ಸರಗೂರು: ಗ್ರಾಮ ಸಭೆಗೆ ಪ್ರಮುಖ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸರಗೂರು ತಾಲ್ಲೂಕಿನ ಹಾದನೂರಿನಲ್ಲಿ ನಡೆದಿದೆ.
ಸಭೆಗೆ ಕೆಲವೇ ಕೆಲವು ಅಧಿಕಾರಿಗಳು ಆಗಮಿಸಿದ್ದು, ಈ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಗ್ರಾಮಸ್ಥರು, ಎಲ್ಲಅಧಿಕಾರಿಗಳೂ ಕೂಡ ಗ್ರಾಮ ಸಭೆಗೆ ಆಗಮಿಸಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕಿನ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಕ ಅಧಿಕಾರಿಗಳು ಸಭೆಗೆ ಬರಬೇಕು, ನಮ್ಮ ಸಮಸ್ಯೆಗಳನ್ನು ಅವರಿಗೆ ತಿಳಿಸಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಹಾದನೂರು ಅತೀ ಹೆಚ್ಚು ದಲಿತರೇ ಇರುವ ಗ್ರಾಮವಾಗಿದ್ದು, ಈ ಗ್ರಾಮವನ್ನು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ನಿರ್ಲಕ್ಷಿಸುತ್ತಿದ್ದಾರೆ. ಗ್ರಾಮಸಭೆಯನ್ನು ಕಾಟಾಚಾರಕ್ಕೆ ನಡೆಸುತ್ತಿದ್ದು, ಸಭೆಗೆ ಮುಖ್ಯ ಅಧಿಕಾರಿಗಳೇ ಆಗಮಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB