nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    • ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿವಿಯನ್ನು ಬೆಳೆಸುವುದು ನಮ್ಮೆಲ್ಲರ ಹೊಣೆ: ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿಕೆ
    ತುಮಕೂರು March 29, 2025

    ತುಮಕೂರು ವಿವಿಯನ್ನು ಬೆಳೆಸುವುದು ನಮ್ಮೆಲ್ಲರ ಹೊಣೆ: ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿಕೆ

    By adminMarch 29, 2025No Comments2 Mins Read
    tumakuru vv

    ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ಅಭಿವೃದ್ಧಿಗೆ ಆರ್ಥಿಕ ಶಕ್ತಿಯನ್ನು ನೀಡಲಾಗುವುದು ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು.

    ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹ ಸೊಸೈಟಿ ವತಿಯಿಂದ ಬಿದರಕಟ್ಟೆಯಲ್ಲಿರುವ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ‘ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ’ದ ಉದ್ಘಾಟನೆಯನ್ನು ನೆರವೇರಿಸಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

    ಜಿಲ್ಲೆಗೊಂದು ವಿಶ್ವವಿದ್ಯಾಲಯ ಎಂಬ ಪರಿಕಲ್ಪನೆ ಇಟ್ಟುಕೊಂಡು ದೇಶದಲ್ಲೇ ಮೊದಲ ಬಾರಿಗೆ ತುಮಕೂರು ವಿಶ್ವದ್ಯಾಲಯ ಸ್ಥಾಪಿಸಲಾಯಿತು. ಆಧುನಿಕ ವಿಜ್ಞಾನ ವಿಶ್ವವಿದ್ಯಾಲಯವಾಗಬೇಕು ಎಂಬ ಚಿಂತನೆ ಇಟ್ಟುಕೊಂಡು ಸ್ಥಾಪಿಸಲಾಯಿತು. ರಾಜ್ಯ ಮತ್ತು ದೇಶದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಪಟ್ಟ ವಿವಿ ಆಗಬೇಕು ಎಂಬುದು ನನ್ನ ಉದ್ದೇಶವಾಗಿತ್ತು. ಆದರೆ, ಸಾಮಾನ್ಯ ವಿಶ್ವವಿದ್ಯಾಲಯವಾಗಿದೆ. ತುಮಕೂರು ವಿಶ್ವವಿದ್ಯಾನಿಲಯ ನಗರದಿಂದ ದೂರ ಆಗಿದೆ ಎಂಬುದನ್ನು ಹೊರತುಪಡಿಸಿದರೆ, ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ. ಇದನ್ನು ಬೆಳೆಸುವುದು ನಮ್ಮೆಲ್ಲರ ಹೊಣೆ ಎಂದು ಅವರು ಹೇಳಿದರು.

    ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆಗೆ 2016ರಲ್ಲಿ ಮಂಜೂರಾಗಿತ್ತು. ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಬಿಡುಗಡೆ ನಿರ್ಮಿಸಲಾಗಿದೆ. ಇದು ವಿದ್ಯಾರ್ಥಿಗಳ ಕಲಿಕೆಗೆ ಉಪಯೋಗವಾಗಲಿದೆ ಎಂದರು.

    ತುಮಕೂರಿನಲ್ಲಿ ಸೈನ್ಸ್ ಸಿಟಿ ಸ್ಥಾಪಿಸುವ ಪ್ರಸ್ತಾವನೆಯನ್ನು ಇಟ್ಟುಕೊಂಡಿದ್ದೆ. ಅದು ಟೆಕ್ನಿಕಲಿ ಸಾಧ್ಯವಾಗುವುದಿಲ್ಲ ಎಂಬುದು ಗೊತ್ತಾಯಿತುಮ ಅದರ ಭಾಗವಾಗಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.

    ಭಾರತದ ಪ್ರತಿಯೊಬ್ಬ ಪ್ರಜೆ ವೈಜ್ಞಾನಿಕ ಚಿಂತನೆ ಹೊಂದಿರಬೇಕು ಎಂದು ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಹೇಳಿದ್ದಾರೆ. ಪ್ರಕೃತಿ ಮತ್ತು ಸಮಾಜದಲ್ಲಿ ಅನೇಕ ಘಟನಾವಳಿಗಳು ನಡೆಯುತ್ತವೆ. ನಾವು ಗಮನಿಸುವುದಿಲ್ಲ. ಇವೆರಡನ್ನು ಹೊಂದಾಣಿಕೆ ಮಾಡಿ ಸೂಕ್ಷ್ಮವಾಗಿ ಗಮನಿಸಿದರೆ ಅನೇಕ ವಿಚಾರಗಳು ನಮಗೆ ಬರುತ್ತವೆ. ವಿಜ್ಞಾನದ ಇತಿಹಾಸಕ್ಕೆ ಭಾರತೀಯರು ಹೆಚ್ಚಿನ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.

    21ನೇ ಶತಮಾನ ಕಂಪ್ಯೂಟರ್ ಯುಗ. 1822ರಲ್ಲಿ ಕಂಪ್ಯೂಟಿಂಗ್ ಮಾಡಲಾಗುತ್ತದೆ. 1946ರಲ್ಲಿ ಕಂಪ್ಯೂಟಿಂಗ್ ಪರಿಕಲ್ಪನೆ ಆರಂಭವಾಗುತ್ತದೆ. ಪ್ರಸ್ತುತ ದಿನಗಳಲ್ಲಿ ಕಂಪ್ಯೂಟರ್ ಇಲ್ಲದೇ ಜಗತ್ತೆ ನಡೆಯುವುದಿಲ್ಲ ಎಂಬಾಂತಾಗಿದೆ. ಕೃತಕ ಬುದ್ಧಿಮತ್ತೆ (ಎಐ) ಬಗ್ಗೆ ನಾವೆಲ್ಲ ಈಗ ಮಾತನಾಡುತ್ತಿದ್ದೇವೆ. ಕಂಪ್ಯೂಟರ್ ಆರಂಭದಿಂದಲೂ ಎಐ ಇದೆ. ಎಐ ತಂತ್ರಾಂಶವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲಾಗಿದೆ. ಯುವ ಪೀಳಿಗೆ ಆಧುನಿಕ ಜಗತ್ತಿನ ಜೊತೆಯಲ್ಲಿ ಜೀವನ ನಡೆಸಬೇಕಿದೆ. ವಿಜ್ಞಾನದ ಬಗ್ಗೆ ಹೆಚ್ಚಿನ ಜ್ಞಾನ ಪಡೆದುಕೊಳ್ಳಬೇಕು ಎಂದು ಹೇಳಿದರು.

    ಇಡೀ ವಿಶ್ವದಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಪೊಲೀಸ್ ಪೇದೆಯು ಸೈಬರ್ ತಂತ್ರಜ್ಞಾನದ ಬಗ್ಗೆ ತಿಳಿದುಕೊಳ್ಳಬೇಕಿದೆ. ಇಲ್ಲವಾದರೆ ಅಪರಾಧಿಗಳನ್ನು ಪತ್ತೆಹಚ್ಚಲು ಸಾಧ್ಯವಾಗುವುದಿಲ್ಲ. ಹೀಗಾಗಿ ಪೇದೆಗಳಿಗೆ ಸೈಬರ್ ತಂತ್ರಜ್ಞಾನದ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಸಮಾಜದಲ್ಲಿ ಪ್ರತಿಯೊಬ್ಬರು ಸಹ ಎಐ, ಕಂಪ್ಯೂಟರ್ ಜ್ಞಾನ ಹೊಂದವುದು ಆಧುನಿಕ ಜಗತ್ತಿನ ಆದ್ಯತೆಯಾಗಿದೆ ಎಂದು ಅಭಿಪ್ರಾಯಪಟ್ಟರು.

    ಅಭಿವೃದ್ಧಿ ಪರಿಶೀಲನೆ:

    ಉಸ್ತುವಾರಿ ಸಚಿವರಾದ ಪರಮೇಶ್ವರ ಅವರು ಬಿದರಕಟ್ಟೆಯಲ್ಲಿರುವ ಜ್ಞಾನಸಿರಿ ಕ್ಯಾಂಪಸ್ನಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

    ಈ ಸಂದರ್ಭದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು, ಶಾಸಕರಾದ ಬಿ.ಸುರೇಶ್ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು,
    ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಅಧ್ಯಕ್ಷರಾದ ಪ್ರೊ. ಎಂ.ವೆಂಕಟೇಶ್ವರಲು, ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ನಾಹಿದಾ ಜಮ್ ಜಮ್ ಅವರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರವಾದ ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ವಿಶೇಷ ಪೂಜೆ, ಧಾರ್ಮಿಕ…

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.