ತುಮಕೂರು: ರಸ್ತೆಗೆ ಹಾಕುವ ಡಾಂಬರ್ ಸುರಿದಿದ್ದ ಗುಂಡಿಗೆ ಬಿದ್ದಿದ್ದ ಕುರಿಗಳನ್ನು ರಕ್ಷಿಸಲು ಹೋಗಿ , ಅದರೊಳಗೆ ಬಿದ್ದಿದ್ದ ವ್ಯಕ್ತಿಯನ್ನು ಎನ್ ಸಿಸಿ ಬೆಟಾಲಿಯನ್ ಕ್ಯಾಂಪ್ ಟೀಂ ನ ಸದಸ್ಯರು ಆತನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈತುಂಬ ಡಾಂಬರ್ ಮೆತ್ತಿಕೊಂಡು ಸಾವುಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ವ್ಯಕ್ತಿಯ ಜೀವ ರಕ್ಷಿಸಲಾಗಿರುವ ಘಟನೆ ತುಮಕೂರು ತಾಲ್ಲೂಕಿನ ಹಿರೇಹಳ್ಳಿ ಬಳಿಯ ಮಂದಾರಗಿರಿ ಬೆಟ್ಟದ ಪಕ್ಕದಲ್ಲಿ ನಡೆದಿದೆ.
ಮಂದಾರಗಿರಿ ಬೆಟ್ಟದ ಬಳಿ ಕುರಿ ಮೇಯಿಸಲು ತೆರಳಿದ್ದ ಕುರಿಗಾಯಿ ಈ ವೇಳೆ ರಸ್ತೆಗೆ ಹಾಕುವ ಡಾಂಬರ್ ಸುರಿದಿದ್ದ ಗುಂಡಿಗೆ ಬಿದ್ದಿರುವ ಸುಮಾರು ಏಳೆಂಟು ಕುರಿಗಳು ಬಿದ್ದಿವೆ. ಕುರಿಗಳನ್ನ ರಕ್ಷಿಸುವ ಭರದಲ್ಲಿ ಆಯತಪ್ಪಿ ಡಾಂಬರ್ ಗುಂಡಿಗೆ ಬಿದ್ದಿದ್ದಾನೆ.
ಸುಮಾರು ಎರಡು ಗಂಟೆಗಳ ಕಾಲ ಡಾಂಬರ್ ಗುಂಡಿಯಲ್ಲೇ ಬಿದ್ದಿದ್ದ ಕುರಿಗಾಯಿಯನ್ನು ಅದೇ ಸಮಯಕ್ಕೆ ಎನ್ ಸಿಸಿ ಕ್ಯಾಂಪ್ ಗೆ ತೆರಳಿದ್ದ ಟೀಂ, ಫೈರಿಂಗ್ ತರಬೇತಿ ಪಡೆಯುವ ವೇಳೆ ಆತನನ್ನ ಗಮನಿಸಿದೆ. ಕೂಡಲೇ ಆತನನ್ನ ಗುಂಡಿಯಿಂದ ಮೇಲಕ್ಕೆ ಎತ್ತಿ ರಕ್ಷಣೆ ಮಾಡಲಾಗಿದೆ. ತುಮಕೂರಿನ ನಾಲ್ಕನೇ ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಟೀಂನಿಂದ ರಕ್ಷಣೆ ಮಾಡಲಾಗಿದ್ದು
ಎನ್ ಸಿಸಿ ಕ್ಯಾಂಪ್ ತರಬೇತಿಯಲ್ಲಿದ್ದ ಬಿ ಹೆಚ್.ಎಂ ತಿಲಕ್ ರಾಜ್, ಕೆಡೆಟ್ ಮಹೇಶ್, ಜುಬೇದ್, ಮನೋಜ್, ದರ್ಶನ್ ರಿಂದ ರಕ್ಷಣೆ ಮಾಡಲಾಗಿದೆ. ಅಲ್ಲದೆ ಐದು ಕುರಿಗಳನ್ನು ಸಹ ರಕ್ಷಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA