ಸಿರಾ: ಸಹಕಾರ ಸಂಘಗಳು ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಹೇಳಿದರು.
ತುಮಕೂರು ಒಕ್ಕೂಟದ ವತಿಯಿಂದ ಜಿಲ್ಲೆಯ ಸಿರಾ ನಗರದ ಚಂಗಾವರ ರಸ್ತೆಯ ಶೀಥಲ ಕೇಂದ್ರದ ಆವರಣದಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನಂದಿನಿ ಕ್ಷೀರ ಭವನ ಹಾಗೂ ವಿವಿಧ ರೈತಪರ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.
ಭಾರತ ಅತ್ಯಂತ ಪ್ರಭಾವಶಾಲಿ ರಾಷ್ಟ್ರವಾಗಿತ್ತು. ಎಲ್ಲ ಸಹಕಾರಿ ಆಧಾರದ ಮೇಲೆ ನಡೆಸಲಾಗುತ್ತಿತ್ತು. ಗ್ರಾಮಗಳಲ್ಲಿ ಎಲ್ಲರೂ ಒಗ್ಗೂಡಿ ವಿವಿಧ ಕಾರ್ಯಕ್ರಮಗಳನ್ನು ಮಾಡುತ್ತಿದ್ದು. ಸಮಾಜದ ಎಲ್ಲರೂ ಸುಖವಾಗಿರಬೇಕೆಂದು ಯೋಚನೆ ಮಾಡುತ್ತಿದ್ದರು. ಕೆರೆ ಕಟ್ಟೆಗಳನ್ನು ಎಲ್ಲರೂ ಒಟ್ಟಿಗೆ ಸೇರಿ ನಿರ್ಮಿಸುತ್ತಿದ್ದಾರೆ. ಅದರ ಆಧಾರದ ಮೇಲೆ ನಡೆದುಕೊಂಡು ಬಂದಿದೆ. ಸರಕಾರಗಳು ಸಹ ಉತ್ತಮ ಸಹಕಾರ ನೀಡುತ್ತಿವೆ ಎಂದರು.
ಸಿರಾ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಮಾತನಾಡಿ, ಸಂಘಟನೆ ಸದೃಡತೆ ಸಹಕಾರಿ ಕ್ಷೇತ್ರದಲ್ಲಿ ಏನು ಬೇಕಾದರೂ ಸಾಧಿಸಬಹುದು. ಅದರ ಉದಾಹರಣೆಯಾಗಿ. ಕರ್ನಾಟಕ ಸಹಕಾರ ಹಾಲು ಮಹಾಮಂಡಳಿ ಉದಾಹರಣೆಯಾಗಿದೆ. ರೈತರಿಗೆ ಅನುಕೂಲಗಳ ಬಗ್ಗೆ ರಾಜ್ಯ ಸರಕಾರ ಬಜೆಟ್ ನಲ್ಲಿ ರೈತಪರ ಕಾರ್ಯಕ್ರಮಗಳನ್ನು ರೈತಶಕ್ತಿ ಎಂಬ ವಿನೂತನ ಕಾರ್ಯಕ್ರಮ ಜಾರಿಗೆ ತಂದಿದೆ. ಕ್ಷೀರ ಸಮೃದ್ದಿ ಸಹಕಾರ ಬ್ಯಾಂಕ್ ಸ್ಥಾಪನೆ ಮಾಡಿ ಸಹಕಾರ ಸಂಘದ ಸದಸ್ಯರಿಗೆ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಕಾರ್ಯಕ್ರಮ ಜಾರಿಗೆ ತಂದಿದ್ದು, ಇದರ ಉಪಯೋಗವನ್ನು ರೈತರು ಪಡೆದುಕೊಳ್ಳಿ ಎಂದರು.
ರಾಜ್ಯ ರೇಷ್ಮೆ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ ಮಾತನಾಡಿ, ಶಿರಾ ತಾಲ್ಲೂಕಿನಲ್ಲಿ ಪ್ರಸ್ತುತ 65 ಸಾವಿರ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಅದು 1 ಲಕ್ಷ ಲೀಟರ್ ಹಾಲು ದಿನವಹಿ ಉತ್ಪಾದಿಸುವ ಶಕ್ತಿ ತಾಲ್ಲೂಕಿನಿಂದ ಆಗಬೇಕು ಎಂಬ ಮಹತ್ತರ ಮುಂದಾಲೋಚನೆಯಿಂದ ರೈತರಿಗೆ ಹೈನುಗಾರಿಕೆಯಿಂದ ಆರ್ಥಿಕ ಸಧೃಡತೆ ಬರಬೇಕು ಎಂಬ ಉದ್ದೇಶದಿಂದ ಉತ್ತಮವಾದ ವ್ಯವಸ್ಥೆ ಕಲ್ಪಿಸಲು ನಂದಿನಿ ಕ್ಷೀರಭವನ ನಿರ್ಮಾಣ ಮಾಡಲಾಗಿದೆ. ಶಿರಾ ಪಾವಗಡ, ಮಧುಗಿರಿ, ಕೊರಟಗೆರೆ ತಾಲ್ಲೂಕುಗಳಲ್ಲಿ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗುತ್ತಾರೆ. ಅವರೆಲ್ಲರೂ ಕೂಡ ಗ್ರಾಮಗಳಲ್ಲಿ ಹೈನುಗಾರಿಕಾ ಉದ್ಯಮ ಮಾಡುವುದರಿಂದ ಹೆಚ್ಚಿನ ಆರ್ಥಿಕ ಶಕ್ತಿ ಸಿಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ಶಿಬಿರ, ಮಿಶ್ರತಳಿ ಕರುಗಳ ಪ್ರದರ್ಶನ, ಶುದ್ಧ ಕುಡಿಯುವ ನೀರನ ಘಟಕ, ನಂದಿನಿ ಕ್ಷೀರ ಮಳಿಗೆ ಹಾಗೂ ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಚಿದಾನಂದ್ ಎಂ.ಗೌಡ, ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾ ಮಂಡಲದ ನಿರ್ದೇಶಕರಾದ ಸತೀಶ್, ಶಿವನಂಜಪ್ಪ, ಕೊಂಡವಾಡಿ ಚಂದ್ರಶೇಖರ್, ಜಿ.ಎನ್.ಮೂರ್ತಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಉಗ್ರೇಶ್, ಸೇರಿದಂತೆ ಹಲವರು ಹಾಜರಿದ್ದರು.
ವರದಿ: ಎ.ಎನ್ .ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB