nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ

    November 7, 2025

    ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

    November 7, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
    • ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ
    • ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ
    • ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ
    • ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
    • ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !
    • ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ
    • ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೋಹಿತ್ ಚಕ್ರತೀರ್ಥ ಆರ್‌ ಎಸ್‌ ಎಸ್‌ ಗಂಜಿ ಗಿರಾಕಿ : ರಾಮಲಿಂಗಾರೆಡ್ಡಿ
    ರಾಜ್ಯ ಸುದ್ದಿ June 12, 2022

    ರೋಹಿತ್ ಚಕ್ರತೀರ್ಥ ಆರ್‌ ಎಸ್‌ ಎಸ್‌ ಗಂಜಿ ಗಿರಾಕಿ : ರಾಮಲಿಂಗಾರೆಡ್ಡಿ

    By adminJune 12, 2022No Comments2 Mins Read
    ramalinga reddy

    ಗಂಜಿ ಗಿರಾಕಿ ರೋಹಿತ್ ಚಕ್ರತೀರ್ಥ ಆರ್‌ಎಸ್‌ಎಸ್‌ ಗಂಜಿ ಕೇಂದ್ರದಿಂದ ಬಂದವರು. ಸತ್ಯವಲ್ಲದ ವಿಷಯಗಳನ್ನು ಪಠ್ಯದಲ್ಲಿ ಸೇರಿಸಿ ನಾಡಿನ ಚೇತನಗಳಿಗೆ ಅವಮಾನ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಚಿವರಾದ ನಾಗೇಶ್ ಅವರು ಹೆಸರಿಗೆ ಅಷ್ಟೇ ಮಂತ್ರಿಯಾಗಿದ್ದಾರೆ. ಅವರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಇವರೆಲ್ಲ ಗೊಂಬೆಗಳಿದ್ದಂತೆ. ಆರ್‍ಎಸ್‍ಎಸ್ ಕೀ ಕೊಟ್ಟಂತೆ ಗೊಂಬೆಗಳು ತಿರುಗುತ್ತದೆ ಎಂದು ವ್ಯಂಗ್ಯವಾಡಿದರು.
    ಸಂವಿಧಾನ ಶಿಲ್ಪಿ ಅಂಬೇಡ್ಕರ್, ನಾರಾಯಣಗುರು ಅವರ ಪಠ್ಯಗಳನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರ ಪಾಠವನ್ನು ತಿರುಚಲಾಗಿದೆ. ಅಂಬೇಡ್ಕರ್ ಮತ್ತು ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದು ಹೇಳಿದರು.


    Provided by
    Provided by

    ಚನ್ನಣ್ಣ ವಾಲಿಕಾರ್ ಅವರು ಬರೆದ 6ನೇ ತರಗತಿಯಲ್ಲಿದ್ದ ಅಂಬೇಡ್ಕರ್ ಪಾಠವನ್ನು ಕೈಬಿಟ್ಟಿದ್ದಾರೆ. 9ನೇ ತರಗತಿಯ ಸಂವಿಧಾನದ ಪಾಠ ತಿರುಚಿ ಅಲ್ಲದೆ ಸಂವಿಧಾನ ಶಿಲ್ಪಿ ಎಂಬ ಪದವನ್ನೇ ತೆಗೆದು ಹಾಕಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ, ಗೊಂದಲ ಮೂಡಿಸಿದ್ದು, ಪರಿಷ್ಕರಣೆ ನೆಪದಲ್ಲಿ ಮಕ್ಕಳ ಭವಿಷ್ಯದ ಮೇಲೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಇದು ಆರ್‍ಎಸ್‍ಎಸ್ ಹಿಡನ್ ಅಜೆಂಡಾ. ಪರಿಷ್ಕರಣೆ ನೆಪದಲ್ಲಿ ಹಿಡನ್ ಅಜೆಂಡಾ ಜಾರಿಗೆ ತಂದಿದ್ದಾರೆ.

    ಪರಿಷ್ಕರಣಾ ಸಮಿತಿಯಲ್ಲಿ ತಜ್ಞರು ಇರುತ್ತಿದ್ದರು. ಆದರೆ ರೋಹಿತ್ ಚಕ್ರತೀರ್ಥ ಅವರಿಗೆ ಅಗತ್ಯ ವಿದ್ಯಾರ್ಹತೆಯೇ ಇಲ್ಲ. ಅವರು ಆರ್‍ಎಸ್‍ಎಸ್‍ನಿಂದ ಬಂದವರು ಎಂದು ಹೇಳಿದರು. 10ನೇ ತರಗತಿಯ ಅಂಬೇಡ್ಕರ್ ಪಾಠ ತಿರುಚಲಾಗಿದೆ. ಬುದ್ದ, ಬಸವ, ಅಂಬೇಡ್ಕರ್ ಎಲ್ಲ ಪಾಠಗಳನ್ನು ಸರ್ಕಾರ ಕೈಬಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಬಸವಣ್ಣನ ಬಗ್ಗೆ ತಪ್ಪು ಅಭಿಪ್ರಾಯ ಮೂಡುವಂತಹ ಕೆಲಸ ಮಾಡಿರುವುದಲ್ಲದೆ, ಕುವೆಂಪು ಅವರನ್ನು ಅವಮಾನ ಮಾಡಿದ್ದಾರೆ. ಬ್ರಹ್ಮ ಸಮಾಜ, ಆರ್ಯ ಸಮಾಜ, ಪೆರಿಯಾರ್, ಸಾವಿತ್ರಿಬಾಯಿ ಫುಲೆ ಪಠ್ಯಗಳನ್ನು ತೆಗೆದು ಹಾಕಿದ್ದಾರೆ ಎಂದು ಹೇಳಿದರು. ರೋಹಿತ್ ಚಕ್ರತೀರ್ಥ ವಿಕೃತ ಮನುಷ್ಯ. ನಾಡಧ್ವಜಕ್ಕೂ ಅವಮಾನ ಮಾಡಿದ್ದಲ್ಲದೆ ಹಿಂದಿ ಹೇರಿಕೆಯನ್ನು ಸಮರ್ಥಿಸಿಕೊಂಡಿದ್ದರು. ಇಂಥವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದು ತಪ್ಪು. ಇವರನ್ನು ಕೂಡಲೇ ಬಂಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.

    ಪಠ್ಯ ಪರಿಷ್ಕರಣೆ ಬಗ್ಗೆ ಎಲ್ಲರೂ ವಿರೋಧ ವ್ಯಕ್ತಪಡಿಸಿದರು. ಸರ್ಕಾರ ಕ್ರಮ ಜರುಗಿಸಿಲ್ಲ.ಅಕಾರದ ಮುಂದೆ ಎಲ್ಲವೂ ಗೌಣವಾಗಿದೆ. ಬಸವಣ್ಣನವರಿಗೆ ಅನ್ಯಾಯವಾಗಿದ್ದರೂ ಬೊಮ್ಮಾಯಿ ಅವರು ಚಕಾರ ಎತ್ತಿಲ್ಲ. ಕುವೆಂಪು ಅವರಿಗೆ ಅಪಮಾನ ಮಾಡಿದರೂ ಒಕ್ಕಲಿಗ ಸಮುದಾಯದ ಸಚಿವರಾದ ಆರ್. ಅಶೋಕ್, ಅಶ್ವಥ್ ನಾರಾಯಣ್, ಸೋಮಶೇಖರ್ ಮೌನವಹಿಸಿದ್ದಾರೆ.

    ಅಂಬೇಡ್ಕರ್ ಬಗ್ಗೆ ತಿರುಚಿ ಬರೆದರೂ ಸಚಿವರಾದ ಗೋವಿಂದ ಕಾರಜೋಳ, ನಾರಾಯಣಸ್ವಾಮಿ ಅವರುಗಳಾಗಲಿ ಏನೂ ಮಾತನಾಡದೆ ಮೌನಕ್ಕೆ ಶರಣಾಗಿದ್ದಾರೆ. ಅಂಬೇಡ್ಕರ್ ಹೆಸರೇಳಿ ಶಾಸಕರಾದ ಮಹೇಶ್ ಕೂಡ ಸಾರ್ವಕರ್ ಗುಣಗಾನ ಮಾಡುತ್ತಿದ್ದಾರೆ ಎಂದು ದಲಿತ ಒಕ್ಕಲಿಗ ಲಿಂಗಾಯಿತ ಸಚಿವರ ಬಗ್ಗೆ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

    ಗಣ್ಯರಾಜ್ಯೋತ್ಸವದಲ್ಲಿ ನಾರಾಯಣಗುರುಗಳ ಸ್ತಬ್ಯಚಿತ್ರ ತೆಗೆಯಲಾಗಿತ್ತು. ಈಗ ಅವರ ಪಾಠವನ್ನು ತೆಗೆದು ಹಾಕಿದರು. ಅವರದೇ ಸಮುದಾಯದ ಮುಖಂಡರಾದ ಸುನೀಲ್‍ಕುಮಾರ್ ಚಕಾರವೆತ್ತಿಲ್ಲ. ಇಷ್ಟೆಲ್ಲ ಅನ್ಯಾಯವಾದರೂ ಅಕಾರಕ್ಕೆ ಅಂಟಿಕೊಂಡು ಕುಳಿತಿದ್ದಾರೆ ಎಂದು ಹೇಳಿದರು.
    ಕೆಂಪೇಗೌಡರನ್ನು ಕಡೆಗಣಿಸಿ ಜಮ್ಮುಕಾಶ್ಮೀರದ ರಾಜನನ್ನು ತಂದಿದ್ದಾರೆ. ಕೆಂಪೇಗೌಡರಿಗೆ ಅನ್ಯಾಯವಾಗಿದ್ದರೂ ಮಂತ್ರಿಗಳು ಮಾತನಾಡುತ್ತಿಲ್ಲ.
    ಸ್ವಾತಂತ್ರ್ಯ ಚಳವಳಿಯಲ್ಲಿ ಇವರ್ಯಾರು ಭಾಗವಹಿಸಿ ರಲಿಲ್ಲ. ಹೆಗ್ಡೇವಾರ್ ಬ್ರಿಟಿಷರ ಸೈನ್ಯಕ್ಕೆ ಸೇರಿಸಿ ಅವರ ಸೈನ್ಯವನ್ನು ಬಲಗೊಳಿಸಿದವರು. ಇವರಿಗೆ ಟೀಕೆ ಮಾಡುವ ಯಾವುದೇ ನೈತಿಕತೆ ಇಲ್ಲ ಎಂದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್

    November 7, 2025

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ತುಮಕೂರು: ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು…

    ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ

    November 7, 2025

    ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

    November 7, 2025

    ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ

    November 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.