nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ಪ್ರತಿಭೆಗೆ ವೇದಿಕೆ: ತುಮಕೂರಿನಲ್ಲಿ ನ.22ರಂದು ಚಿನ್ನರ ಚಪ್ಪರ: ನೋಂದಣಿ ಆರಂಭ

    October 19, 2025

    ಸರಗೂರು:  ರೈತನ ಮೇಲೆ ದಾಳಿ ನಡೆಸಿದ್ದ ಹುಲಿ ಕೊನೆಗೂ ಸೆರೆ

    October 19, 2025

    ಮೀನಿನ ಬಲೆಗೆ ಸಿಲುಕಿ ಮಾನಸಿಕ ಅಸ್ವಸ್ಥ ಸಾವು

    October 19, 2025
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ಪ್ರತಿಭೆಗೆ ವೇದಿಕೆ: ತುಮಕೂರಿನಲ್ಲಿ ನ.22ರಂದು ಚಿನ್ನರ ಚಪ್ಪರ: ನೋಂದಣಿ ಆರಂಭ
    • ಸರಗೂರು:  ರೈತನ ಮೇಲೆ ದಾಳಿ ನಡೆಸಿದ್ದ ಹುಲಿ ಕೊನೆಗೂ ಸೆರೆ
    • ಮೀನಿನ ಬಲೆಗೆ ಸಿಲುಕಿ ಮಾನಸಿಕ ಅಸ್ವಸ್ಥ ಸಾವು
    • ಬೆಳೆ ಹಾನಿ ಪರಿಹಾರಕ್ಕಾಗಿ ಆಗ್ರಹಿಸಿ ಶಾಸಕ ಶರಣು ಸಲಗರ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ
    • ಗೂಡ್ಸ್ ಪಲ್ಟಿಯಾಗಿ ಕಾರ್ಮಿಕರಿಗೆ ಗಾಯ ಪ್ರಕರಣ: ಜೆಡಿಎಸ್ ಮುಖಂಡ ಕೃಷ್ಣನಾಯಕ ಆಸ್ಪತ್ರೆಗೆ ಭೇಟಿ
    • ಮರಿದಾಸನಹಳ್ಳಿ ಶಾಲೆಯ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
    • ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ: ನಾಮ ನಿರ್ದೇಶನಕ್ಕೆ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮರಸ್ಯದ ಬದುಕಿನಿಂದ ಆತ್ಮತೃಪ್ತಿ ಸಾಧ್ಯ: ಶ್ರೀ ಚಂದ್ರಶೇಖರನಾಥ ಸ್ವಾಮೀಜಿ
    ತಿಪಟೂರು January 16, 2022

    ಸಾಮರಸ್ಯದ ಬದುಕಿನಿಂದ ಆತ್ಮತೃಪ್ತಿ ಸಾಧ್ಯ: ಶ್ರೀ ಚಂದ್ರಶೇಖರನಾಥ ಸ್ವಾಮೀಜಿ

    By adminJanuary 16, 2022No Comments2 Mins Read
    sankranti

    ತಿಪಟೂರು : ಮನುಷ್ಯನು ರಾಗ, ದ್ವೇಷಗಳನ್ನು ಮರೆತು ಪರಸ್ಪರರ ಜೊತೆ ಪ್ರೀತಿ, ವಿಶ್ವಾಸದಿಂದ ಬೆರೆಯುತ್ತಾ ಜೀವನ ನಡೆಸಿದಾಗ ಮಾತ್ರ ಮಾನಸಿಕ ಹಾಗೂ ಆತ್ಮತೃಪ್ತಿಯು ದೊರಕುತ್ತದೆ ಎಂದು ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

    ತಾಲ್ಲೂಕಿನ ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯ ಆವರಣದಲ್ಲಿ ಮರಕ ಸಂಕ್ರಾಂತಿಯ ಅಂಗವಾಗಿ ಶ್ರೀಮಠ ಮತ್ತು ದಸರೀಘಟ್ಟ ಗ್ರಾಮಸ್ಥರು ಸಹಯೋಗದಲ್ಲಿ ಗೋವುಗಳಿಗೆ ಕಿಚ್ಚು ಹಾಯಿಸುವ ಕಾರ್ಯಕ್ರಮಕ್ಕೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಆಶೀರ್ವಚನ ನೀಡಿದರು.


    Provided by
    Provided by
    Provided by

    ಮಾನವ ತನ್ನ ಜೀವನದಲ್ಲಿ ಹಣ, ಐಶ್ವರ್ಯದ ಸಂಪಾದನೆಗಾಗಿ ಹೆಚ್ಚು ಶ್ರಮಿಸುತ್ತಾನೆ. ಮಾನವೀಯ ಮೌಲ್ಯಗಳನ್ನು ಮರೆತು ತನ್ನ ಸುಖವೇ ಪರಮಸುಖವೆಂದು ಭಾವಿಸುತ್ತಾ ಪರಮಾತ್ಮನನ್ನು ಕಾಣುವ ಗೋಜಿಗೆ ಹೋಗದೇ ಸ್ವಾರ್ಥದಿಂದ ತನ್ನಪಾಡಿಗೆ ತಾನಿರುತ್ತಾನೆ. ಜೀವನದಲ್ಲಿ ಅಂತರಂಗದಲ್ಲಿರುವ ಪರಮಾತ್ಮನನ್ನು ಹುಡುಕದೇ ಎಲ್ಲೆಲ್ಲಿಗೋ ಹೋಗುತ್ತೇವೆ. ಆದರೆ ಪರಮಾತ್ಮ ನಮ್ಮಲ್ಲಿಯೇ ನೆಲೆಸಿರುತ್ತಾನೆ ಎಂಬುದು ತಿಳಿದೇ ಇರುವುದಿಲ್ಲ. ಮಾನವನ ಮನಸ್ಸಿನಲ್ಲಿ ಎಲ್ಲಾರೀತಿಯ ವಿಚಾರಗಳು ನೆಲೆಸಿದ್ದು ಉತ್ತಮ ವಿಚಾರಗಳನ್ನು ಉಳಿಸಿ ಕೆಟ್ಟ ವಿಚಾರಗಳನ್ನು ದೇವಾಲಯ, ಮಠಗಳಿಗೆ ಬಂದಂತಹ ಸಂದರ್ಭದಲ್ಲಿ ಬಿಟ್ಟು ಹೋಗಬೇಕು. ಪರಮಾತ್ಮನು ಎಲ್ಲರಿಗೂ ಒಂದೇ ರೀತಿಯಲ್ಲಿ ಅಥೈಸಿಕೊಳ್ಳಲು ಸಾಧ್ಯವಿಲ್ಲ. 21ನೇ ಶತಮಾನದಲ್ಲಿಯೂ ಮೂರ್ತಿ ಪೂಜೆ ಆಚರಣೆಯಲ್ಲಿದೆ ಎಂದರೆ ಆ ಮೂರ್ತಿಯಲ್ಲಿನ ಶಕ್ತಿ ದೈವತ್ತವ ಇದೇ ಎನ್ನುವುದನ್ನು ತಿಳಿಯುವ ಅವಶ್ಯಕವಿದೆ. ಧರ್ಮ ಎಂದರೆ ಎಲ್ಲಾ ಮತಗಳು ಇಲ್ಲಿ ನೆಲೆಸಿರುತ್ತವೆ. ಮಾನವನು ಇದರ ಒಳ ಅರ್ಥವನ್ನು ತಿಳಿದು ನಡೆಯಬೇಕು ಎಂದರು.

    ಕಿಚ್ಚು ಹಾಯಿಸುವಿಕೆ:

    ಗ್ರಾಮಸ್ಥೆರೆಲ್ಲಾ ಮಠದ ಆವರಣದಲ್ಲಿ ಸೇರಿ ತಮ್ಮ ರಾಸುಗಳನ್ನು ಸಿಂಗಾರ ಮಾಡಿ ಕಿಚ್ಚು ಹಾಯಿಸುವಿಕೆಗೆ ಸಿದ್ಧರಾದಾಗ ಭತ್ತದ ಒಣ ಹುಲ್ಲನ್ನು ಹಾಕಿ ಪೂಜೆ ಸಲ್ಲಿಸಿದ ಶ್ರೀಗಳು ಕಿಚ್ಚು ಹಚ್ಚಿಸಿದ ತಕ್ಷಣವೇ ಸಿಂಗರಿಸಿದ ರಾಸುಗಳು ಕಿಚ್ಚಿನಲ್ಲಿ ಹಾಯ್ದು ಓಡಿದವು. ದಣಿದು ಬಂದಂತಹ ದನಗಳಿಗೆ ಎಡೆ ಮಾಡಿ ಹಬ್ಬದ ಊಟವನ್ನು ಎಡೆಯ ರೂಪದಲ್ಲಿ ನೀಡಿದರು. ಗ್ರಾಮ ದೇವತೆಯಾದ ಶ್ರೀ ಚೌಡೇಶ್ವರಿ ದೇವಿಯ ದೇವಾಲಯವನ್ನು ಮೂರು ಸುತ್ತು ಸುತ್ತಿ ತಮ್ಮ ತಮ್ಮ ಮನೆಗಳಿಗೆ ತೆರಳುತ್ತವೆ. ಕಾರ್ತಿಕ ಮಾಸದಲ್ಲಿ ಚೆನ್ನಾಗಿ ಮೇಯ್ದು ಮೈತುಂಬಿಕೊಂಡ ದನಗಳಿಗೆ “ ಕಣ್ಣೆಸರಾಗಬಾರದೆಂದು” ಕಿಚ್ಚು ಹಾಯಿಸುತ್ತಾರೆ. ಅಲ್ಲದೇ ದನಕರುಗಳಿಗೆ ಯಾವುದೇ ಸಾಂಕ್ರಾಮಿಕ ರೋಗಗಳು ಬಾರದಿರಲೆಂಬ ಉದ್ದೇಶದಿಂದ ಕಿಚ್ಚು ಹಾಕಲಾದ ಸ್ಥಳದ ಬೂದಿಯನ್ನು ಹೊಯ್ದು ಜಾನವಾರುಗಳಿಗೆ ಸವರುತ್ತಾರೆ. ಮನೆ ಮಂದಿಯೆಲ್ಲ ಬೂದಿಯನ್ನು ವಿಭೂತಿಯಾಗಿ ಬಳಸುತ್ತಾರೆ.

    ಈ ಸಂದರ್ಭದಲ್ಲಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಶೃಂಗೇರಿ ಶಾಖಾಮಠದ ಗುಣನಾಥ ಸ್ವಾಮೀಜಿ ಸೇರಿದಂತೆ ಸಡಗರವನ್ನು ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು, ಗ್ರಾಮಸ್ಥರು ಸೇರಿದ್ದು ಹಬ್ಬದ ವಾತಾವರಣ ಸೃಷ್ಠಿಯಾಗಿತ್ತು. ತದ ನಂತರದಲ್ಲಿ ಎಲ್ಲರಿಗೂ ದಸರೀಘಟ್ಟದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಯವರು ಎಳ್ಳು ಬೆಲ್ಲ, ಪೊಂಗಲ್ ನೀಡಿ ಆಶೀರ್ವದಿಸಿದರು.

    ವರದಿ: ಆನಂದ್ ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಆರೋಗ್ಯದ ಬಗ್ಗೆ ಅರಿವು ಅಗತ್ಯ: ಶಾಸಕ ಕೆ.ಷಡಕ್ಷರಿ

    October 17, 2025

    ಪ್ರತಿ ಹಿಂದೂವಿನ ಮನೆಗೂ ಆರ್ ಎಸ್ ಎಸ್ ವಿಚಾರ ತಲುಪಿಸಬೇಕು: ರವೀಂದ್ರ ತಗ್ಗಿನಮನೆ

    October 13, 2025

    ಪಿಎಂ ಧನ ಧಾನ್ಯ ಕೃಷಿ ಯೋಜನೆ, ದ್ವಿದಳ ಧಾನ್ಯಗಳ ಯೋಜನೆಗೆ ಚಾಲನೆ

    October 12, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳ ಪ್ರತಿಭೆಗೆ ವೇದಿಕೆ: ತುಮಕೂರಿನಲ್ಲಿ ನ.22ರಂದು ಚಿನ್ನರ ಚಪ್ಪರ: ನೋಂದಣಿ ಆರಂಭ

    October 19, 2025

    ತುಮಕೂರು: ಅಕ್ಷರ ಚಪ್ಪರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಯು ಕಳೆದ ಮೂರು ವರ್ಷಗಳಿಂದ ಮಕ್ಕಳ ದಿನಾಚರಣೆ ಹಾಗೂ ಕನ್ನಡ…

    ಸರಗೂರು:  ರೈತನ ಮೇಲೆ ದಾಳಿ ನಡೆಸಿದ್ದ ಹುಲಿ ಕೊನೆಗೂ ಸೆರೆ

    October 19, 2025

    ಮೀನಿನ ಬಲೆಗೆ ಸಿಲುಕಿ ಮಾನಸಿಕ ಅಸ್ವಸ್ಥ ಸಾವು

    October 19, 2025

    ಬೆಳೆ ಹಾನಿ ಪರಿಹಾರಕ್ಕಾಗಿ ಆಗ್ರಹಿಸಿ ಶಾಸಕ ಶರಣು ಸಲಗರ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ

    October 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.