ಬೆಂಗಳೂರು: ವಿ.ಜೆ.ಇಂಟರ್ ನ್ಯಾಷನಲ್ ಶಾಲಾ ಮೈದಾನ ಬಾಗಲೂರು ಯಲಹಂಕ ತಾಲ್ಲೂಕು, ಬೆಂಗಳೂರು ಇಲ್ಲಿ ರೇಣುಕರಾಜ್.ಜಿ.ಹೆಚ್.ರವರಿಗೆ 2024 ನೇ ಸಾಲಿನ ರಾಜ್ಯ ಮಟ್ಟದ ಹೆಚ್.ನರಸಿಂಹಯ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು(ರಿ), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ ಮತ್ತು ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ(ರಿ) ಬೆಂಗಳೂರುರವರ ಸಹಕಾರದ ವತಿಯಿಂದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಹಾಗೂ ವೈಚಾರಿಕ ದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ 4 ನೇ ವೈಜ್ಞಾನಿಕ ಸಮ್ಮೇಳನದಲ್ಲಿ ವಿಜ್ಞಾನ — ಸಾಹಿತ್ಯ — ಸಂಸ್ಕೃತಿ ಸಮಾಗಮ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಕೊಡಲಾಗುವಂತೆ, 2024 ನೇ ಸಾಲಿನ ರಾಜ್ಯ ಮಟ್ಟದ ಹೆಚ್. ನರಸಿಂಹಯ್ಯ.ಪ್ರಶಸ್ತಿಯನ್ನು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಪಾವಗಡ ತಾಲ್ಲೂಕಿನ ಅರಸೀಕೆರೆ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ರೇಣುಕರಾಜ್ ಜಿ.ಹೆಚ್. ರವರಿಗೆ ಶೈಕ್ಷಣಿಕ ಕ್ಷೇತ್ರ ವಿಭಾಗದಿಂದ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಡಾ.ಎ.ಎಸ್.ಕಿರಣ್ ಕುಮಾರ್ ISROದ ಮಾಜಿ ಅಧ್ಯಕ್ಷರು, ಡಾ.ಸಿ ಸೋಮಶೇಖರ್ IAS ಮಾಜಿ ಅಧ್ಯಕ್ಷರು ಗಡಿನಾಡ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಉಮಾಶ್ರೀ ವಿಧಾನ ಪರಿಷತ್ ಸದಸ್ಯರು, ಹಿರಿಯ ರಂಗಕರ್ಮಿ ಮತ್ತು ಚಲನಚಿತ್ರ ನಟಿ ಮತ್ತು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು(ರಿ) ನ ಸಂಸ್ಥಾಪಕ ಅಧ್ಯಕ್ಷರಾದ ಹುಲಿಕಲ್ ನಟರಾಜ್ ರವರು ಭಾಗವಹಿದ್ದರು.
ಪ್ರಶಸ್ತಿಯನ್ನು ಸ್ವಿಕರಿಸಿದ್ದಕ್ಕಾಗಿ ಶಾಲೆಯ ಮುಖ್ಯಶಿಕ್ಷಕರು ಮತ್ತು ಶಿಕ್ಷಕರು ,ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಹಳೆಯ ವಿದ್ಯಾರ್ಥಿಗಳು, ಊರಿನ ಗ್ರಾಮಸ್ಥರು, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx