nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮರಸ್ಯದ ಬದುಕಿನಿಂದ ಆತ್ಮತೃಪ್ತಿ ಸಾಧ್ಯ: ಶ್ರೀ ಚಂದ್ರಶೇಖರನಾಥ ಸ್ವಾಮೀಜಿ
    ತಿಪಟೂರು January 16, 2022

    ಸಾಮರಸ್ಯದ ಬದುಕಿನಿಂದ ಆತ್ಮತೃಪ್ತಿ ಸಾಧ್ಯ: ಶ್ರೀ ಚಂದ್ರಶೇಖರನಾಥ ಸ್ವಾಮೀಜಿ

    By adminJanuary 16, 2022No Comments2 Mins Read
    sankranti

    ತಿಪಟೂರು : ಮನುಷ್ಯನು ರಾಗ, ದ್ವೇಷಗಳನ್ನು ಮರೆತು ಪರಸ್ಪರರ ಜೊತೆ ಪ್ರೀತಿ, ವಿಶ್ವಾಸದಿಂದ ಬೆರೆಯುತ್ತಾ ಜೀವನ ನಡೆಸಿದಾಗ ಮಾತ್ರ ಮಾನಸಿಕ ಹಾಗೂ ಆತ್ಮತೃಪ್ತಿಯು ದೊರಕುತ್ತದೆ ಎಂದು ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

    ತಾಲ್ಲೂಕಿನ ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯ ಆವರಣದಲ್ಲಿ ಮರಕ ಸಂಕ್ರಾಂತಿಯ ಅಂಗವಾಗಿ ಶ್ರೀಮಠ ಮತ್ತು ದಸರೀಘಟ್ಟ ಗ್ರಾಮಸ್ಥರು ಸಹಯೋಗದಲ್ಲಿ ಗೋವುಗಳಿಗೆ ಕಿಚ್ಚು ಹಾಯಿಸುವ ಕಾರ್ಯಕ್ರಮಕ್ಕೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಆಶೀರ್ವಚನ ನೀಡಿದರು.

    ಮಾನವ ತನ್ನ ಜೀವನದಲ್ಲಿ ಹಣ, ಐಶ್ವರ್ಯದ ಸಂಪಾದನೆಗಾಗಿ ಹೆಚ್ಚು ಶ್ರಮಿಸುತ್ತಾನೆ. ಮಾನವೀಯ ಮೌಲ್ಯಗಳನ್ನು ಮರೆತು ತನ್ನ ಸುಖವೇ ಪರಮಸುಖವೆಂದು ಭಾವಿಸುತ್ತಾ ಪರಮಾತ್ಮನನ್ನು ಕಾಣುವ ಗೋಜಿಗೆ ಹೋಗದೇ ಸ್ವಾರ್ಥದಿಂದ ತನ್ನಪಾಡಿಗೆ ತಾನಿರುತ್ತಾನೆ. ಜೀವನದಲ್ಲಿ ಅಂತರಂಗದಲ್ಲಿರುವ ಪರಮಾತ್ಮನನ್ನು ಹುಡುಕದೇ ಎಲ್ಲೆಲ್ಲಿಗೋ ಹೋಗುತ್ತೇವೆ. ಆದರೆ ಪರಮಾತ್ಮ ನಮ್ಮಲ್ಲಿಯೇ ನೆಲೆಸಿರುತ್ತಾನೆ ಎಂಬುದು ತಿಳಿದೇ ಇರುವುದಿಲ್ಲ. ಮಾನವನ ಮನಸ್ಸಿನಲ್ಲಿ ಎಲ್ಲಾರೀತಿಯ ವಿಚಾರಗಳು ನೆಲೆಸಿದ್ದು ಉತ್ತಮ ವಿಚಾರಗಳನ್ನು ಉಳಿಸಿ ಕೆಟ್ಟ ವಿಚಾರಗಳನ್ನು ದೇವಾಲಯ, ಮಠಗಳಿಗೆ ಬಂದಂತಹ ಸಂದರ್ಭದಲ್ಲಿ ಬಿಟ್ಟು ಹೋಗಬೇಕು. ಪರಮಾತ್ಮನು ಎಲ್ಲರಿಗೂ ಒಂದೇ ರೀತಿಯಲ್ಲಿ ಅಥೈಸಿಕೊಳ್ಳಲು ಸಾಧ್ಯವಿಲ್ಲ. 21ನೇ ಶತಮಾನದಲ್ಲಿಯೂ ಮೂರ್ತಿ ಪೂಜೆ ಆಚರಣೆಯಲ್ಲಿದೆ ಎಂದರೆ ಆ ಮೂರ್ತಿಯಲ್ಲಿನ ಶಕ್ತಿ ದೈವತ್ತವ ಇದೇ ಎನ್ನುವುದನ್ನು ತಿಳಿಯುವ ಅವಶ್ಯಕವಿದೆ. ಧರ್ಮ ಎಂದರೆ ಎಲ್ಲಾ ಮತಗಳು ಇಲ್ಲಿ ನೆಲೆಸಿರುತ್ತವೆ. ಮಾನವನು ಇದರ ಒಳ ಅರ್ಥವನ್ನು ತಿಳಿದು ನಡೆಯಬೇಕು ಎಂದರು.

    ಕಿಚ್ಚು ಹಾಯಿಸುವಿಕೆ:

    ಗ್ರಾಮಸ್ಥೆರೆಲ್ಲಾ ಮಠದ ಆವರಣದಲ್ಲಿ ಸೇರಿ ತಮ್ಮ ರಾಸುಗಳನ್ನು ಸಿಂಗಾರ ಮಾಡಿ ಕಿಚ್ಚು ಹಾಯಿಸುವಿಕೆಗೆ ಸಿದ್ಧರಾದಾಗ ಭತ್ತದ ಒಣ ಹುಲ್ಲನ್ನು ಹಾಕಿ ಪೂಜೆ ಸಲ್ಲಿಸಿದ ಶ್ರೀಗಳು ಕಿಚ್ಚು ಹಚ್ಚಿಸಿದ ತಕ್ಷಣವೇ ಸಿಂಗರಿಸಿದ ರಾಸುಗಳು ಕಿಚ್ಚಿನಲ್ಲಿ ಹಾಯ್ದು ಓಡಿದವು. ದಣಿದು ಬಂದಂತಹ ದನಗಳಿಗೆ ಎಡೆ ಮಾಡಿ ಹಬ್ಬದ ಊಟವನ್ನು ಎಡೆಯ ರೂಪದಲ್ಲಿ ನೀಡಿದರು. ಗ್ರಾಮ ದೇವತೆಯಾದ ಶ್ರೀ ಚೌಡೇಶ್ವರಿ ದೇವಿಯ ದೇವಾಲಯವನ್ನು ಮೂರು ಸುತ್ತು ಸುತ್ತಿ ತಮ್ಮ ತಮ್ಮ ಮನೆಗಳಿಗೆ ತೆರಳುತ್ತವೆ. ಕಾರ್ತಿಕ ಮಾಸದಲ್ಲಿ ಚೆನ್ನಾಗಿ ಮೇಯ್ದು ಮೈತುಂಬಿಕೊಂಡ ದನಗಳಿಗೆ “ ಕಣ್ಣೆಸರಾಗಬಾರದೆಂದು” ಕಿಚ್ಚು ಹಾಯಿಸುತ್ತಾರೆ. ಅಲ್ಲದೇ ದನಕರುಗಳಿಗೆ ಯಾವುದೇ ಸಾಂಕ್ರಾಮಿಕ ರೋಗಗಳು ಬಾರದಿರಲೆಂಬ ಉದ್ದೇಶದಿಂದ ಕಿಚ್ಚು ಹಾಕಲಾದ ಸ್ಥಳದ ಬೂದಿಯನ್ನು ಹೊಯ್ದು ಜಾನವಾರುಗಳಿಗೆ ಸವರುತ್ತಾರೆ. ಮನೆ ಮಂದಿಯೆಲ್ಲ ಬೂದಿಯನ್ನು ವಿಭೂತಿಯಾಗಿ ಬಳಸುತ್ತಾರೆ.

    ಈ ಸಂದರ್ಭದಲ್ಲಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಶೃಂಗೇರಿ ಶಾಖಾಮಠದ ಗುಣನಾಥ ಸ್ವಾಮೀಜಿ ಸೇರಿದಂತೆ ಸಡಗರವನ್ನು ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು, ಗ್ರಾಮಸ್ಥರು ಸೇರಿದ್ದು ಹಬ್ಬದ ವಾತಾವರಣ ಸೃಷ್ಠಿಯಾಗಿತ್ತು. ತದ ನಂತರದಲ್ಲಿ ಎಲ್ಲರಿಗೂ ದಸರೀಘಟ್ಟದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಯವರು ಎಳ್ಳು ಬೆಲ್ಲ, ಪೊಂಗಲ್ ನೀಡಿ ಆಶೀರ್ವದಿಸಿದರು.

    ವರದಿ: ಆನಂದ್ ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ

    July 24, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು…

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.