ಬೆಳಗಾವಿ: ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಪತಿಯ ಮನೆಯ ಮೇಲೆ RSS ದಾಳಿ ನಡೆಸಿದೆ ಎಂದು ಸುಳ್ಳು ವದಂತಿ ಹರಡಿದ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಅನೀಸ್ ಉದ್ದೀನ್ ಮೇಲೆ ಬೆಳಗಾವಿ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಅವರ ಸೂಚನೆ ಮೇರೆಗೆ ಬಿಎನ್ಎಸ್ ಕಾಯ್ದೆಯಡಿ 353(2), 192 ಸೆಕ್ಷನ್ ಅಡಿಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ್ ಗುಳೇದ, ಎಕ್ಸ್ ಖಾತೆಯಲ್ಲಿ ಕರ್ನಲ್ ಸೋಫಿಯಾ ಪತಿ ಮನೆಯ ಮೇಲೆ ಆ ರ್ಎಸ್ ಎಸ್ ಬೆಂಬಲಿತ ಹಿಂದೂಗಳು ದಾಳಿ ಮಾಡಿ, ಮನೆ ದ್ವಂಸ ಮಾಡಿದ್ದಾರೆ ಎಂದು ಸುಳ್ಳು ಪೋಸ್ಟ್ ಹಾಕಲಾಗಿತ್ತು. ಅನೀಸ್ ಉದ್ದಿನ್ ಎಂಬಾತ ಎಕ್ಸ್ ಖಾತೆಯಲ್ಲಿ ಸುಳ್ಳು ಸುದ್ದಿ ಹಾಕಿಕೊಂಡಿದ್ದ ಎಂದು ಹೇಳಿದ್ದರು.
ಪೋಸ್ಟ್ ನಲ್ಲಿ ಯಾವುದೋ ಹಳೆಯ ಫೋಟೋವನ್ನು ಹಂಚಿಕೊಳ್ಳಲಾಗಿತ್ತು. ವಿಚಾರವಾಗಿ ಜಿಲ್ಲಾ ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಟೀಂ ನಮ್ಮ ಗಮನಕ್ಕೆ ತಂದಿತ್ತು. ನಾನು ಅದಕ್ಕೆ ಇದು ಸುಳ್ಳು ಸುದ್ದಿ ಎಂದು ಕಾಮೆಂಟ್ ಮಾಡಿ, ತಕ್ಷಣವೇ ಪೋಸ್ಟ್ ಡಿಲೀಟ್ ಮಾಡುವಂತೆ ಸೂಚಿಸಿದ್ದೆ. ಅಲ್ಲದೇ ಸೋಫಿಯಾ ಖುರೇಷಿ ಅವರ ಪತಿ ಮನೆಗೆ ನಮ್ಮ ಪೊಲೀಸರನ್ನು ಕಳಿಸಿದ್ದೆವು, ಯಾವುದೇ ದಾಳಿ ನಡೆದಿಲ್ಲ ಎನ್ನುವುದು ಗೊತ್ತಾಗಿದೆ ಎಂದರು.
ಪೋಸ್ಟ್ ಮಾಡಿದ ವ್ಯಕ್ತಿ ಕೊಲಂಬಿಯಾ ಮೂಲದವನು ಎಂದು ಗೊತ್ತಾಗಿದೆ. ಹೊರದೇಶದವನು ಎಂದು ಗೊತ್ತಾಗಿದ್ದಕ್ಕೆ ಎಫ್ ಐಆರ್ ಮಾಡಿಕೊಂಡಿಲ್ಲ. ಸದ್ಯ ಎಕ್ಸ್ ಲೀಗಲ್ ಟೀಂನಿಂದ ಮಾಹಿತಿ ಪಡೆಯುತ್ತಿದ್ದೇವೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW