರೆ ದಕ್ಷಿಣ ಭಾರತದಲ್ಲಿ…

    ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ

    January 14, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ

    January 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.