nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    August 21, 2026

    ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ

    August 21, 2026

    ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

    August 20, 2026
    Facebook Twitter Instagram
    ಟ್ರೆಂಡಿಂಗ್
    • ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ
    • ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ
    • ಔರಾದ್: ₹30.21 ಲಕ್ಷ ಮೌಲ್ಯದ ಗಾಂಜಾ ಗಿಡಗಳ ಜಪ್ತಿ, ಆರೋಪಿ ಬಂಧಿಸಿದ ಔರಾದ್-ಬಿ ಪೊಲೀಸರು
    • ಕರ್ನಾಟಕದಲ್ಲಿ 4 ತಿಂಗಳಲ್ಲಿ 725 ಬಾಲಕಿಯರು ಗರ್ಭಿಣಿ: ಕಳವಳ ವ್ಯಕ್ತಪಡಿಸಿದ ಅಂಕಿಅಂಶ
    • ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ
    • ಕುಣಿಗಲ್: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಆ.21ರಂದು ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹಕಾರ ಸಂಘಗಳು ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು: ಸಚಿವ ಬಿ.ಸಿ.ನಾಗೇಶ್
    ಸಿರಾ March 6, 2022

    ಸಹಕಾರ ಸಂಘಗಳು ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು: ಸಚಿವ ಬಿ.ಸಿ.ನಾಗೇಶ್

    By adminMarch 6, 2022No Comments2 Mins Read
    halu uthpadakara sangha

    ಸಿರಾ: ಸಹಕಾರ ಸಂಘಗಳು ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್  ಹೇಳಿದರು.

    ತುಮಕೂರು ಒಕ್ಕೂಟದ ವತಿಯಿಂದ ಜಿಲ್ಲೆಯ ಸಿರಾ ನಗರದ ಚಂಗಾವರ ರಸ್ತೆಯ ಶೀಥಲ ಕೇಂದ್ರದ ಆವರಣದಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನಂದಿನಿ ಕ್ಷೀರ ಭವನ ಹಾಗೂ ವಿವಿಧ ರೈತಪರ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

    ಭಾರತ ಅತ್ಯಂತ ಪ್ರಭಾವಶಾಲಿ ರಾಷ್ಟ್ರವಾಗಿತ್ತು. ಎಲ್ಲ ಸಹಕಾರಿ ಆಧಾರದ ಮೇಲೆ ನಡೆಸಲಾಗುತ್ತಿತ್ತು. ಗ್ರಾಮಗಳಲ್ಲಿ ಎಲ್ಲರೂ ಒಗ್ಗೂಡಿ ವಿವಿಧ ಕಾರ್ಯಕ್ರಮಗಳನ್ನು ಮಾಡುತ್ತಿದ್ದು. ಸಮಾಜದ ಎಲ್ಲರೂ ಸುಖವಾಗಿರಬೇಕೆಂದು ಯೋಚನೆ ಮಾಡುತ್ತಿದ್ದರು. ಕೆರೆ ಕಟ್ಟೆಗಳನ್ನು ಎಲ್ಲರೂ ಒಟ್ಟಿಗೆ ಸೇರಿ ನಿರ್ಮಿಸುತ್ತಿದ್ದಾರೆ. ಅದರ ಆಧಾರದ ಮೇಲೆ ನಡೆದುಕೊಂಡು ಬಂದಿದೆ. ಸರಕಾರಗಳು ಸಹ ಉತ್ತಮ ಸಹಕಾರ ನೀಡುತ್ತಿವೆ ಎಂದರು.

    ಸಿರಾ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಮಾತನಾಡಿ, ಸಂಘಟನೆ ಸದೃಡತೆ ಸಹಕಾರಿ ಕ್ಷೇತ್ರದಲ್ಲಿ ಏನು ಬೇಕಾದರೂ ಸಾಧಿಸಬಹುದು. ಅದರ ಉದಾಹರಣೆಯಾಗಿ. ಕರ್ನಾಟಕ ಸಹಕಾರ ಹಾಲು ಮಹಾಮಂಡಳಿ ಉದಾಹರಣೆಯಾಗಿದೆ. ರೈತರಿಗೆ ಅನುಕೂಲಗಳ ಬಗ್ಗೆ ರಾಜ್ಯ ಸರಕಾರ ಬಜೆಟ್‌ ನಲ್ಲಿ ರೈತಪರ ಕಾರ್ಯಕ್ರಮಗಳನ್ನು ರೈತಶಕ್ತಿ ಎಂಬ ವಿನೂತನ ಕಾರ್ಯಕ್ರಮ ಜಾರಿಗೆ ತಂದಿದೆ. ಕ್ಷೀರ ಸಮೃದ್ದಿ ಸಹಕಾರ ಬ್ಯಾಂಕ್ ಸ್ಥಾಪನೆ ಮಾಡಿ ಸಹಕಾರ ಸಂಘದ ಸದಸ್ಯರಿಗೆ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಕಾರ್ಯಕ್ರಮ ಜಾರಿಗೆ ತಂದಿದ್ದು, ಇದರ ಉಪಯೋಗವನ್ನು ರೈತರು ಪಡೆದುಕೊಳ್ಳಿ ಎಂದರು.

    ರಾಜ್ಯ ರೇಷ್ಮೆ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ ಮಾತನಾಡಿ, ಶಿರಾ ತಾಲ್ಲೂಕಿನಲ್ಲಿ ಪ್ರಸ್ತುತ 65 ಸಾವಿರ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಅದು 1 ಲಕ್ಷ ಲೀಟರ್ ಹಾಲು ದಿನವಹಿ ಉತ್ಪಾದಿಸುವ ಶಕ್ತಿ ತಾಲ್ಲೂಕಿನಿಂದ ಆಗಬೇಕು ಎಂಬ ಮಹತ್ತರ ಮುಂದಾಲೋಚನೆಯಿಂದ ರೈತರಿಗೆ ಹೈನುಗಾರಿಕೆಯಿಂದ ಆರ್ಥಿಕ ಸಧೃಡತೆ ಬರಬೇಕು ಎಂಬ ಉದ್ದೇಶದಿಂದ ಉತ್ತಮವಾದ ವ್ಯವಸ್ಥೆ ಕಲ್ಪಿಸಲು ನಂದಿನಿ ಕ್ಷೀರಭವನ ನಿರ್ಮಾಣ ಮಾಡಲಾಗಿದೆ. ಶಿರಾ ಪಾವಗಡ, ಮಧುಗಿರಿ, ಕೊರಟಗೆರೆ ತಾಲ್ಲೂಕುಗಳಲ್ಲಿ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗುತ್ತಾರೆ. ಅವರೆಲ್ಲರೂ ಕೂಡ ಗ್ರಾಮಗಳಲ್ಲಿ ಹೈನುಗಾರಿಕಾ ಉದ್ಯಮ ಮಾಡುವುದರಿಂದ ಹೆಚ್ಚಿನ ಆರ್ಥಿಕ ಶಕ್ತಿ ಸಿಗುತ್ತದೆ ಎಂದರು.

    ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ಶಿಬಿರ, ಮಿಶ್ರತಳಿ ಕರುಗಳ ಪ್ರದರ್ಶನ, ಶುದ್ಧ ಕುಡಿಯುವ ನೀರನ ಘಟಕ, ನಂದಿನಿ ಕ್ಷೀರ ಮಳಿಗೆ ಹಾಗೂ ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು.

    ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಚಿದಾನಂದ್ ಎಂ.ಗೌಡ, ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾ ಮಂಡಲದ ನಿರ್ದೇಶಕರಾದ ಸತೀಶ್, ಶಿವನಂಜಪ್ಪ, ಕೊಂಡವಾಡಿ ಚಂದ್ರಶೇಖರ್, ಜಿ.ಎನ್.ಮೂರ್ತಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಉಗ್ರೇಶ್,  ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ಎ.ಎನ್ .ಪೀರ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ

    July 6, 2026

    ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ

    July 5, 2026

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    August 21, 2026

    ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(SIR)–2026ರಡಿ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ…

    ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ

    August 21, 2026

    ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

    August 20, 2026

    ಔರಾದ್: ₹30.21 ಲಕ್ಷ ಮೌಲ್ಯದ ಗಾಂಜಾ ಗಿಡಗಳ ಜಪ್ತಿ, ಆರೋಪಿ ಬಂಧಿಸಿದ ಔರಾದ್-ಬಿ ಪೊಲೀಸರು

    August 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.