nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರ್ ಟಿ ಐ ಅಡಿಯಲ್ಲಿ ಮಾಹಿತಿ ನೀಡಲು ಅಧಿಕಾರಿಗಳು ಹಿಂದೇಟು: ಪಿಯು ಇಲಾಖಾ  ಮಂಡಳಿ ವಿರುದ್ಧ ಆರೋಪ
    ತುಮಕೂರು February 25, 2022

    ಆರ್ ಟಿ ಐ ಅಡಿಯಲ್ಲಿ ಮಾಹಿತಿ ನೀಡಲು ಅಧಿಕಾರಿಗಳು ಹಿಂದೇಟು: ಪಿಯು ಇಲಾಖಾ  ಮಂಡಳಿ ವಿರುದ್ಧ ಆರೋಪ

    By adminFebruary 25, 2022No Comments2 Mins Read
    dasappa

    ತುಮಕೂರು: ಕಲ್ಪತರು ನಾಡು ತುಮಕೂರು ನಗರದಲ್ಲಿ ಸಾಕಷ್ಟು ಕಾಲೇಜುಗಳು ಮೂಲಭೂತ ಸೌಕರ್ಯಗಳು ಇದ್ದು ಅಧಿಕೃತವಾಗಿ  ನಡೆಯುತ್ತವೆ ಇನ್ನು ಕೆಲವು ಶಿಕ್ಷಣ ಸಂಸ್ಥೆಗಳು ಮೂಲಭೂತ ಸೌಕರ್ಯಗಳು ಇಲ್ಲದೆ ಇದ್ದರೂ ಅನಧಿಕೃತವಾಗಿ ಕೆಲ ಶಿಕ್ಷಣ ಸಂಸ್ಥೆಗಳು ಶಿಕ್ಷಣ ನೀಡುವಲ್ಲಿ ನಿರತರಾಗಿದ್ದಾರೆ.  ಈ ಬಗ್ಗೆ ಪಿಯು ಇಲಾಖಾ  ಮಂಡಳಿ ಮಾಹಿತಿ ನೀಡಲು ಹಿಂದೇಟು ಹಾಕುತ್ತಿದೆ ಎಂದು ಬೆಳಗುಂಬ ಟಿ.ದಾಸಪ್ಪ ಎಂಬುವವರು ಆರೋಪ ಮಾಡಿದ್ದಾರೆ.

    ಆರ್. ಟಿ ಐ ಅಡಿಯಲ್ಲಿ ತುಮಕೂರು ನಗರದ ಕೆಲ ಕಾಲೇಜುಗಳ ಮಾಹಿತಿಯನ್ನು ದಾಸಪ್ಪ ಎಂಬುವರು ಪಿಯು ಶಿಕ್ಷಣ ಇಲಾಖೆಯಿಂದ ಪಡೆಯಲು ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪಿಯು ಉಪನಿರ್ದೇಶಕರು ಮಾಹಿತಿ ನೀಡಲು ಹಿಂದೇಟು ಹಾಕುತ್ತಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಡುತ್ತದೆ ಎಂದು ಆರೋಪಿಸಿದ್ದಾರೆ.

    ಇನ್ನು ಕೆಲ ಖಾಸಗಿ ಕಾಲೇಜುಗಳು ಇಲಾಖೆಗಳ ಗಮನಕ್ಕೆ ತಾರದೆ ಸರ್ಕಾರಿ ಆದೇಶಗಳನ್ನು ಗಾಳಿಗೆ ತೂರಿ ಯಾವುದೇ ಮಾಹಿತಿ ನೀಡದೆ ಸ್ಥಳಾಂತರಗೊಂಡಿದ್ದು , ಇದಕ್ಕೆ ಸಂಬಂಧಿಸಿದಂತೆ ಆರ್ ಟಿ ಐ ಅಡಿಯಲ್ಲಿ  2019ರಿಂದ ಇಲ್ಲಿಯವರೆಗೂ ಸತತ ಹೋರಾಟ ಮಾಡಿ ಆಯೋಗದ ಮೊರೆಹೋದರು ಸಹ ಆಯೋಗಕ್ಕೆ ತಪ್ಪು ಮಾಹಿತಿ ನೀಡಿ ಇರುವರೆಗೂ ಅರ್ಜಿದಾರರಿಗೆ  ಪಿಯು ಉಪ ನಿರ್ದೇಶಕರು ಮಾಹಿತಿ ನೀಡುವಲ್ಲಿ ಸಾಕಷ್ಟು ಹಿಂದೇಟು ಹಾಕುತ್ತಿದ್ದು , ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ನಡೆ ಸಾಕಷ್ಟು ಅನುಮಾನ ಮೂಡಿಸಿದೆ ಎಂದರು.

    ಸರ್ಕಾರದ ಮಾರ್ಗಸೂಚಿ ಅನ್ವಯ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ತುಮಕೂರಿನ ವಿದ್ಯಾನಗರದ ಖಾಸಗಿ ಪಿಯು ಕಾಲೇಜು ಸರ್ಕಾರದ ಮಾರ್ಗಸೂಚಿಯ ವಿರುದ್ಧವಾಗಿ ಸ್ಥಳಾಂತರಗೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ದಾಸಪ್ಪ ಎಂಬುವರು ಪಿಯು ಶಿಕ್ಷಣ ಇಲಾಖೆಗೆ ಮಾಹಿತಿ ಪಡೆಯಲು ಮುಂದಾಗಿದ್ದರು ಆದರೆ ಇದುವರೆಗೂ ಅಧಿಕಾರಿಗಳು ಮಾಹಿತಿ ನೀಡದೆ ಅರ್ಜಿದಾರರನ್ನು ಕಚೇರಿಗೆ ಬರಲು ತಿಳಿಸಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ . ಅರ್ಜಿದಾರರನ್ನು ದಿಕ್ಕುತಪ್ಪಿಸುವ ದೊಡ್ಡ ಹುನ್ನಾರವನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ.

    ಇನ್ನು ಮಾಹಿತಿ ನೀಡುವಲ್ಲಿ ಅಧಿಕಾರಿಗಳ ಈ ದ್ವಂದ್ವ ನೀತಿ, ಮಾಹಿತಿ ನೀಡುವಲ್ಲಿ ವಿಳಂಬ ನಿಲುವು ಇಲಾಖೆಯ ಪೂರ್ವಾನುಮತಿ ಇಲ್ಲದೆ ಸ್ಥಳಾಂತರ ಆಗಿದ್ದು ಇದಕ್ಕೆ ಸಂಬಂಧಿಸಿದಂತೆ ಇದುವರೆಗೂ ಅಧಿಕೃತ ಇಲಾಖೆ ಅಧಿಕಾರಿಗಳೇ ಮಾಹಿತಿ ನೀಡುವಲ್ಲಿ ಹಿಂಜರಿದರೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಪಾಡೇನು ಎಂದು ಪ್ರಶ್ನಿಸಿದ್ದಾರೆ.

    ತುಮಕೂರು ನಗರದಲ್ಲಿ  ಅನಧಿಕೃತವಾಗಿ ಕೆಲ ಪಿಯು ಕಾಲೇಜುಗಳು ನೋಂದಣಿಯಾದ ಸಮಯದಲ್ಲಿ ಇದ್ದ ಆಡಳಿತ ಮಂಡಳಿಯನ್ನು ಹೊರತುಪಡಿಸಿ ಖಾಸಗಿ ವ್ಯಕ್ತಿಗಳ ಮೂಲಕ ಸಾಕಷ್ಟು ಕಾಲೇಜುಗಳು ತುಮಕೂರು ನಗರದಲ್ಲಿ ಶಿಕ್ಷಣ ನೀಡುವಲ್ಲಿ ನಿರತರಾಗಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಪೋಷಕರು ಹಾಗೂ ವಿದ್ಯಾರ್ಥಿಗಳು ಎಚ್ಚರ ದಿಂದಿರಬೇಕು ಎಂದರು.

    ಇದಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳು ಜಾಗೃತಿ ವಹಿಸಬೇಕು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸರಿಯಾದ ಮಾಹಿತಿ ನೀಡಬೇಕು. ಇಂದಿನ ದಿನದಲ್ಲಿ ಸಾಕಷ್ಟು ಪೋಷಕರು ಕಷ್ಟಪಟ್ಟು ತಮ್ಮ ಮಕ್ಕಳ ವಿದ್ಯಾಭ್ಯಾಸವನ್ನು ಮಾಡಿಸುತ್ತಿದ್ದ ಇಂತಹ ಸಂದರ್ಭದಲ್ಲಿ ಇಂತಹ ಅನಧಿಕೃತ ಕಾಲೇಜುಗಳ ಬಗ್ಗೆ ಎಲ್ಲರೂ ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.

    ವರದಿ : ಮಾರುತಿ ಪ್ರಸಾದ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ…

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.