nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025
    Facebook Twitter Instagram
    ಟ್ರೆಂಡಿಂಗ್
    • ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ
    • ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!
    • ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ
    • ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್
    • ನಂಬರ್ ಪ್ಲೇಟ್ ನ್ನೂ ಬಿಡದೇ ಕೆಎಸ್ ಆರ್ ಟಿಸಿ ಮೇಲೆ ಆವರಿಸಿದ ವಿಮಲ್!
    • ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ: ಡಿ.ಕೆ.ಸುರೇಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    • ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ: ಸಿಎಂ ಆಗಮನ ಹಿನ್ನೆಲೆ ಭರ್ಜರಿ ಸಿದ್ಧತೆ
    • ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಸೆಂಬರ್ 14ರಂದು ಸಾಹೇ ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ : 876 ವಿದ್ಯಾರ್ಥಿಗಳಿಗೆ ಪದವಿ: 10 ಮಂದಿಗೆ ಚಿನ್ನದ ಪದಕ
    ತುಮಕೂರು December 12, 2024

    ಡಿಸೆಂಬರ್ 14ರಂದು ಸಾಹೇ ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ : 876 ವಿದ್ಯಾರ್ಥಿಗಳಿಗೆ ಪದವಿ: 10 ಮಂದಿಗೆ ಚಿನ್ನದ ಪದಕ

    By adminDecember 12, 2024No Comments2 Mins Read
    sidhartha

    ತುಮಕೂರು: ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ (ಡಿಸೆಂಬರ್ 14ರಂದು) ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, 13ನೇ ಸಾಹೇ ಘಟಿಕೋತ್ಸವದಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ನಿಕಟಪೂರ್ವ ರಾಜ್ಯಪಾಲರು ಆದ ಕರ್ನಾಟಕದ ಶ್ರೀಮತಿ ಮಾರ್ಗರೆಟ್ ಆಳ್ವ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ. ನವದೆಹಲಿಯ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ ನ ಅಧ್ಯಕ್ಷರಾದ ಪ್ರೊ. ಟಿ.ಜಿ.ಸೀತಾರಾಮ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ ಗೃಹ ಸಚಿವರಾದ ಸವ್ಯಸಾಚಿ ಡಾ.ಜಿ.ಪರಮೇಶ್ವರ ಅವರು ಪದವಿ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಭೋದಿಸಿ, ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ ಎಂದು ಅವರು ಗೌರವ ಡಾಕ್ಟರೇಟ್ ಪಡೆದವರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಅತಿಥಿಗಳ ಬಗ್ಗೆ ವಿವರಿಸಿದರು.
    ಕುಲಸಚಿವರಾದ ಡಾ.ಎಂ.ಝೆಡ್ ಕುರಿಯನ್ ಮಾತನಾಡಿ, ಸಾಹೇ ವಿವಿಯ ಘಟಿಕೋತ್ಸವದಲ್ಲಿ ರ‍್ಯಾಂಕ್ ಪಡೆದವರ ವಿವರಗಳನ್ನು ನೀಡುತ್ತಾ, ಸಾಹೇ ಬೆಳೆದು ಬಂದ ಹಾದಿ ಹಾಗೂ ನ್ಯಾಕ್ ಎ+ ಪಡೆದಿರುವ ಕುರಿತು ಮಾಹಿತಿಯನ್ನು ನೀಡಿದರು. ಮುಂದಿನ ದಿನಗಳಲ್ಲಿ ಸಾಹೇ ವಿವಿಯು ಅಂತಾರಾಷ್ಟ್ರೀಯ ರ‍್ಯಾಂಕ್ ಪಟ್ಟಿಯಲ್ಲಿ ಬರುವ ಎಲ್ಲಾ ರೀತಿಯ ಪ್ರಯತ್ನಗಳು ನಡೆಸುತ್ತಿದೆ ಎಂದರು.


    Provided by

    ಇತ್ತೀಚೆಗೆ ಅಮೆರಿಕಾದ ಅವಲಾನ್ ವೈದ್ಯಕೀಯ ವಿವಿಯೊಂದಿಗೆ ಸಾಹೇ ವಿವಿ ಒಪ್ಪಂದ ನಡೆಸಿತ್ತು. ಅದರ ಒಪ್ಪಂದದ ಪ್ರಕಾರ ಮುಂದಿನ ಜನವರಿ ಮಾಹೆಯಲ್ಲಿ ವೈದ್ಯಕೀಯ ಆನ್ಲೈನ್ ತರಗತಿಗಳನ್ನು ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ಅವಲಾನ್ ವಿವಿಯ ವಿದ್ಯಾರ್ಥಿಗಳು ಎರಡು ವರ್ಷಗಳ ಕಾಲ ಸಾಹೇ ವಿವಿಯಲ್ಲಿ ಆನ್ಲೈನ್ ಮೂಲಕ ಬೋಧನಾ ಮತ್ತು ಪ್ರಾಯೋಗಿಕ ತರಗತಿಗಳು ಪಡೆದುಕೊಳ್ಳುತ್ತಾರೆ ಎಂದು ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ ತಿಳಿಸಿದರು.

    ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ ಮಾತನಾಡಿ, ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಲು ಶೇ.80ರಷ್ಟು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಾಗಿರುತ್ತಾರೆ. ಅತೀ ಹೆಚ್ಚು ರ‍್ಯಾಂಕ್ ಪಡೆದವರಲ್ಲಿ ಅವರೇ ಮೇಲುಗೈ. ಕಳೆದ ಎರಡು ವರ್ಷದ ಹಿಂದೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್ ಕ್ಷೇತ್ರದಲ್ಲಿಯೂ ಶೇ.20ರಷ್ಟು ಮಾತ್ರ ಕ್ಯಾಂಪಸ್ ಪ್ಲೇಸ್ಮೆಂಟ್ ಇತ್ತು. ಈ ಬಾರಿ ಕ್ಯಾಂಪಸ್ ಉದ್ಯೋಗ ಅವಕಾಶ ಶೇ.60ರಷ್ಟು ಹೆಚ್ಚಾಗುವ ನಿರೀಕ್ಷೆ ಎಂದು ಅವರು ಮಾಹಿತಿ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ: ಸಿಎಂ ಆಗಮನ ಹಿನ್ನೆಲೆ ಭರ್ಜರಿ ಸಿದ್ಧತೆ

    June 20, 2025

    “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”

    June 19, 2025

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025
    Our Picks

    ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    June 20, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಬೆಂಗಳೂರು: ನಿರ್ದೇಶಕ ನಂದ ಕಿಶೋರ್‌ ಯುವ ನಟರೊಬ್ಬರಿಗೆ ಅವಕಾಶ ನೀಡುವ ಆಮಿಷವೊಡ್ಡಿ ಬರೋಬ್ಬರಿ 22 ಲಕ್ಷ ರೂಪಾಯಿ ವಂಚಿಸಿರುವ ಆರೋಪ…

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025

    ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್

    June 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.