nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    • ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ
    • 100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ
    • ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಖ್ಯಮಂತ್ರಿಗಳಿಂದ ಬರ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆ
    ತುಮಕೂರು May 23, 2024

    ಮುಖ್ಯಮಂತ್ರಿಗಳಿಂದ ಬರ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆ

    By adminMay 23, 2024No Comments3 Mins Read
    dc meeting
    • ಜಿಲ್ಲೆಯ ಬರ ನಿರ್ವಹಣೆ, ಪೂರ್ವ ಮುಂಗಾರು ಪರಿಸ್ಥಿತಿ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    ತುಮಕೂರು:  ರಾಜ್ಯದಲ್ಲಿನ ಬರಪರಿಸ್ಥಿತಿ, ಪೂರ್ವ–ಮುಂಗಾರು ಮತ್ತು ಮುಂಗಾರು ಋತುಮಾನ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೇಸ್ವಾನ್ ಮೂಲಕ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭಾಗವಹಿಸಿ ಜಿಲ್ಲೆಯ ಬರಪರಿಸ್ಥಿತಿ, ಮುಂಗಾರು ಋತುಮಾನ ಪರಿಸ್ಥಿತಿ ಹಾಗೂ ಮಳೆಯಿಂದ ಉಂಟಾದ ಹಾನಿ ಬಗ್ಗೆ ಮಾಹಿತಿ ನೀಡಿದರು.

    ರಾಜ್ಯದಲ್ಲಿಯೇ ಅತಿ ಹೆಚ್ಚು 20 ಮೇವಿನ ಬ್ಯಾಂಕ್‌ ಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದ್ದು, ಬರ ಸಮರ್ಪಕ ನಿರ್ವಹಣೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರಲ್ಲದೆ, ಜಿಲ್ಲೆಯಲ್ಲಿ ಮೇ, 2024ರ  ಮಾಹೆಯಲ್ಲಿ , ಮೇ 21 ದಿನಾಂಕ ವರೆಗೂ  94 ಮಿ.ಮೀ. ವಾಡಿಕೆ ರೀತ್ಯಾ ಮಳೆಯಾಗಬೇಕಿದ್ದು, 150.9 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ, ಜಿಲ್ಲೆಯಲ್ಲಿ ಸಾಕಷ್ಟು ಬೀಜ, ರಸಗೊಬ್ಬರ, ಕೀಟನಾಶಕಗಳ ಸಂಗ್ರಹ ಇದ್ದು,    ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ  ವಿತರಣೆಗಾಗಿ 50 ರೈತ ಸಂಪರ್ಕ ಕೇಂದ್ರಗಳಿದ್ದು, ಪ್ರಸ್ತುತ ವರ್ಷ ಹೆಚ್ಚುವರಿಯಾಗಿ 11 ಬೀಜ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸರಬರಾಜು ಸಂಸ್ಥೆಗಳಲ್ಲಿ 52,000 ಕ್ವಿಂಟಾಲ್ ಬಿತ್ತನೆ ಬೀಜಗಳ ಸಂಗ್ರಹವಿದ್ದು, ಇಲ್ಲಿಯವರೆಗೂ 284 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು  ರೈತರಿಗೆ ವಿತರಿಸಲಾಗಿದೆ, ಆಧಾರ್ ಸೀಡಿಂಗ್ ಮತ್ತಿತರ ಸಮಸ್ಯೆ ಕಾರಣ ಕೆಲವು ರೈತರಿಗೆ ಬರ ಪರಿಹಾರ ವಿತರಣೆ ಬಾಕಿ ಇತ್ತು. ಇದರಲ್ಲಿ ಬಹುತೇಕ ಸಮಸ್ಯೆ ಬಗೆಹರಿಸಿ ಎಲ್ಲಾ ಅರ್ಹ ರೈತರಿಗೆ ಪರಿಹಾರ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

    ಮುಂಗಾರು ಪೂರ್ವ ಮಳೆ ಎಲ್ಲೆಡೆ ಉತ್ತಮವಾಗಿದೆ. ಹೀಗಾಗಿ ಬಿತ್ತನೆ ಕಾರ್ಯ ಚುರುಕಾಗಬೇಕು.  ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತಿಯಿಂದ ಸಡಿಲಿಕೆ ನೀಡಿರುವುದರಿಂದ ಅಭಿವೃದ್ಧಿ ಕೆಲಸದ ಕಡೆ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ಬಿತ್ತನೆ ಬೀಜಕ್ಕೆ ಜನ ಹೆಚ್ಚು ಸಮಯ ಕ್ಯೂ ನಿಲ್ಲುವುದು ತಪ್ಪಿಸಿ,  ರೈತರಿಂದ ದೂರು ಬಾರದಂತೆ  ಬೇಡಿಕೆಯನುಗುಣವಾಗಿ ಬೀಜ, ರಸಗೊಬ್ಬರ, ಕೀಟನಾಶಕ ಸರಿಯಾಗಿ ಪೂರೈಸಿ, ಎಲ್ಲಿಯೂ ಕೊರತೆಯಾಗದಂತೆ  ಕ್ರಮ ವಹಿಸುವಂತೆ   ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚಿಸಿದರು.

    ಕುಡಿಯುವ ನೀರಿನ ಶುದ್ಧತೆ ಪರೀಕ್ಷಿಸಿ:

    ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಮಳೆಯ ನೀರು ಶುದ್ಧ ಕುಡಿಯುವ ನೀರಿನೊಂದಿಗೆ ಮಿಶ್ರಣಗೊಳ್ಳುವ ಸಾಧ್ಯತೆಯಿದ್ದು, ಕುಡಿಯುವ ನೀರಿನ ಮೂಲಗಳು ಕಲುಷಿತಗೊಂಡಲ್ಲಿ ಆ ನೀರನ್ನು ಸೇವಿಸುವ ಜನರು ರೋಗಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವ್ಯಾಪ್ತಿಯಲ್ಲಿರುವ 11,150  ಜಲಮೂಲಗಳು ಸೇರಿದಂತೆ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಎಲ್ಲಾ ಜಲಮೂಲಗಳ ಶುದ್ಧತೆಯನ್ನು ಪರೀಕ್ಷಿಸಿ ನೀರು ಕುಡಿಯಲು ಯೋಗ್ಯವಿದೆಯೇ ಎಂಬುದನ್ನು ಖಚಿತಪಡಿಸಿಕೊಂಡು ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರನ್ನು ಪೂರೈಸುವಂತೆ  ಸಂಬಂಧಿಸಿದವರಿಗೆ ಸೂಚಿಸಿದರು. ಆರೋಗ್ಯ ಇಲಾಖೆಯು ಈಗಿನಿಂದಲೆ ಪೂರ್ವ ಸಿದ್ದತೆ ಮಾಡಿಕೊಂಡು, ಎಲ್ಲಿಯೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಬೇಕೆಂದು ನಿರ್ದೇಶನ ನೀಡಿದರು.

     ರೈತರು ಆತಂಕ ಪಡುವ ಅಗತ್ಯವಿಲ್ಲ:

    ಜಿಲ್ಲೆಯಲ್ಲಿ 52,217 ಕ್ವಿಂಟಾಲ್ ಬಿತ್ತನೆ ಬೀಜವು ಸರಬರಾಜು ಸಂಸ್ಥೆಗಳಲ್ಲಿ ಸಂಗ್ರಹವಿದ್ದು,   50,363 ಮೆ.ಟನ್ ರಸಗೊಬ್ಬರದ ಸಂಗ್ರಹವಿದೆ. ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ರೈತರಿಗೆ ತ್ವರಿತವಾಗಿ  ಬಿತ್ತನೆ ಬೀಜ ಮತ್ತು ರಸಗೋಬ್ಬರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಹಾಗೂ ರೈತರಿಗೆ ಅಗತ್ಯವಿದ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಜುಲೈ–2024 ಅಂತ್ಯದವರೆಗೂ ವಿತರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ರೈತರು ಆತಂಕಕ್ಕೊಳಗಾಗದೆ ತಮಗೆ ಅಗತ್ಯವಿರುವಷ್ಟು ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

    ಸಚಿವರ ಮೆಚ್ಚುಗೆ :

    ರಾಜ್ಯದಲ್ಲಿ 2,312 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಈ ಬಾರಿ ಕಂಡು ಬಂದಿದ್ದು, ಅದರಲ್ಲಿ 1,700 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ, 500 ಗ್ರಾಮಗಳಿಗೆ ಟ್ಯಾಂಕರ್‌ ಗಳ ಮೂಲಕ, ಉಳಿದ ಗ್ರಾಮಗಳಲ್ಲಿ ಹಳೆಯ ಕೊಳವೆ ಬಾವಿ ನವೀಕರಣ ಹಾಗೂ ಹೊಸ ಕೊಳವೆ ಬಾವಿ ಕೊರೆಸುವ ಮೂಲಕ ಸಮರ್ಪಕವಾಗಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗಿದೆ.  ರಾಜ್ಯಾದ್ಯಂತ ಅಗತ್ಯವಿರುವ ಕಡೆ ಮೇವಿನ ಬ್ಯಾಂಕ್‌ಗಳನ್ನು ಸ್ಥಾಪಿಸಿ ರೈತರ ಕಷ್ಟಕ್ಕೆ ಸ್ಪಂದಿಸಲಾಗಿದೆ. ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಈ ಬಾರಿ ಪ್ರಾರಂಭದಲ್ಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

    ವಿಡಿಯೋ ಸಂವಾದದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ,  ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಯೋಜನೆ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳೊಂದಿಗೆ ಭಾಗಿಯಾಗಿದ್ದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ. ಕರಾಳೆ, ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಉಪವಿಭಾಗಾಧಿಕಾರಿಗಳಾದ ಸಪ್ತಶ್ರೀ, ಗೌರವ ಕುಮಾರ್ ಶೆಟ್ಟಿ, ಗೋಟೂರು ಶಿವಪ್ಪ, ಕೃಷಿ ಇಲಾಖೆ ಜಂಟಿನಿರ್ದೇಶಕ ರಮೇಶ್ ಎನ್.,  ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ, ಸೇರಿದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ಬೀದರ್: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ದ ನೂತನ ಅಧ್ಯಕ್ಷರಾಗಿ ವಿನೋದ ಅಪ್ಪೆ ಅವರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿ…

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.