nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    • ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
    • ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
    • ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
    • ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
    • ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
    • ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ಧಾರ್ಥ ಸಮೂಹ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಆಚರಣೆ
    ತುಮಕೂರು January 27, 2025

    ಸಿದ್ಧಾರ್ಥ ಸಮೂಹ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಆಚರಣೆ

    By adminJanuary 27, 2025No Comments2 Mins Read
    sidhartha

    ತುಮಕೂರು: ಸಿದ್ಧಾರ್ಥ ಸಮೂಹ ಸಂಸ್ಥೆಗಳಾದ ಮೆಡಿಕಲ್, ಇಂಜಿನಿಯರಿಂಗ್ ಮತ್ತು ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜು ಕ್ಯಾಂಪಸ್ ನಲ್ಲಿ 76ನೇ ಗಣರಾಜ್ಯೋತ್ಸವನ್ನು ಸರಳ ಮತ್ತುಅರ್ಥಪೂರ್ಣವಾಗಿ ಆಚರಿಸಲಾಯಿತು.

    ನಗರದ ಸಮೀಪದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮತ್ತುಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಗೃಹ ಸಚಿವರು ಹಾಗೂ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಜಿಪರಮೇಶ್ವರ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಸಾಹೇ ವಿವಿಯ ಕಾಲೇಜುಗಳ ಸಿಬ್ಬಂದಿ ವರ್ಗಕ್ಕೆ ಸಂವಿಧಾನ ಪೀಠಿಕೆಯ ಪ್ರಮಾಣವಚನ ಭೋಧಿಸಿದರು.


    Provided by
    Provided by

    ನಂತರ ಮಾತನಾಡಿದ ಅವರು,ಭಾರತದ ಸಂವಿಧಾನಜಾರಿಗೆ ಬಂದು ಇಂದಿಗೆ 76 ವರ್ಷಕಳೆದಿದ್ದು, ಸರ್ವರಿಗೂ ಸಮನಾದ ಹಕ್ಕು ಬಾಧ್ಯತೆಗಳನ್ನು ಕಲ್ಪಿಸಿರುವ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದೆ. ನಾವೆಲ್ಲರು ಸಂವಿಧಾನದಡಿಯಲ್ಲಿ ಜೀವನ ಸಾಗಿಸುತ್ತಿದ್ದು, ಅದರ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತುಅದರ ಮೂಲ ಉದ್ದೇಶಗಳನ್ನು ಅರಿತು ಮುನ್ನಡೆಯಬೇಕಿದೆ ಎಂದು ಕರೆ ನೀಡಿದರು.

    ಆರ್ಥಿಕತೆ ಮತ್ತುತಾಂತ್ರಿಕ ಪ್ರಗತಿ ಸಾಧನೆಯಲ್ಲಿ ಭಾರತ ಪ್ರಪಂಚದಲ್ಲಿಯೇ 3ನೇ ಸ್ಥಾನ ಪಡೆದಿದೆ. ಮುಂದೆ ಇದೇ ರೀತಿ ಅಭಿವೃದ್ದಿ ಸಾಧಿಸಲು ಯುವ ಸಮದಾಯ ಕ್ರಿಯಾತ್ಮಕ ಕೆಲಸಗಳತ್ತ ಗಮನ ಹರಿಸಬೇಕಾಗಿದೆ ಎಂದು ಕರೆ ನೀಡಿ ಡಾ.ಜಿ.ಪರಮೇಶ್ವರ ಅವರು ಇಂದಿನ ದಿನಗಳಲ್ಲಿ ಶಿಕ್ಷಣ ಜೀವನದ ಬಹುಮುಖ್ಯ ಪಾತ್ರವಾಗಿದ್ದು, ಎಲ್ಲರೂ ಶಿಕ್ಷಣ ಪಡೆದು ಉತ್ತಮ ಜೀವನರೂಪಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಶಿಕ್ಷಣ, ಆರೋಗ್ಯ ನೀಡುವಲ್ಲಿ ತಮ್ಮ ಸಂಸ್ಥೆ ಕಾಳಜಿ ವಹಿಸುತ್ತಿದೆ ಎಂದರು.

    ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ಕುಲಸಚಿವ ಡಾ.ಎಂ.ಝಡ್. ಕುರಿಯನ್, ಶ್ರೀಸಿದ್ಧಾರ್ಥ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಬಿ.ಸಾಣಿಕೊಪ್ಪ, ಉಪಪ್ರಾಂಶುಪಾಲರಾದ ಡಾ. ಪ್ರಭಾಕರ್, ದಂತವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರವೀಣ್ ಬಿ.ಕುಡುವ, ವೈದ್ಯಕೀಯಕಾಲೇಜಿನ ಅಧೀಕ್ಷಕರಾದ ಡಾ.ವೆಂಕಟೇಶ್ವರ್ ಹಾಗೂ ಸಾಹೇ ವಿವಿ ಮತ್ತು ವೈದ್ಯಕೀಯ ಮಹಾವಿದ್ಯಾನಿಲಯದ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಹಾಜರಿದ್ದರು.

    ಇಂಜಿನಿಯರಿಂಗ್ ಕಾಲೇಜಿನಲ್ಲಿಗಣರಾಜ್ಯೋತ್ಸವ:

    ತುಮಕೂರಿನ ಕುಣಿಗಲ್ ರಸ್ತೆಯಲ್ಲಿರುವ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್ಸಿನಲ್ಲಿ 76ನೇ ಗಣರಾಜ್ಯೋತ್ಸವನ್ನುಅರ್ಥಪೂರ್ಣವಾಗಿ ಆಚರಿಸಲಾಯಿತು. ಶಿಕ್ಷಣ ಶಿಲ್ಪಿ ಡಾ.ಎಚ್.ಎಂ.ಗಂಗಾಧರಯ್ಯ ವೃತ್ತದಲ್ಲಿಏರ್ಪಟ್ಟ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆಯನ್ನು ಹಾಡುವುದರ ಮೂಲಕ ಧ್ವಜಾರೋಣ ಮಾಡಲಾಯಿತು. ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶರವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಪಿತ ಮಹಾತ್ಮಗಾಂಧಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ವ ನಮನ ಸಲ್ಲಿಸಿದರು.

    ನಂತರ ಮಾತನಾಡಿದ ಡಾ.ಎಂ.ಎಸ್.ರವಿಪ್ರಕಾಶ,ಸಮಾಜಕ್ಕೆ ಮತ್ತು ದೇಶಕ್ಕೆ ಋಣಸಂದಾಯ ಮಾಡುವುದರ ಮೂಲಕ ದೇಶ ಸೇವೆ ಮಾಡುತ್ತಿದ್ದೇವೆ ಎಂಬ ಭಾವನೆಯನ್ನುಎಲ್ಲರೂ ಬೆಳೆಸಿಕೊಳ್ಳಬೇಕು. ಸಿಪಾಯಿ ದಂಗೆ ಮೂಲಕ ಗಳಿಸಿದ ಸ್ವಾತಂತ್ರ್ಯ ಮತ್ತುಗಣರಾಜ್ಯದಿಂದ ದೊರೆತ ಅವಕಾಶಗಳನ್ನು ಸದುಪಯೋಗ ಪಡೆದುಕೊಳ್ಳುತ್ತಿದ್ದೇವೆ. ಸಹಸ್ರಾರು ದೇಶಭಕ್ತರ ಬಲಿದಾನವನ್ನುಸದಾ ಸ್ಮರಿಸಿಕೊಳ್ಳಬೇಕು ಎಂದರು.

    ಕಾರ್ಯಕ್ರಮದಲ್ಲಿ ಡೀನ್ ಡಾ.ರೇಣುಕಾ ಲತಾ, ಬಿಬಿಎಂ ಪ್ರಾಂಶುಪಾಲರಾದ ಡಾ. ಮಮತಾ, ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಬಿ.ಟಿ.ಮುದ್ದೇಶ್, ಎನ್ ಸಿಸಿ ಅಧಿಕಾರಿ ಡಾ.ಜಯಪ್ರಕಾಶ್ , ಎನ್ ಎಸ್ ಎಸ್ ಅಧಿಕಾರಿ ಡಾ.ರವಿಕಿರಣ್, ವಿವಿಧ ವಿಭಾಗದ ಮುಖ್ಯಸ್ಥರು, ಎನ್.ಸಿ.ಸಿ. ಕ್ರೇಡಿಟ್ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಸಿದ್ದಾರ್ಥ ಪದವಿ ಕಾಲೇಜಿನಲ್ಲಿ ಧ್ವಜಾರೋಹಣ:

    ತುಮಕೂರಿನ ಸರಸ್ವತಿಪುರಂನಲ್ಲಿರುವ ಶ್ರೀ ಸಿದ್ಧಾರ್ಥ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾದ ಡಾ. ಪಿ. ಹೇಮಲತಾ ಧ್ವಜಾರೋಹಣ ನೆರವೇರಿಸಿದರು. ಶ್ರೀ ಸಿದ್ಧಾರ್ಥ ಪಿಯು ಕಾಲೇಜಿನ ಪ್ರಾಂಶುಪಾಲರದ ಭಾನುಪ್ರಕಾಶ್, ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ರಮೇಶ್ ಮಣ್ಣೇ ಹಾಗೂ ಎಲ್ಲಾ ವಿಭಾಗದ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು. ಎನ್ ಸಿಸಿ ಕೆಡೆಟ್ಸ್ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

    ಗೊಲ್ಲಹಳ್ಳಿಯಲ್ಲಿ ಧ್ವಜಾರೋಹಣ:

    76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ತುಮಕೂರಿನ ಗೊಲ್ಲಹಳ್ಳಿಯಲ್ಲಿ ದಿವಂಗತ ಡಾ.ಹೆಚ್.ಎಂ.ಗಂಗಾಧರಯ್ಯ ಹಾಗೂ ತಾಯಿ ಗಂಗಮಾಳಮ್ಮ, ಸಹೋದರ ಡಾ.ಜಿ.ಶಿವಪ್ರಸಾದ್ ರವರ ಗದ್ದುಗೆಗಳಿಗೆ ಗೃಹ ಸಚಿವರು ಹಾಗೂ ಸಿದ್ದಾರ್ಥ್ ಸಂಸ್ಥೆಯ ಕಾರ್ಯದರ್ಶಿಗಳು ಆದ ಡಾ.ಜಿ.ಪರಮೇಶ್ವರ ಅವರು ಪೂಜೆ ಸಲ್ಲಿಸಿದರು. ಬಳಿಕ ಶ್ರೀ ಸಿದ್ಧಾರ್ಥ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಧ್ವಜಾರೋಹಣಾ ನೆರವೇರಿಸಿ, ದೇಶ ಸನೇಕ ಸಮಸ್ಯೆಗಳನ್ನು ಎದುರಿಸುತಿದ್ದು, ಅದಕ್ಕೆ ಡಾ.ಅಂಬೇಡ್ಕರ್ ರೂಪಿಸಿರುವ ಸಂವಿಧಾನದಲ್ಲಿ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಬಿ. ನಂಜುಂಡಪ್ಪ, ಶಿಕ್ಷಣಾಧಿಕಾರಿಗಳಾದ ಸಿ.ಎಚ್.ತಿಪ್ಪೇಸ್ವಾಮಿ, ಎನ್.ದೇವರಾಜು ಸಮನ್ವಯಾಧಿಕಾರಿಗಳಾದ ಬಿ.ಎನ್.ದಯಾನಂದ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸಿ ಟಿ ಆರ್ ವೇದಮೂರ್ತಿ, ಡಿಇಎಲ್ ಇಡಿಕಾಲೇಜಿನ ಪ್ರಾಂಶುಪಾಲರಾದ ಡಿ.ಈಶ್ವರಪ್ಪನವರು ಹಾಗೂ ಶಾಲಾ—ಕಾಲೇಜಿನ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025

    ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ

    November 5, 2025

    ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ

    November 5, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಸರಗೂರು:   ಜಯಲಕ್ಷ್ಮೀಪುರ ಗ್ರಾಮಸ್ಥರು ಒತ್ತಾಯದ ಮೇರೆಗೆ ತಾಲೂಕಿನಿಂದ ಜಯಲಕ್ಷೀಪುರ ಗ್ರಾಮಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಟ್ಟ ತಾಲೂಕಿನ ಶಾಸಕರಾದ ಅನಿಲ್…

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025

    ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ

    November 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.