ಕೊರಟಗೆರೆ: ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಕೈಗೊಂಡಿದ್ದು ಈ ಹಿನ್ನೆಲೆಯಲ್ಲಿ ಜೂ. 30 ರಿಂದ ಜು. 29ರವರೆಗೆ ಮನೆ ಮನೆಗೆ ಬೇಟಿ ನೀಡಲಿರುವ ಗಣತಿದಾರರಿಗೆ ಅಗತ್ಯ ಮಾಹಿತಿ ನೀಡಿ ಸಹಕಾರ ನೀಡಬೇಕೆಂದು ತಹಶೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದ ಅವರು, ಮತರದಾರರ ಪಟ್ಟಿಯು ಪ್ರಜಾಪ್ರಭುತ್ವದ ಮೂಲಾಧಾರವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನ ಹೆಸರು ಮತದಾರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಅಧಿಕಾರಿಗಳು ವಿಶೇಷ ಕಾಳಜಿವಹಿಸಬೇಕು. ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2026ರ ಮತದಾರರ ಪಟ್ಟಿಯಲ್ಲಿ ಹೊಸದಾಗಿ ಅರ್ಹತೆ ಪಡೆದ 18 ವರ್ಷಗಳು ಪೂರ್ಣಗೊಂಡಿರುವ ಯುವ ಮತದಾರರ ಹೆಸರು ಸೇರ್ಪಡೆ ಮರಣ ಹೊಂದಿದ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಹಾಗೂ ವಿಳಾಸ ಬದಲಾವಣೆ ಸೇರಿದಂತೆ ವಿವಿಧ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಬಿ.ಎಲ್.ಓ ಅಧಿಕಾರಿಗಳಿಗೆ ಮನೆ ಮೆನೆಗೆ ತರಳಿ ಮಾಹಿತಿ ಸಂಗ್ರಹಿಸುವ ವಿಧಾನ ದಾಖಲೆಗಳ ಪರಿಶೀಲನೆ, ಮತದಾರರೊಂದಿಗೆ ಸಮನ್ವಯ ಸಾಧಿಸುವ ಕ್ರಮ, ಆನ್ ಲೈನ್ ಮಾಹಿತಿ, ನಮೂದುಮಾಡುವ ವಿಧಾನವನ್ನು ತರಬೇತಿಯೊಂದಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಮತದಾರರ ಪಟ್ಟಿಯನ್ನು ಸಂಪೂರ್ಣ ನಿಖರ ಹಾಗೂ ದೋಷರಹಿತವಾಗಿಸುವುದು ಚುನಾವಣಾ ಆಯೋಗದ ಪ್ರಮುಖ ಉದ್ದೇಶವಾಗಿದೆ, ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಅಧಿಕಾರಿಗಳು ಸೇರಿದಂತೆ ರಾಜಕೀಯ ಪಕ್ಷಗಳ ಮುಖಂಡರುಗಳು, ಬೂತ್ ಮಟ್ಟದ ಏಜೆಂಟ್ರು, ಸಾರ್ವಜನಿಕರು ಹಾಗೂ ಪ್ರತಿಕಾ ಮಾಧ್ಯಮದ ಪ್ರತಿನಿಧಿಗಳು ಬಿ.ಎಲ್.ಓ ಗಳೊಂದಿಗೆ ಕೈಜೋಡಿಸಿ ಸಹಕರಿಸುವಂತೆ ಮನವಿ ಮಾಡಿದರು.
ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ 6 ಹೋಬಳಿಗಳಿದ್ದು, ಒಟ್ಟು 2,09,945ಮತದಾರರು ಹೊಂದಿದ್ದು, ಅದರಲ್ಲಿ 1,03,303 ಪುರುಷರು, 1,06,185 ಮಹಿಳೆ ಇದ್ದಾರೆ. 240 ಮತಗಟ್ಟೆಗಳು, 240 ಬಿ.ಎಲ್ ಒ ಅವರನ್ನ ನೇಮಿಸಲಾಗಿದೆ ಎಂದು ತಿಳಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


