nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ನಮ್ಮ ಊರು ನಮ್ಮ ಕೆರೆ’ ಕಾರ್ಯಕ್ರಮದಡಿ ನ್ಯಾಯದಗುಂಟೆ ಗ್ರಾಮದಲ್ಲಿ ಕೆರೆಗೆ ಗುದ್ದಲಿ ಪೂಜೆ

    October 17, 2025

    ಹುಲಿಯನ್ನು ಇನ್ನೂ ಎರಡು ದಿನಗಳಲ್ಲಿ ಹಿಡಿಯಬೇಕು: ಅರಣ್ಯಾಧಿಕಾರಿಗಳಿಗೆ ರೈತರಿಂದ ಗಡುವು

    October 17, 2025

    ಶಿರಾ: ಮನೆಯ ಬೀಗ ಒಡೆದು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

    October 17, 2025
    Facebook Twitter Instagram
    ಟ್ರೆಂಡಿಂಗ್
    • ‘ನಮ್ಮ ಊರು ನಮ್ಮ ಕೆರೆ’ ಕಾರ್ಯಕ್ರಮದಡಿ ನ್ಯಾಯದಗುಂಟೆ ಗ್ರಾಮದಲ್ಲಿ ಕೆರೆಗೆ ಗುದ್ದಲಿ ಪೂಜೆ
    • ಹುಲಿಯನ್ನು ಇನ್ನೂ ಎರಡು ದಿನಗಳಲ್ಲಿ ಹಿಡಿಯಬೇಕು: ಅರಣ್ಯಾಧಿಕಾರಿಗಳಿಗೆ ರೈತರಿಂದ ಗಡುವು
    • ಶಿರಾ: ಮನೆಯ ಬೀಗ ಒಡೆದು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
    • ಶಿಕ್ಷಕ ರಾಜಗೋಪಾಲ ಅವರಿಗೆ ‘ಕರ್ನಾಟಕ ವಾಲ್ಮೀಕಿರತ್ನ ಪ್ರಶಸ್ತಿ – 2025’
    • ಆರೋಗ್ಯದ ಬಗ್ಗೆ ಅರಿವು ಅಗತ್ಯ: ಶಾಸಕ ಕೆ.ಷಡಕ್ಷರಿ
    • ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗದಿರುವುದು ದುರಾದೃಷ್ಟಕರ: ಶಾಸಕ ಎಸ್.ಆರ್. ಶ್ರೀನಿವಾಸ್‌
    • ಪಿಎಂ ಮುದ್ರಾ ಯೋಜನೆ ಹೆಸರಿನಲ್ಲಿ ರೈತನಿಗೆ 3 ಲಕ್ಷ ರೂ. ವಂಚನೆ!
    • ರೈತನ ಮೇಲೆ ಭೀಕರ ದಾಳಿ ನಡೆಸಿದ ಹುಲಿ: ಕಣ್ಣು, ಮುಖ ವಿರೂಪಗೊಂಡು ಗಂಭೀರ ಸ್ಥಿತಿಯಲ್ಲಿ ರೈತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home »  ಬಜೆಟ್ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಚರ್ಚೆ ನಡೆಸಲು ಸಿಎಂ ಒಪ್ಪಿಗೆ:  ರಾಜ್ಯ ಮಾದಿಗ ದಂಡೋರ  ಸಮಿತಿ
    ತುಮಕೂರು December 20, 2021

     ಬಜೆಟ್ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಚರ್ಚೆ ನಡೆಸಲು ಸಿಎಂ ಒಪ್ಪಿಗೆ:  ರಾಜ್ಯ ಮಾದಿಗ ದಂಡೋರ  ಸಮಿತಿ

    By adminDecember 20, 2021No Comments2 Mins Read
    sadashiva ayoga

    ತುಮಕೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಚರ್ಚೆಗೆ ತಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು, ರಾಜ್ಯ ಮಾದಿಗ ದಂಡೋರ  ಸಮಿತಿಯ ನಿಯೋಗವು ಬೆಳಗಾವಿಯ ಅಧಿವೇಶನದಲ್ಲಿ ಮನವಿ ಸಲ್ಲಿಸಿದ್ದು, ಈ ಸಂಬಂಧ  ಮಾದಿಗ ದಂಡೋರದ ರಾಜ್ಯ ಕಾರ್ಯದರ್ಶಿ ಬೇವಿನಹಳ್ಳಿ ಚನ್ನಬಸವಯ್ಯ ಅವರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಾಯಿತು.

    ಮುಖಂಡರಾದ ಚನ್ನಬಸವಯ್ಯ ಮಾತನಾಡಿ, ಮಾದಿಗ ದಂಡೋರದ ನಿಯೋಗವು ಸಚಿವರಾದ ಮಾಧುಸ್ವಾಮಿ ಹಾಗೂ ಸಮಾಜ ಕಲ್ಯಾಣ ಸಚಿವರ ಸಮ್ಮುಖದಲ್ಲಿ, ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಈ ವೇಳೆ ಮುಖ್ಯಮಂತ್ರಿಯವರು, ನಮ್ಮ ನಿಯೋಗವು ನೀಡಿದ ಮನವಿಯನ್ನು ಸ್ವೀಕರಿಸಿ, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ವಿಚಾರವನ್ನು ವಿಧಾನಸಭೆಯಲ್ಲಿ ಚರ್ಚಿಸಲು, ಸಂಬಂಧಿಸಿದ ಇಲಾಖೆ ಹಾಗೂ ಸಚಿವರು ಸಿದ್ಧತೆ ಮಾಡಿಕೊಳ್ಳಲು ಕನಿಷ್ಠ ಪಕ್ಷ ಹದಿನೈದು ದಿನಗಳ ಆವಶ್ಯಕತೆ ಇರುವುದರಿಂದ, ಈ ಬೆಳಗಾವಿಯ ಅಧಿವೇಶನದಲ್ಲಿ  ಚರ್ಚಿಸಲು ಸಾಧ್ಯವಿಲ್ಲ, ಆದರೆ ಮುಂದಿನ ಬಜೆಟ್ ಅಧಿವೇಶನದಲ್ಲಿ ಚರ್ಚಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದರು.


    Provided by
    Provided by
    Provided by

    ಸಿಎಂ ಭೇಟಿಗೆ ಜೆ.ಸಿ.ಮಾಧುಸ್ವಾಮಿ ಅವಕಾಶ ಮಾಡಿಕೊಟ್ಟಿದ್ದು, ಎಲ್ಲಾ ರೀತಿಯ ಸಹಕಾರ ನೀಡಿದರು ಎಂದು ತಿಳಿಸಿದ ಚನ್ನಬಸವಯ್ಯ, ಮುಂಬರುವ ಬಜೆಟ್ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿಯನ್ನು ವಿಧಾನ ಸಭೆಯಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ನಾವೆಲ್ಲರೂ ಒಂದಾಹೋರಾಡಬೇಕಿದೆ ಎಂದು ಅವರು ಇದೇ ವೇಳೆಯಲ್ಲಿ ಕರೆ ನೀಡಿದರು.

    ಚಿಕ್ಕನಾಯಕನಹಳ್ಳಿ ತಾಲ್ಲೂಕು ಮಾದಿಗ ದಂಡೋರ ಅಧ್ಯಕ್ಷ  ಜೆ.ಸಿ.ಪುರ ಗೋವಿಂದರಾಜು ಮಾತನಾಡಿ, ಸದಾಶಿವ ಆಯೋಗವು ಅವೈಜ್ಞಾನಿಕ ಎಂದು ದಾರಿತಪ್ಪಿಸುತ್ತಿರುವರು, ಸ್ಪೃಷ್ಯರಾಗಿದ್ದು, ಅಸ್ಪೃಶ್ಯರ ಮೀಸಲಾತಿಯನ್ನು ಕಬಳಿಸಿ, ನಿಜವಾದ ಅಸ್ಪೃಶ್ಯರ ಅವಕಾಶಗಳನ್ನು ಕಬಳಿಸುತ್ತಿದ್ದಾರೆ. ಇವರಿಗೆ ನೀಡಿರುವ ಮೀಸಲಾತಿ ಅವೈಜ್ಞಾನಿಕವೇ ಹೊರತು ಸದಾಶಿವ ವರದಿ ಅವೈಜ್ಞಾನಿಕವಾಗಿಲ್ಲ ಎಂದು ಪ್ರತಿಪಾದಿಸಿದರು.

    namma tumakuru

    ಇದಕ್ಕೆ ದನಿಗೂಡಿಸಿದ ಮಾದಿಗ ಸಮಾಜದ ಚಿಂತಕ ತರಬೇನಹಳ್ಳಿ ಚಿದಾನಂದ ಮೂರ್ತಿ, ಮಾದಿಗ ಸಮುದಾಯವು ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರುವಂತೆ ಒತ್ತಾಯಿಸಲು, ಮಾದಿಗ ಸಮುದಾಯದ ಎಲ್ಲಾ ಹಾಲಿ ಹಾಗೂ ಮಾಜಿ ಗ್ರಾಮ ಪಂಚಾಯತ್, ತಾಲೂಕ್ ಪಂಚಾಯತ್, ಜಿಲ್ಲಾ ಪಂಚಾಯತ್, ಸ್ಥಳೀಯ ಸಂಸ್ಥೆಗಳ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರು, ಶಾಸಕರು, ಸಚಿವರು, ರಾಜ್ಯಸಭೆ ಹಾಗೂ ಲೋಕಸಭಾ ಸದಸ್ಯರು, ಉದ್ಯಮಿಗಳು, ಸರಕಾರಿ ಅಧಿಕಾರಿ ವರ್ಗ ಸೇರಿದಂತೆ, ಮಾದಿಗ ಸಮುದಾಯದ ಎಲ್ಲಾ ಜನರನ್ನು ಒಂದೇ ವೇದಿಕೆಯಡಿ ತಂದು ಬೃಹತ್ ಸಮಾವೇಶ ನಡೆಸಿ, ಸರಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾದಿಗ ಸಮುದಾಯದ ಮುಖಂಡರಾದ, ಹೆಸರಹಳ್ಳಿ  ಗೋಪಾಲ್,  ಅಗಸರಹಳ್ಳಿ ಮೂರ್ತಿ, ಜಯರಾಮಯ್ಯ, ನೀಲಕಂಠ, ಶೋಭಾ ಕೃಷ್ಣಮೂರ್ತಿ ಹಾಗೂ ಸಮಾಜದ ಮುಖಂಡರು ಹಾಜರಿದ್ದರು.

    ವರದಿ: ಚಿದಾನಂದಮೂರ್ತಿ ತರಬೇನಹಳ್ಳಿ

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಎಲೆಕ್ಟ್ರೋಕೆಮಿಸ್ಟ್ರಿ ಕುರಿತು ವಿಶೇಷ ಉಪನ್ಯಾಸ

    October 16, 2025

    ತುಮಕೂರು | 41 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ಯಂತ್ರ ಅಳವಡಿಕೆ: ಸಚಿವ ಶರಣಪ್ರಕಾಶ ಪಾಟೀಲ

    October 15, 2025

    ಮಧುಗಿರಿ | ತುಮುಲ್ ಚುನಾವಣೆ: ಬಿ.ನಾಗೇಶಬಾಬು ಅನರ್ಹ: ಕೊಂಡವಾಡಿ ಚಂದ್ರಶೇಖರ್ ಗೆ ಒಲಿದ ಅದೃಷ್ಟ

    October 14, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ‘ನಮ್ಮ ಊರು ನಮ್ಮ ಕೆರೆ’ ಕಾರ್ಯಕ್ರಮದಡಿ ನ್ಯಾಯದಗುಂಟೆ ಗ್ರಾಮದಲ್ಲಿ ಕೆರೆಗೆ ಗುದ್ದಲಿ ಪೂಜೆ

    October 17, 2025

    ಪಾವಗಡ: ತಾಲೂಕಿನ ಲಿಂಗದಹಳ್ಳಿ ವಲಯದ  ನ್ಯಾಯದಗುಂಟೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ( ರಿ.) ನಮ್ಮ…

    ಹುಲಿಯನ್ನು ಇನ್ನೂ ಎರಡು ದಿನಗಳಲ್ಲಿ ಹಿಡಿಯಬೇಕು: ಅರಣ್ಯಾಧಿಕಾರಿಗಳಿಗೆ ರೈತರಿಂದ ಗಡುವು

    October 17, 2025

    ಶಿರಾ: ಮನೆಯ ಬೀಗ ಒಡೆದು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

    October 17, 2025

    ಶಿಕ್ಷಕ ರಾಜಗೋಪಾಲ ಅವರಿಗೆ ‘ಕರ್ನಾಟಕ ವಾಲ್ಮೀಕಿರತ್ನ ಪ್ರಶಸ್ತಿ – 2025’

    October 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.