nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಹುಬಲಿ ಸ್ವಾಮಿಯ ಅಭಿಷೇಕ: ವೃಷಭನಾಥ ಸ್ವಾಮಿಯ ಲಘು ಪಂಚಕಲ್ಯಾಣದ ಧಾರ್ಮಿಕ ವಿಧಿ
    ರಾಜ್ಯ ಸುದ್ದಿ February 16, 2025

    ಬಾಹುಬಲಿ ಸ್ವಾಮಿಯ ಅಭಿಷೇಕ: ವೃಷಭನಾಥ ಸ್ವಾಮಿಯ ಲಘು ಪಂಚಕಲ್ಯಾಣದ ಧಾರ್ಮಿಕ ವಿಧಿ

    By adminFebruary 16, 2025No Comments2 Mins Read
    shravana belagola

    ಶ್ರವಣಬೆಳಗೊಳ :  ಬಾಹುಬಲಿ ಸ್ವಾಮಿಯ ಅಭಿಷೇಕದ ನಿಮಿತ್ತ ವೃಷಭನಾಥ ಸ್ವಾಮಿಯ ಲಘು ಪಂಚಕಲ್ಯಾಣದ ಧಾರ್ಮಿಕ ವಿಧಿಗಳು ಆಚಾರ್ಯರು, ತ್ಯಾಗಿಗಳು ಹಾಗೂ ಭಟ್ಟಾರಕ ಸ್ವಾಮೀಜಿಗಳ ಸಾನಿಧ್ಯ ಮತ್ತು ಕ್ಷೇತ್ರದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಪುರೋಹಿತ ವರ್ಗದವರು ಶನಿವಾರ ನೆರವೇರಿಸಿದರು.

    ಭಂಡಾರ ಬಸದಿಯ ಮುಂಭಾಗ ಬೆಳಗ್ಗೆ ವಿವಿಧ ಮಂಗಲ ವಾದ್ಯಗಳೊಂದಿಗೆ ಧ್ವಜಾರೋಹಣವನ್ನು ಬೆಂಗಳೂರಿನ ಅನಿಲ್ ಸೇಠಿ ಹಾಗೂ ವೇದಿಕೆಯ ಉದ್ಘಾಟನೆಯನ್ನು ಚಂಪಾಲಾಲ್ ಭಂಡಾರಿ ನೆರವೇರಿಸಿದರು.


    Provided by
    Provided by

    ಕಂಕಣ ಧಾರಣೆಯೊಂದಿಗೆ ಮಕರ ಲಗ್ನದಲ್ಲಿ ಸಕಲೀಕರಣ, ಇಂದ್ರಪ್ರತಿಷ್ಠೆ ನಾಂದಿ ಮಂಗಲ, ಅಖಂಡ ದೀಪ ಸ್ಥಾಪನೆ ಅಂಕುರಾರ್ಪಣೆಯನ್ನು ನೆರವೇರಿಸಲಾಯಿತು. ನೂತನ ಬಾಹುಬಲಿ ಬಿಂಬಕ್ಕೆ ಧಾಮ ಸಂಪ್ರೋಕ್ಷಣೆ, ವಿಮಾನ ಶುದ್ಧಿ, ಹೋಮಗಳು ನಡೆದ ನಂತರ 14 ನದಿಗಳ ಶುದ್ಧ ಜಲದಿಂದ ಮೂರ್ತಿಯನ್ನು ಮಂತ್ರಗಳೊಂದಿಗೆ ಶುದ್ಧಿ ಮಾಡಲಾಯಿತು.

    ಕಿರೀಟ ಧರಿಸಿದ್ದ ಅಷ್ಟ ಕನ್ನಿಕೆಯರು ಮತ್ತು ಶ್ರಾವಕ ಶ್ರಾವಕಿಯರು ಸೇರಿ ಬಿಂಬಕ್ಕೆ ಅರಿಷಿಣ ಕೇಸರಿಮ ಕ್ಷೀರ, ಗಂಧಗಳಿಂದ ಸಂಪ್ರೋಕ್ಷಿಸಿ ಶುದ್ಧಿ ಮಾಡಲಾಯಿತು. ರಚಿಸಿದ್ದ ಯಾಗ ಮಂಟಪದಲ್ಲಿ ವಾಸ್ತು ವಿಧಾನ, ನವಗ್ರಹ ಹೋಮಗಳು ನಡೆದವು. ಮಂಡಲದ ಮಧ್ಯೆ ರಜತದ ಪೀಠದಲ್ಲಿ ತೀರ್ಥಂಕರರ ಬಿಂಬಗಳನ್ನು ಅಭಿನವ ಶ್ರೀಗಳು ಪ್ರತಿಷ್ಠಾಪಿಸಿದರು.

    ನಂತರ ಮಂಟಪದಲ್ಲಿ 9 ಮಂಗಲ ಕಲಶ,ಅಷ್ಟ ಮಂಗಲಗಳು, ಅಷ್ಟ ಆಯುಧಗಳು, ಚಾಮರಗಳು, ಧರ್ಮಧ್ವಜದ ಬಾವುಟಗಳನ್ನು ಯಂತ್ರದೊಂದಿಗೆ ಪ್ರತಿಷ್ಠಾಪಿಸಲಾಯಿತು. ಮಹಾಮಂತ್ರಗಳೊಂದಿಗೆ ಧಾರ್ಮಿಕ ವಿಧಿಗಳು ನಿರ್ವಿಜ್ಞವಾಗಿ ನೆರವೇರಲೆಂದು ದೇವಾನು ದೇವತೆಗಳಿಗೆ ಆಚಾರ್ಯರಿಗೆ ಸಮಸ್ತ ತ್ಯಾಗಿವೃಂದಕ್ಕೆ ದ್ವಾರಪಾಲಕರಿಗೆ ಕ್ಷೇತ್ರದ ಅಧಿದೇವತೆ ಮತ್ತು ಭೂಮಿಗೆ ಜಲ, ಗಂಧ, ಅಕ್ಷತೆ, ಪುಷ್ಪ, ಚರು, ದೀಪ, ಧೂಪ, ಫಲಗಳನ್ನು ಅರ್ಪಿಸಿ, ಶಾಂತಿಧಾರದೊಂದಿಗೆ ಮಹಾರ್ಘ್ಯ ಸಮರ್ಪಿಸಲಾಯಿತು.

    ನೆರೆದಿದ್ದ ಭಕ್ತರು ಜಯಘೋಷಗಳನ್ನು ಮೊಳಗಿಸಿದರು. ಸಮವಸರಣ ಯಾಗ ಮಂಟಪದ ಸನ್ನಿಧಿಯಲ್ಲಿ ಭೂತ, ವರ್ತಮಾನ, ಭವಿಷ್ಯತ್ ಕಾಲದ 24 ತೀರ್ಥಂಕರರಿಗೆ ಪಂಚಕಲ್ಯಾಣದಲ್ಲಿ ಭಾಗವಹಿಸಿದ್ದ ಅತ್ತೆ ಮಾವರಾಗಿ ಶ್ಯಾಮಲ ವಿಜಯಕುಮಾರ್, ಸೌಧರ್ಮ ಇಂದ್ರ ಇಂದ್ರಾಣಿಯರಾಗಿ ರಾಜುಲ್ ಮಹಾವೀರ ಪ್ರಸಾದ್ ಜೈನ್, ಸನತ್ಕುಮಾರರಾಗಿ ಪ್ರಮೀಳಾ ಸುನೀಲ್ ಕುಮಾರ್ ಜೈನ್, ಮಹೇಂದ್ರರಾಗಿ ದೀಕ್ಷಾ ವಿವೇಕ್ ಕುಮಾರ್, ತೀರ್ಥಂಕರರ ಮಾತಾ ಪಿತರಾಗಿ ಆಶಾ ಜಿನೇಂದ್ರ, ಈಶಾನ್ಯ ಇಂದ್ರರಾಗಿ ಶ್ವೇತಾ ನೀಲೇಶ್, ಕುಭೇರರಾಗಿ ಪೂರ್ಣಿಮಾ ಅನಂತಪದ್ಮನಾಭ್, ಯಜ್ಞ ನಾಯಕರಾಗಿ ಸುಪ್ರಿಯಾ ಹೇಮಂತ್ ಕುಮಾರ್, ದಂಪತಿಗಳು ಮತ್ತು ಚಕ್ರವರ್ತಿಯಾಗಿ ಪ್ರಖರ್ ಜೈನ್, ಅಷ್ಟ ವಿಧಾರ್ಚನೆ ಮಾಡಿ ಶ್ರೀಫಲಗಳನ್ನು ಅರ್ಪಿಸಿದರು.

    ಪೂಜೆಯ ನೇತೃತ್ವವನ್ನು ಎಸ್.ಡಿ.ನಂದಕುಮಾರ್ ಶಾಸ್ತ್ರಿ, ಪ್ರತಿಷ್ಠಾಚಾರ್ಯರಾದ ಶ್ರೀಮಂಧರ ಉಪಾಧ್ಯೆ, ಎಸ್.ಪಿ.ಜಿನೇಶ್ ಕುಮಾರ್, ರಾಜ್ ಕುಮಾರ್ ಶಾಸ್ತ್ರಿ ಹಾಗೂ ಪಂಡಿತ ವರ್ಗ ವಹಿಸಿದ್ದರು. ಪೂಜಾಷ್ಟಕಗಳಿಗೆ ಸಂಗೀತ ಹಾಡುಗಾರಿಕೆಯನ್ನು ಉದ್ಗಾಂವ್ ನ ಸಚಿನ್ ಚೌಗಲೇ ತಂಡದವರು ನಿರ್ವಹಿಸಿದರು.

    ಸಾನಿಧ್ಯವನ್ನು ಆಚಾರ್ಯ ಕುಂಥುಸಾಗರ ಮಹಾರಾಜರು ಮತ್ತು ಸಂಘಸ್ಥ ತ್ಯಾಗಿಗಳು ಮಾತಾಜಿಯವರು ಅರಹಂತಗಿರಿಯ ಧವಲಕೀರ್ತಿ ಸ್ವಾಮೀಜಿ, ವಿಚಾರಪಟ್ಟ ಕ್ಷುಲ್ಲಕ ಪ್ರಮೇಯ ಸಾಗರ ಸ್ವಾಮಿಜಿ ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.