nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ
    • 6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ
    • ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?
    • ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ
    • ಹೊಸ ವರ್ಷ –2026,   ಸಂಕ್ರಾಂತಿ…!
    • ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ
    • ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ
    • ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜಕ್ಕೆ ವೀರಶೈವ ಅರಸರ ಕೊಡುಗೆ ಅಪಾರ: ಶಾಸಕ ವೀರಣ್ಣ ಚರಂತಿಮಠ
    ಜಿಲ್ಲಾ ಸುದ್ದಿ March 2, 2023

    ಸಮಾಜಕ್ಕೆ ವೀರಶೈವ ಅರಸರ ಕೊಡುಗೆ ಅಪಾರ: ಶಾಸಕ ವೀರಣ್ಣ ಚರಂತಿಮಠ

    By adminMarch 2, 2023No Comments2 Mins Read
    bagalkote

    ಬಾಗಲಕೋಟೆ: ಪ್ರಜೆಗಳ ಹಿತಾಸಕ್ತಿ ಕಾಪಾಡುವಲ್ಲಿ ಮತ್ತು ಸಾಮಾಜಿಕ ಕೊಡುಗೆ ನೀಡುವಲ್ಲಿ ವೀರಶೈವ ರಾಜಮನೆತನಗಳ ಕೊಡುಗೆ ಅಪಾರವಾದದ್ದು. ಇದರಲ್ಲಿ ಹಂಡೆ ಅರಸು ಮನೆತನವು ಮೊದಲ ಸಾಲಿನಲ್ಲಿದೆ ಎಂದು ಶಾಸಕು ಹಾಗೂ ಬಿವಿವಿ ಸಂಘದ ಕಾರ್ಯಾಧ್ಯಕ್ಷರಾದ ಡಾ. ವೀರಣ್ಣ ಚರಂತಿಮಠ ಹೇಳಿದರು.

    ಬಸವೇಶ್ವರ ಶಾಲಾ ಮಹಾವಿದ್ಯಾಲಯದ ಸಭಾಭವನದಲ್ಲಿ ಕನ್ನಡ ಸ್ನಾತಕೋತ್ತರ ವಿಭಾಗ, ಬಿವಿವಿಎಸ್ ಸಂಶೋಧನಾ ಕೇಂದ್ರ ಹಾಗೂ ಕಲಬುರ್ಗಿ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡ ಹಂಡೆ ಅರಸರ ಸಾಂಸ್ಕೃತಿಕ ಕೊಡುಗೆಗಳು ರಾಜ್ಯಮಟ್ಟದ ವಿಚಾರ ಸಂಕಿರಣ ಮತ್ತು ಗ್ರಂಥಗಳ ಬಿಡುಗಡೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಇತರ ಧರ್ಮಿಯ ರಾಜರಂತೆ ದಬ್ಬಾಳಿಕೆ ಮತ್ತು ಹಿಂಸೆಗಳನ್ನು ಪ್ರೋತ್ಸಾಹಿಸಿದೆ ಧಾರ್ಮಿಕ ನೆಲಗಟ್ಟಿನ ಮೇಲೆ ಆದರ್ಶ ಆಡಳಿತ ನೀಡಿರುವುದು ವೀರಶೈವ ರಾಜಮನೆತನಗಳು. ಇದಕ್ಕೆ ಮೈಸೂರು ಮತ್ತು ಸುರಪೂರ ರಾಜಾಡಳಿತವೆ ಸಾಕ್ಷಿಯಾಗಿದೆ ಎಂದರು.


    Provided by
    Provided by

    ಹಂಡೆ ಅರಸರ ಕೊಡುಗೆ ಅಪಾರವಾಗಿದ್ದು ಅವುಗಳನ್ನು ತಿಳಿದುಕೊಳ್ಳುವುದ ಅವಶ್ಯಕವಾಗಿದೆ. ಕರ್ನಾಟಕ ಇತಿಹಾಸದಲ್ಲಿ ತಮ್ಮದೆಯಾದ ಕೊಡುಗೆಕೊಟ್ಟ ಅರಸು ಮನೆತನಗಳ ಮೇಲೆ ಪ್ರಜೆಗಳು ಸರಕಾರಕ್ಕಿಂತ ಹೆಚ್ಚು ಅವಲಂಭಿತರಾಗಿದ್ದರು ಅದಕ್ಕೆ ಅವರ ತ್ಯಾಗ, ಶೌರ್ಯ, ಧೈರ್ಯ ಮತ್ತು ಸಮರ್ಪಕ ಆಡಳಿತವೆ ಕಾರಣ ಎಂದರು.

    ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠದ ಅಧ್ಯಕ್ಷರಾದ ಜಿ.ಎನ್‌.ಪಾಟೀಲ್ ಮಾತನಾಡಿ ಹಂಡೆ ಅರಸರ ಆಡಳಿತ ಅತಿದೊಡ್ಡ ಇತಿಹಾಸ ಹೊಂದಿದ್ದು ಕರ್ನಾಟಕಕ್ಕೆ ತಮ್ಮದೆಯಾದ ಸಾಲು ಸಾಲು ಕೊಡುಗೆ ನೀಡಿದ ಅವರ ಅಧ್ಯಯನ ಅವಶ್ಯವಾಗಿದೆ. ಇತಿಹಾಸವನ್ನು ಕಟ್ಟಲು ಶಾಸನ, ಕೈಪಿಯತ್ತುಗಳು ಮತ್ತು ಸಾಹಿತ್ಯ ಕೃತಿಗಳು ಪ್ರಮುಖವಾಗಿದ್ದು ಇಂದು ಲೋಕಾರ್ಪಣೆಯಾದ ಕೈಪಿಯತ್ತುಗಳು ಹಂಡೆ ಅರಸರ ಸಮರ್ಪಕ ಇತಿಹಾಸವನ್ನು ಒದಗಿಸುತ್ತವೆ ಎಂದರು.

    ಸಾಂಸ್ಕೃತಿಕವಾಗಿ ಅಷ್ಟೇ ಅಲ್ಲದೆ ಧಾರ್ಮಿಕ, ಸಾಹಿತ್ಯ ಲೋಕದಲ್ಲಿಯೂ ಅಪಾರ ಕೊಡುಗೆ ನೀಡಿದ ಹಂಡೆ ಅರಸು ಮನೆತನಗಳ ಬಗ್ಗೆ ಅನ್ಯರಾಜ್ಯಗಳಲ್ಲಿ ಅಧ್ಯಯನ ಮಾಡಲಾಗುತ್ತಿದ್ದು ಹಲವಾರು ಭಾಷೆಗಳಲ್ಲಿ ಗ್ರಂಥಗಳನ್ನು ಬರೆಯಲಾಗಿದೆ. ವೀರಶೈವ ಧರ್ಮವನ್ನು ವೃತದಂತೆ ಕಾಪಾಡಿಕೊಂಡು ಬಂದಿದ್ದಾರೆ ಎಂದು ರವೀಂದ್ರನಾಥರು ಹೇಳುವುದನ್ನು ಗಮನಿಸಿದರೆ ಅವರ ಧರ್ಮಪಾಲನೆಯ ಶ್ರೇಷ್ಠತೆ ಕಾಣುತ್ತದೆ ಎಂದರು.

    ಹಂಡೆ ಅರಸು ಮನೆತನಕ್ಕೆ ಸಂಬಂಧಿಸಿದಂತೆ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠದಿಂದ 25 ಕೃತಿಗಳನ್ನು ಹೊರ ತಂದಿದ್ದೆವೆ. ಹಂಡೆ ಆಡಳಿತದ ಅಧ್ಯಯನಕ್ಕಾಗಿ ವಿವಿ ಮಟ್ಟದಲ್ಲಿ ಸಂಶೋಧನ ಪೀಠ ಪ್ರಾರಂಭವಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಪ್ರಾಚಾರ್ಯರ ಡಾ. ವಿ.ಎಸ್ ಕಟಗಿಹಳ್ಳಿಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿವಿವಿ ಸಂಘದ ಕಾಲೇಜುಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಗುರುಬಸವ ಸೂಳಿಭಾವಿ, ವಿಶ್ರಾಂತ ಪ್ರದ್ಯಾಪಕರಾದ ಡಾ. ರು.ಮ ಷಡಕ್ಷರಯ್ಯ, ಕರ್ನಾಟಕ ಲಲಿತಕಲಾ ವಿವಿ ವಿಶ್ರಾಂತ ವಿಶೇಷಾಧಿಕಾರಿ ಡಾ.ಎಸ್.ಸಿ ಪಾಟೀಲ್, ಡಾ.ಡಿ.ಎನ್ ಪಾಟೀಲ, ನೇತಿ ರಘುರಾಮ, ಡಾ. ಕೊಟ್ರಸ್ವಾಮಿ ಎ.ಎಂ.ಎಂ, ಡಾ.ಬಿ.ವ್ಹಿ ಖೋತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    ಕೈಪಿಯತ್ತುಗಳ ಲೋಕಾರ್ಪಣೆ: ಹಂಡೆ ಅರಸರ ಆಡಳಿತ ಮತ್ತು ಇತಿಹಾಸದ ಕುರಿತು ಬರೆಯಲಾದ ಕೈಪಿಯತ್ತುಗಳನ್ನು ಲೋಕಾರ್ಪಣೆ ಮಾಡಲಾಯಿತು. ಬಳ್ಳಾರಿಯ ನೇತೃತ್ವದಲ್ಲಿ ರಘುರಾಮರ ಬುಕ್ಕರಾಯಸಮುದ್ರ ಅನಂತಸಾಗರ ಕೈಫಿಯತ್ತು ಮತ್ತು ಅನಂತಪುರ ಜಿಲ್ಲೆಯ ಐತಿಹಾಸಿಕ ಕಥೆಗಳು ಎಂಬ ಗ್ರಂಥಗಳನ್ನು ಹಾಗೂ ಡಾ. ಕೊಟ್ರಸ್ವಾಮಿ.ಎ.ಎಂ.ಎಂ ಅವರು ಬರೆದ ಅನಂತಪುರ ಕೈಪಿಯತ್ತುಗಳನ್ನು ಲೋಕಾರ್ಪಣೆ ಮಾಡಲಾಯಿತು. ಡಾ.ಡಿ.ಎನ್ ಪಾಟೀಲ್ ಕೃತಿಗಳ ಪರಿಚಯ ಮಾಡಿದರು.

    ಹಂಡೆ ಅರಸರ ಕೊಡುಗೆ ಕುರಿತು ಗೋಷ್ಟಿ: ಸಾಮಾಜಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಹಂಡೆ ಅರಸರ ಕೊಡುಗೆ ಮತ್ತು ಆಡಳಿತದ ಕುರಿತು ಗೋಷ್ಟಿ ನಡೆಸಲಾಯಿತು. ಗೋಷ್ಟಿಯಲ್ಲಿ ಹಂಡೆ ಅರಸರ ಧಾರ್ಮಿಕ ಕೊಡುಗೆಗಳು ಕುರಿತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಕೆ.ರವೀಂದ್ರನಾಥ ಉಪನ್ಯಾಸ ನೀಡಿದರು. ಬೆಂಗಳೂರಿನ ಸಂಶೋಧಕರಾದ ಡಾ.ಸುಂಕಂ.ಗೋವರ್ಧನ್ ಅವರು ಶಾಸನಗಳಲ್ಲಿ ಹಂಡೆ ಅರಸರು ಎಂಬ ವಿಷಯದ ಬಗ್ಗೆ ಮತ್ತು ಧಾರವಾಡದ ಕರ್ನಾಟಕ ವಿವಿಯ ಕನ್ನಡ ಸಂಶೋಧನ ಸಂಸ್ಥೆಯ ನಿರ್ದೇಶಕರಾದ ಪ್ರೋ.ಎಸ್.ಕೆ.ಮೇಲಕಾರ ಅವರು ಹಂಡೆ ಅರಸರ ಸಾಮಾಜಿಕ ಕೊಡುಗೆಗಳು ವಿಷಯದ ಕುರಿತು ಉಪನ್ಯಾಸ ಮಂಡಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    January 12, 2026

    ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ

    January 12, 2026

    ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ

    January 12, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    ತುಮಕೂರು: ನಗರದ ಕುಂಚ ಶ್ರೀ ಮಹಿಳಾ ಬಳಗದ ವತಿಯಿಂದ ಜ.17ರಂದು ಶನಿವಾರ ಬಟವಾಡಿಯಲ್ಲಿರುವ ಶ್ರೀ ರಂಗ ವಿದ್ಯಾ ಮಂದಿರದ ಆವರಣದಲ್ಲಿ…

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026

    ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ

    January 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.